ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಆಂಧ್ರಕ್ಕೆ ಚಂಡಮಾರುತ ಹೊಡೆತ

|
Google Oneindia Kannada News

ಬೆಂಗಳೂರು, ಡಿಸೆಂಬರ್ 13: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 24 ಗಂಟೆಯೊಳಗೆ ಅದು ಚಂಡಮಾರುತವಾಗಿ ಬದಲಾಗಿ ಆಂಧ್ರ ಪ್ರದೇಶದ ಕಡೆ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಆಳ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ಸೃಷ್ಠಿಯಾಗಿದೆ. ಪ್ರಸ್ತುತ ಅದು ಭಾರತದ ಕರಾವಳಿ (ಆಂಧ್ರಪ್ರದೇಶ)ಕ್ಕೆ ಸುಮಾರು 1000 ಕಿ.ಮೀ ದೂರದಲ್ಲಿದ್ದು, ಗಂಟೆಗೆ 120 ಕಿ.ಮೀ ವೇಗದಲ್ಲಿ ಕರಾವಳಿಯತ್ತ ರಭಸವಾಗಿ ದಾವಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಾಯುಭಾರ ಕುಸಿತ: ವಾರಾಂತ್ಯದ ವೇಳೆಗೆ ಬೆಂಗಳೂರಲ್ಲಿ ಮಳೆ ವಾಯುಭಾರ ಕುಸಿತ: ವಾರಾಂತ್ಯದ ವೇಳೆಗೆ ಬೆಂಗಳೂರಲ್ಲಿ ಮಳೆ

ಚಂಡಮಾರುತವು ಆಂಧ್ರಪ್ರದೇಶದ ತೀರಕ್ಕೆ ಹಾನಿ ಮಾಡಲಿದೆ. ಡಿಸೆಂಬರ್ 15 ಮತ್ತು 16ರಂದು ಚಂಡಮಾರುತ ಹೆಚ್ಚು ಭೀಕರ ರೂಪ ತಾಳಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Depression in bay of bengal cyclone forming moving towards Andhra

ರಾಜ್ಯದಲ್ಲಿ ಹಿಂಗಾರು ಚುರುಕು: ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆರಾಜ್ಯದಲ್ಲಿ ಹಿಂಗಾರು ಚುರುಕು: ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಚಂಡಮಾರುತದಿಂದ ಆಂಧ್ರಪ್ರದೇಶದ ಕರಾವಳಿ ಭಾಗ ಹಾಗೂ ತಮಿಳುನಾಡಿನ ಉತ್ತರ ಭಾಗ ಹಾಗೂ ಕರ್ನಾಟಕದ ಉತ್ತರ ಭಾಗದಲ್ಲಿ ಮಳೆ ಆಗುತ್ತದೆ ಎಂದು ಹೇಳಲಾಗಿದೆ.

ಹಿಂಗಾರು ಮಳೆ ಹಿನ್ನಡೆಯಿಂದ ಬಳಲಿದ್ದ ರೈತರಿಗೆ ಸಿಹಿಸುದ್ದಿಹಿಂಗಾರು ಮಳೆ ಹಿನ್ನಡೆಯಿಂದ ಬಳಲಿದ್ದ ರೈತರಿಗೆ ಸಿಹಿಸುದ್ದಿ

ಚಂಡಮಾರುತಕ್ಕೆ ಇನ್ನೂ ಯಾವುದೇ ಹೆಸರು ಇಟ್ಟಿಲ್ಲ ಆದರೆ ಇದಕ್ಕೆ 'ಪೆತಾಯಿ' ಎಂದು ಹೆಸರಿಡಲಾಗುತ್ತದೆ ಎಂಬ ಸುದ್ದಿ ಇದೆ. ಆದರೆ ಇದಿನ್ನೂ ಅಧಿಕೃತವಾಗಿಲ್ಲ.

English summary
Depression in bay of bengal in deep sea. Cyclone is forming and it is moving towards Andhra Pradesh. Tamilnadu, Karnataka will see some rain and Andhra Pradesh will see heavy rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X