ಆಂಧ್ರಕ್ಕೆ 'ಕಿಂಗ್' ಆಗಲು ಹೊರಟ ಪವನ್ ಕಲ್ಯಾಣ್ ಗೆ ನಿರಾಶೆ
ಅಮರಾವತಿ, ಮೇ 20: ತೆಲುಗು ಚಿತ್ರರಂಗದ ಪವರ್ ಸ್ಟಾರ್, ಜನಸೇನಾ ಪಕ್ಷದ ಸ್ಥಾಪಕ ಪವನ್ ಕಲ್ಯಾಣ್ ಅವರ ಚುನಾವಣಾ ರಾಜಕೀಯದ ಆರಂಭದ ಹೆಜ್ಜೆಯಲ್ಲೇ ಮುಗ್ಗರಿಸಲಿದ್ದಾರೆ. ಆಂಧ್ರಪ್ರದೇಶ ವಿಧಾನಸಭೆಗಾಗಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿದಿರುವ ಪವನ್ ಗೆ ಮೇ 19ರಂದು ಹೊರ ಬಂದ ಎಕ್ಸಿಟ್ ಪೋಲ್ ನಿಂದ ಕಹಿ ಸುದ್ದಿ ಬಂದಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಬಹುತೇಕ ಎಕ್ಸಿಟ್ ಪೋಲ್ ಗಳಲ್ಲಿ ವೈಎಸ್ಸಾರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಕೆಲವು ಸಮೀಕ್ಷೆಗಳಲ್ಲಿ ಚಂದ್ರಬಾಬು ನಾಯ್ಡು ಅವರು ಅಧಿಕಾರ ಉಳಿಸಿಕೊಳ್ಳಲಿದ್ದಾರೆ ಎಂದು ಬಂದಿದೆ. ಆದರೆ, ಪವನ್ ಕಲ್ಯಾಣ್ ಅವರು ಕಿಂಗ್ ಅಥವಾ ಕಿಂಗ್ ಮೇಕರ್ ಆಗಲು ಸಾಧ್ಯವಿಲ್ಲ ಎಂದು ಎಕ್ಸಿಟ್ ಪೋಲ್ ಹೇಳಿದೆ.
ಜನಸೇನಾ ಪಕ್ಷಕ್ಕೆ 1 ರಿಂದ 4 ಸ್ಥಾನಗಳು ಮಾತ್ರ ಸಿಗಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಆದರೆ, ಸ್ವಾಗತಾರ್ಹ ಸಂಗತಿಯೆಂದರೆ ಶೇ 10ರಷ್ಟು ಮತ ಗಳಿಸಲಿದೆ ಎಂಬ ವರದಿ ಬಂದಿದೆ. ಈಗಷ್ಟೇ ಎಂಟ್ರಿ ಕೊಟ್ಟಿರುವ ರಾಜಕೀಯ ಪಕ್ಷಕ್ಕೆ ಇದು ಬಹು ದೊಡ್ಡ ಹೆಜ್ಜೆ ಎನ್ನಬಹುದು.

ಜನಸೇನಾ 140 ವಿಧಾನಸಭಾ ಕ್ಷೇತ್ರ ಹಾಗೂ 18 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಆಂಧ್ರಪ್ರದೇಶದಲ್ಲಿ ಏಪ್ರಿಲ್ 11ರಂದು 175 ಸದಸ್ಯರ ವಿಧಾನಸಭೆ ಹಾಗೂ 25 ಸದಸ್ಯರ ಲೋಕಸಭೆಗೆ ಚುನಾವಣೆ ನಡೆಸಲಾಯಿತು. ಮೇ 23ರಂದು ಫಲಿತಾಂಶ ಹೊರ ಬರಲಿದೆ.
ಮಿಕ್ಕಂತೆ ಆಂಧ್ರಪ್ರದೇಶದ 25 ಲೋಕಸಭಾ ಕ್ಷೇತ್ರಗಳ ಸಮೀಕ್ಷೆಯಂತೆ, ಬಿಜೆಪಿ ಸಖ್ಯ ಕಳೆದುಕೊಂಡ ಬಳಿಕ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ ಪಕ್ಷ(ಟಿಡಿಪಿ) ತನ್ನ ಪ್ರಾಬಲ್ಯ ಕಳೆದುಕೊಂಡಿದೆ. ಕಳೆದ ಚುನಾವಣೆಯಲ್ಲಿ ಟಿಡಿಪಿ ಆಂಧ್ರದಲ್ಲಿ 15, ತೆಲಂಗಾಣದಲ್ಲಿ 1 ಸ್ಥಾನ ಗಳಿಸಿತ್ತು. ಈ ಬಾರಿ ಕೇವಲ 6 ಸ್ಥಾನಕ್ಕೆ ಕುಸಿಯಲಿದೆ. ಟಿಡಿಪಿಯ ನಷ್ಟ, ವೈಎಸ್ಸಾರ್ ಕಾಂಗ್ರೆಸ್ಸಿಗೆ ಲಾಭವಾಗಲಿದೆ. ವೈಸ್ಸಾರ್ ಕಾಂಗ್ರೆಸ್ 16 ಸ್ಥಾನ ಗಳಿಸಲಿದೆ(2014ರಲ್ಲಿ 8 ಗಳಿಸಿತ್ತು), ಬಿಜೆಪಿ 2014ರಲ್ಲಿ ಗಳಿಸಿದ್ದ 2 ಸ್ಥಾನವನ್ನು ಈ ಬಾರಿ ಕಳೆದುಕೊಳ್ಳಲಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications