ತಿರುಪತಿ ಭಕ್ತರ ಸಂಖ್ಯೆ ಏರಿಕೆ, ಹುಂಡಿ ಸಂಗ್ರಹ ಇಳಿಕೆ
ತಿರುಪತಿ, ಅಕ್ಟೋಬರ್ 9: ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನದ ಹುಂಡಿ ಸಂಗ್ರಹದಲ್ಲಿ ಇಳಿಕೆಯಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರ ಸಮೂಹದಲ್ಲಿ ಭಾರಿ ಏರಿಕೆಯಾಗಿದ್ದರೂ, ಕಳೆದ 9 ದಿನಗಳ ವಾರ್ಷಿಕ ಬ್ರಹ್ಮೋತ್ಸವದಲ್ಲಿ ಹುಂಡಿ ಸಂಗ್ರಹದಲ್ಲಿ ಇಳಿಕೆಯಾಗಿದೆ.
ಒಂಬತ್ತು ದಿನಗಳ ಬ್ರಹ್ಮೋತ್ಸವಕ್ಕೆ ಮಂಗಳವಾರ ತೆರೆಬಿದ್ದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದ ಈ ಅವಧಿಯಲ್ಲಿ ಇಲ್ಲಿಗೆ ಭೇಟಿ ನೀಡಿದ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಹಾಗಿದ್ದರೂ ಹುಂಡಿ ಸಂಗ್ರಹದಲ್ಲಿ ಕಡಿಮೆಯಾಗಿದೆ.
9 ದಿನ ನಡೆದ ಬ್ರಹ್ಮೋತ್ಸವದಲ್ಲಿ ಸುಮಾರು 7.7 ಲಕ್ಷ ಭಕ್ತರು ಪಾಲ್ಗೊಂಡಿದ್ದರು. ಕಳೆದ ವರ್ಷ ನಡೆದ ಬ್ರಹ್ಮೋತ್ಸವದಲ್ಲಿ 5.9 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದರು. ಭಕ್ತರ ಸಂಖ್ಯೆ ಸುಮಾರು ಎರಡು ಲಕ್ಷದಷ್ಟು ಹೆಚ್ಚಳವಾಗಿದೆ. ಹಾಗೆಯೇ ಕಳೆದ ವರ್ಷ 2.17 ಲಕ್ಷ ಮಂದಿ ತಿಮ್ಮಪ್ಪನ ಸನ್ನಿಧಾನದಲ್ಲಿ ಮುಡಿ ನೀಡಿದ್ದರು. ಮುಡಿಕೊಟ್ಟವರ ಸಂಖ್ಯೆ ಈ ಬಾರಿ ಶೇ 50ರಷ್ಟು ಹೆಚ್ಚಳವಾಗಿದ್ದು, 3.23 ಲಕ್ಷ ಮಂದಿ ಮುಡಿ ನೀಡಿದ್ದಾರೆ.

ಆದರೆ ಕಳೆದ ವರ್ಷದ ಈ ಸಾಲಿಗೆ ಹೋಲಿಸಿದರೆ ಒಟ್ಟಾರೆ ಹುಂಡಿ ಸಂಗ್ರಹದಲ್ಲಿ 12.75 ಲಕ್ಷ ರೂ. ಕುಸಿತಕಂಡಿದೆ. ಕಳೆದ ವರ್ಷ 20.52 ಕೋಟಿ ರೂ. ಹುಂಡಿ ಹಣ ಸಂಗ್ರಹವಾಗಿತ್ತು. ಈ ಸಾಲಿನಲ್ಲಿ 20.40 ಕೋಟಿ ರೂ. ಹುಂಡಿ ಹಣ ಸಂಗ್ರಹವಾಗಿದೆ.
ಲಡ್ಡು ಹಂಚಿಕೆಯಲ್ಲಿಯೂ ಈ ಬಾರಿ ಏರಿಕೆಯಾಗಿದೆ. ಕಳೆದ ವರ್ಷ 24.01 ಲಡ್ಡುಗಳನ್ನು ಹಂಚಲಾಗಿತ್ತು. ಈ ವರ್ಷ 34.01 ಲಕ್ಷ ಲಡ್ಡುಗಳನ್ನು ಹಂಚಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಲ್ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications