ಆನ್ 'ಲೈನ್' ಕಾಟ, ಪುಂಡತನ ತೋರಿದರೆ ಪಕ್ಕಾ ಜೈಲೂಟ!
ಅಮರಾವತಿ, ಡಿಸೆಂಬರ್.13: ನಡುಬೀದಿಯಲ್ಲಿ ಹುಡುಗಿಯರನ್ನು ರೇಗಿಸೋದಲ್ಲ. ಇನ್ನು ಮುಂದೆ ಆನ್ ಲೈನ್ ನಲ್ಲೂ ಹುಡ್ಗೀರಿಗೆ ಲೈನ್ ಹೊಡೆಯುವ ಹಾಗಿಲ್ಲ. ಮಹಿಳೆಯರಿಗೆ ಕಾಟ ಕೊಡುವ ಮುನ್ನ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಜೈಲಿನಲ್ಲಿ ಮುದ್ದೆ ಮುರಿಯಬೇಕಾಗುತ್ತದೆ.
ಹೌದು, ಮಹಿಳಾ ಮತ್ತು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಆಂಧ್ರಪ್ರದೇಶದಲ್ಲಿ ವಿಶೇಷ ಕಾಯ್ದೆಯೊಂದನ್ನು ಜಾರಿಗೊಳಿಸಲಾಗಿದೆ. ಆನ್ ಲೈನ್ ಕಾಮುಕರ ಕಾಟ ತಪ್ಪಿಸುವ ಬಗ್ಗೆ ದಿಶಾ ಕಾಯ್ದೆಯಲ್ಲಿ ಹೇಳಲಾಗಿದೆ. ಇಂದು ಆಂಧ್ರಪ್ರದೇಶ ಸರ್ಕಾರ ಮಂಡಿಸಿದ ದಿಶಾ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.
ಪಶುವೈದ್ಯ ಮೇಲೆ ಕಾಮುಕರು ಎಸಗಿದ ದುಷ್ಕೃತ್ಯಕ್ಕೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ತಮ್ಮ ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಭಾರತೀಯ ಸಂವಿಧಾನದ ಐಪಿಸಿ ಸೆಕ್ಷನ್ 376ರ ಪ್ರಕಾರ ದಿಶಾ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ.

ಆನ್ ಲೈನ್ ನಲ್ಲಿ ಕಾಟ, ಜೈಲೂಟ ಪಕ್ಕಾ!
ದಿಶಾ ಕಾಯ್ದೆ ಪ್ರಕಾರ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಅತ್ಯಾಚಾರದಂತ ಅಪರಾಧಗಳು ಸಾಕ್ಷ್ಯಾಧಾರಗಳ ಸಮೇತ ಸಾಬೀತಾದರೆ 21 ದಿನಗಳಲ್ಲೇ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಬಗ್ಗೆ ಕಾಯ್ದೆಯಲ್ಲಿ ಹೇಳಲಾಗುತ್ತದೆ. ಇದರ ಜೊತೆಗೆ ಆನ್ ಲೈನ್ ಕಾಮುಕರ ಕಾಟಕ್ಕೆ ಕಡಿವಾಣ ಹಾಕುವ ಬಗ್ಗೆಯೂ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ. ಆಂಧ್ರಪ್ರದೇಶ ಸರ್ಕಾರ ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿರಿಸಿದೆ.
ಆನ್ ಲೈನ್ ನಲ್ಲಿ ಮಹಿಳೆಯರಿಗೆ ಕಾಟ ಕೊಡುವ ಭೂಪರಿಗೂ ಬಿಸಿ ಮುಟ್ಟಿಸಲು ತೀರ್ಮಾನಿಸಲಾಗಿದೆ. ಮಹಿಳೆಯರ ದುಂಬಾಲು ಬೀಳುವ ಕಾಮುಕರನ್ನು ಗುರುತಿಸಿ ಜೈಲಿಗೆ ಕಳುಹಿಸಲಾಗುತ್ತದೆ. ಈ ಮೊದಲು ಎರಡು ವರ್ಷವಿದ್ದ ಜೈಲುಶಿಕ್ಷೆ ಪ್ರಮಾಣವನ್ನು ನಾಲ್ಕು ವರ್ಷಕ್ಕೆ ಏರಿಕೆ ಮಾಡಲಾಗಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications