ಆಂಧ್ರಪ್ರದೇಶದಲ್ಲಿ ಅತ್ಯಾಚಾರಿಗಳಿಗೆ 21 ದಿನಗಳಲ್ಲೇ ಗಲ್ಲುಶಿಕ್ಷೆ
ಅಮರಾವತಿ, ಡಿಸೆಂಬರ್.13: ತೆಲಂಗಾಣದಲ್ಲಿ ಪಶುವೈದ್ಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇಡೀ ದೇಶಾದ್ಯಂತ ಸದ್ದು ಮಾಡಿದ್ದು ಹಳೆಯ ವಿಚಾರ. ಈಗ ನೆರೆಯ ರಾಜ್ಯದಲ್ಲಿ ಅಂಥದ್ದೆ ಘಟನೆ ನಡೆದರೆ 21 ದಿನಗಳಲ್ಲೇ ಅಪರಾಧಿಗೆ ಗಲ್ಲುಶಿಕ್ಷೆ ಖಾಯಂ.
ಮಹಿಳೆಯರ ಮೇಲೆ ದೌರ್ಜನ್ಯ ತಡೆಗೆ ನೆರೆಯ ರಾಜ್ಯದಲ್ಲಿ ವಿನೂತನ ಕಾಯ್ದೆಯೊಂದನ್ನು ಜಾರಿಗೊಳಿಸಲಾಗಿದೆ. ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಸರ್ಕಾರ ರೂಪಿಸಿದ ದಿಶಾ ಮಸೂದೆ ಪಾಸ್ ಆಗಿದ್ದು ಕಾಯ್ದೆಯಾಗಿ ಜಾರಿಯಾಗಿದೆ.
ಪಶುವೈದ್ಯ ಮೇಲೆ ಕಾಮುಕರು ಎಸಗಿದ ದುಷ್ಕೃತ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಹಾಗೂ ಪೊಲೀಸರ ಕ್ರಮಕ್ಕೆ ಶಹಬ್ಬಾಶ್ ಎಂದಿದ್ದರು. ಒಂದ ತಂದೆಯಾಗಿ, ಪತಿಯಾಗ, ಸಹೋದರನಾಗಿ ಪಶುವೈದ್ಯೆ ಮೇಲೆ ನಡೆದ ಕ್ರೌರ್ಯವನ್ನು ನಾನು ಖಂಡಿಸುತ್ತೇನೆ ಎಂದಿದ್ದ ಜಗನ್, ತಮ್ಮದೇ ನೇತೃತ್ವದ ಸರ್ಕಾರದಲ್ಲಿ ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿದ್ದಾರೆ.

ವಿಧಾನಸಭೆಯಲ್ಲಿ ಸರ್ಕಾರದ ದಿಶಾ ಕಾಯ್ದೆ ಪಾಸ್
ಆಂಧ್ರಪ್ರದೇಶ ಸರ್ಕಾರ ರಾಜ್ಯದ ಮಹಿಳಾ ಮತ್ತು ಮಕ್ಕಳ ಸುರಕ್ಷತೆ ಹಾಗೂ ದೌರ್ಜನ್ಯ ತಡೆಗೆ ರೂಪಿಸಿದ ಕಾಯ್ದೆಗೆ ಪಶುವೈದ್ಯೆ ದಿಶಾ ಹೆಸರನ್ನೇ ಇರಿಸಲಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸರ್ಕಾರದ ದಿಶಾ ಕಾಯ್ದೆ ಡಿಸೆಂಬರ್.13ರ ಶುಕ್ರವಾರ ಅಂಗೀಕಾರಗೊಂಡಿದೆ.

21 ದಿನಗಳಲ್ಲೇ ಅಪರಾಧಿಗೆ ಗಲ್ಲುಶಿಕ್ಷೆ
ಮಹಿಳೆಯರ ಮೇಲೆ ಕ್ರೌರ್ಯ ಮೆರೆದ ಅತ್ಯಾಚಾರಿಗೆ 21 ದಿನಗಳಲ್ಲೇ ಗಲ್ಲುಶಿಕ್ಷೆ ವಿಧಿಸುವ ಬಗ್ಗೆ ದಿಶಾ ಕಾಯ್ಜೆಯಲ್ಲಿ ಉಲ್ಲೇಖಿಸಲಾಗಿದೆ. ಭಾರತೀಯ ಸಂವಿಧಾನದ ಐಪಿಸಿ ಸೆಕ್ಷನ್ 376ರ ಪ್ರಕಾರ ಸೂಕ್ತ ಸಾಕ್ಷ್ಯಾಧಾರಗಳಿದ್ದಲ್ಲಿ ಅಪರಾಧಿಗೆ ಘಟನೆ ನಡೆದು 21 ದಿನಗಳಲ್ಲಿ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಹೇಳಲಾಗಿದೆ.

7 ದಿನಗಳಲ್ಲಿ ಪ್ರಕರಣದ ಸಂಪೂರ್ಣ ತನಿಖೆ
ಮಹಿಳಾ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳನ್ನು ತುಂಬಾ ದಿನಗಳ ಕಾಲ ಮುಂದುವರಿಸುವಂತಿಲ್ಲ. ಘಟನೆ ನಡೆದು 7 ದಿನಗಳಲ್ಲೇ ತನಿಖೆಯನ್ನು ಮುಕ್ತಾಯಗೊಳಿಸಬೇಕು. ಇನ್ನು, 14 ದಿನಗಳಲ್ಲಿ ಆರೋಪಿಗಳ ಸಂಪೂರ್ಣ ವಿಚಾರಣೆ ನಡೆಯಬೇಕು. ನಂತರ ಸೂಕ್ತ ಸಾಕ್ಷ್ಯಾಧಾರಗಳಿದ್ದಲ್ಲಿ 21 ದಿನಗಳೊಳಗೆ ಅಪರಾಧಿಗೆ ಗಲ್ಲುಶಿಕ್ಷೆ ವಿಧಿಸುವ ಬಗ್ಗೆ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ.

ಅಪ್ರಾಪ್ತರಿಗೆ ಕಿರುಕುಳ ನೀಡಿದರೆ ಜೀವಾವಧಿ
ಮಹಿಳೆಯರಷ್ಟೇ ಅಲ್ಲ ಅಪ್ರಾಪ್ತರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ಬಗ್ಗೆಯೂ ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ. ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 21 ದಿನಗಳಲ್ಲೇ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಕಾಯ್ದೆಯಲ್ಲಿ ಹೇಳಲಾಗಿದೆ. ಘಟನೆ ನಡೆದು 7 ದಿನಗಳಲ್ಲಿ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಬೇಕು. 14 ದಿನಗಳಲ್ಲಿ ಆರೋಪಿಗಳ ವಿಚಾರಣೆಯನ್ನು ಮುಗಿಸಬೇಕು. 21 ದಿನಗಳೊಳಗೆ ಸೂಕ್ತ ಸಾಕ್ಷ್ಯಾಧಾರಗಳು ಸಿಕ್ಕಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಕಾಯ್ದೆ ಹೇಳುತ್ತದೆ.

ಆನ್ ಲೈನ್ ನಲ್ಲಿ ಕಾಟ, ಜೈಲೂಟ ಪಕ್ಕಾ!
ಆಂಧ್ರಪ್ರದೇಶ ಸರ್ಕಾರ ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿರಿಸಿದೆ. ಆನ್ ಲೈನ್ ನಲ್ಲಿ ಮಹಿಳೆಯರಿಗೆ ಕಾಟ ಕೊಡುವ ಭೂಪರಿಗೂ ಬಿಸಿ ಮುಟ್ಟಿಸಲು ತೀರ್ಮಾನಿಸಲಾಗಿದೆ. ಮಹಿಳೆಯರ ದುಂಬಾಲು ಬೀಳುವ ಕಾಮುಕರನ್ನು ಗುರುತಿಸಿ ಜೈಲಿಗೆ ಕಳುಹಿಸಲಾಗುತ್ತದೆ.

ಆಂಧ್ರದ ಪ್ರತಿ ಜಿಲ್ಲೆಯಲ್ಲೂ ವಿಶೇಷ ನ್ಯಾಯಾಲಯ
ಮಹಿಳಾ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ಆಂಧ್ರಪ್ರದೇಶದ ಪ್ರತಿ ಜಿಲ್ಲೆಗಳಲ್ಲೂ ವಿಶೇಷ ನ್ಯಾಯಾಲಯ ತೆರೆಯಲು ತೀರ್ಮಾನಿಸಲಾಗಿದೆ. ಈ ಕೋರ್ಟ್ ಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ವಿಚಾರಣೆ ನಡೆಸಲಾಗುತ್ತದೆ. ಪೋಕ್ಸೋ ಕಾಯ್ದೆ ಅಡಿ ಬರುವ ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಆಸಿಡ್ ದಾಳಿ, ಸಾಮಾಜಿಕ ಜಾಲತಾಣಗಳಲ್ಲಿ ಕಿರುಕುಳ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿಚಾರಣೆ ನಡೆಸಲಾಗುತ್ತದೆ. ಇನ್ನು, ಪ್ರಕರಣಗಳ ಇತ್ಯರ್ಥ ಮಿತಿಯನ್ನು ದಿಶಾ ಕಾಯ್ದೆಯಡಿ ಮೂರು ತಿಂಗಳಿಗೆ ಇಳಿಕೆ ಮಾಡಲಾಗಿದೆ.

ಮಹಿಳೆಯರ ರಕ್ಷಣೆಗೆ ವಿಶೇಷ ಪೊಲೀಸ್ ಪಡೆ
ಆಂಧ್ರಪ್ರದೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಪರಾಧ ಕಾಯ್ದೆ 2019ರ ಅಡಿ ಪ್ರತಿಜಿಲ್ಲೆಯಲ್ಲೂ ಮಹಿಳೆಯರ ರಕ್ಷಣಾ ದೃಷ್ಟಿಯಿಂದ ವಿಶೇಷ ಪೊಲೀಸ್ ಪಡೆಯನ್ನು ನಿಯೋಜಿಸಲಾಗುತ್ತದೆ. ಡಿಎಸ್ ಪಿ ನೇತೃತ್ವದಲ್ಲಿ ವಿಶೇಷ ಪೊಲೀಸ್ ಪಡೆ ಕಾರ್ಯ ನಿರ್ವಹಿಸಲಿದೆ. ಇನ್ನು, ಪ್ರತಿ ಜಿಲ್ಲಾ ಕೋರ್ಟ್ ಗಳಲ್ಲಿ ಇಂಥ ಪ್ರಕರಣಗಳ ಬಗ್ಗೆ ವಾದ ಮಂಡಿಸಲು ಸರ್ಕಾರವೇ ವಕೀಲರನ್ನು ನೇಮಿಸಲು ಮುಂದಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications