100 ಅಡಿ ಆಳದ ಕಮರಿಗೆ ಉರುಳಿದ ಬಸ್: ಎಂಟು ಪ್ರವಾಸಿಗರ ಸಾವು
ಅಮರಾವತಿ, ಫೆಬ್ರವರಿ 12: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಅರಕು ಘಾಟ್ ರಸ್ತೆಯ ಕಣಿವೆಯೊಂದಕ್ಕೆ ಟೂರಿಸ್ಟ್ ಬಸ್ ಒಂದು ಉರುಳಿಬಿದ್ದು ಕನಿಷ್ಠ ಎಂಟು ಮಂದಿ ಜೀವ ಕಳೆದುಕೊಂಡ ದುರ್ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರೆಲ್ಲರೂ ಹೈದರಾಬಾದ್ಗೆ ಸೇರಿದವರಾಗಿದ್ದಾರೆ. ಈ ದುರಂತದಲ್ಲಿ ಇತರೆ ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಹೈದರಾಬಾದ್ನ ದಿನೇಶ್ ಟ್ರಾವೆಲ್ಸ್ಗೆ ಸೇರಿದ ಈ ಟೂರಿಸ್ಟ್ ಬಸ್, ಅರಕು ಕಣಿವೆಯ ಸೊಬಗನ್ನು ಪ್ರವಾಸಿಗರಿಗೆ ತೋರಿಸಲು ಸಾಗುತ್ತಿತ್ತು. ಅನಂತಗಿರಿ ಗ್ರಾಮದ ಸಮೀಪದಲ್ಲಿನ ದುಮುಕು ಎಂಬ ಸಣ್ಣಹಳ್ಳಿ ಬಳಿಯ ಕಡಿದಾದ ತಿರುವು ತೆಗೆದುಕೊಳ್ಳುತ್ತಿತ್ತು. ಆಗ ಅದು ಸುಮಾರು 100 ಅಡಿ ಆಳವಾದ ಕಮರಿಗೆ ಉರುಳಿಬಿದ್ದಿದೆ.
ಬಸ್ನಲ್ಲಿ 30 ಜನರು ಪ್ರವಾಸಿಗರಿದ್ದು ಎಲ್ಲರೂ ಹೈದರಾಬಾದ್ನ ಶೈಕ್ಪೇಟ್ನವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ಗಾಯಾಳುಗಳ ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಂಬುಲೆನ್ಸ್ನಲ್ಲಿ ವಿಶಾಖಪಟ್ಟಣಂನ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅವಘಡದ ಬಗ್ಗೆ ಸಚಿವ ಅವಂತಿ ಶ್ರೀನಿವಾಸ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ವಿಜಯ್ ಚಾಂದ್ ಅವರೊಂದಿಗೆ ಮಾತನಾಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
-
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications