ಕೊರೊನಾದಿಂದ ಸಾವಿಗೆ ಹೆದರಿ 15 ತಿಂಗಳಿನಿಂದ ಮನೆಯೊಳಗೇ ಸೇರಿಕೊಂಡ ಕುಟುಂಬ
ಅಮರಾವತಿ, ಜುಲೈ 22: ಕೊರೊನಾ ಸೋಂಕಿನಿಂದ ಸಾವನ್ನಪ್ಪುವ ಭಯದಿಂದ ಕುಟುಂಬ ಸದಸ್ಯರೆಲ್ಲರೂ ಹದಿನೈದು ತಿಂಗಳಿನಿಂದ ಮನೆಯೊಳಗೇ ಬಂಧಿಯಾಗಿರುವ ಸಂಗತಿ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದಲ್ಲಿ ಕಡಾಲಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಪೊಲೀಸರು, ಒಳಗೇ ಸೇರಿಕೊಂಡಿದ್ದ ಕುಟುಂಬದ ಮೂವರನ್ನು ಹೊರಕರೆತಂದು ರಕ್ಷಣೆ ಮಾಡಿದ್ದಾರೆ.
ಕಳೆದ ವರ್ಷ ತಮ್ಮ ನೆರೆ ಮನೆಯವರೊಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ನಂತರ, ಕೊರೊನಾ ಭಯದಿಂದ ರುತಮ್ಮ (50), ಕಾಂತಮಣಿ (32) ಹಾಗೂ ರಾಣಿ (30) ಎಂಬ ಮೂವರು ಮನೆಯೊಳಗೆ ತಮ್ಮನ್ನು ತಾವೇ ಬಂಧಿಸಿಕೊಂಡಿದ್ದಾರೆ.

ಸುಮಾರು ಹದಿನೈದು ತಿಂಗಳಿನಿಂದಲೂ ಮನೆ ಬಾಗಿಲು ತೆರೆದಿಲ್ಲ. ಅತಿ ಪುಟ್ಟ ಮನೆಯೊಳಗೇ ಈ ಮೂವರೂ ಕೂಡಿಕೊಂಡಿದ್ದಾರೆ ಎಂದು ಕಡಾಲಿ ಗ್ರಾಮ ಸರಪಂಚ್ ಚೊಪ್ಪಾಲ ಗುರುನಾಥ್ ತಿಳಿಸಿದ್ದಾರೆ.
ಸರ್ಕಾರಿ ಯೋಜನೆಯಡಿಯಲ್ಲಿ ವಸತಿ ಅನುಷ್ಠಾನ ಸಂಬಂಧ ಈ ಕುಟುಂಬದವರ ಹೆಬ್ಬೆಟ್ಟಿನ ಗುರುತು ಪಡೆದುಕೊಳ್ಳಲು ಮನೆ ಬಳಿ ಆಶಾ ಕಾರ್ಯಕರ್ತರು ಹೋದಾಗ ಈ ಸಂಗತಿ ಬೆಳಕಿಗೆ ಬಂದಿದೆ. ಅವರು ಆನಂತರ ಗ್ರಾಮದ ಇನ್ನಿತರರಿಗೆ ವಿಷಯ ತಿಳಿಸಿದ್ದಾರೆ.
"ರುತ್ರಮ್ಮ ಹಾಗೂ ಅವರ ಇಬ್ಬರು ಮಕ್ಕಳು ಇಲ್ಲಿ ನೆಲೆಸಿದ್ದಾರೆ. ಕೊರೊನಾ ಭಯದಿಂದ ತಮ್ಮನ್ನು ತಾವೇ ಲಾಕ್ ಮಾಡಿಕೊಂಡು ಒಳಗೆ ಸೇರಿಕೊಂಡಿದ್ದಾರೆ. ಆಶಾ ಕಾರ್ಯಕರ್ತರು ಮನೆ ಬಳಿ ಹೋದಾಗ ಯಾರೂ ಪ್ರತಿಕ್ರಿಯೆ ನೀಡಿಲ್ಲ. ಕಿಟಕಿಯಿಂದ ನೋಡಿದಾಗ, ಅವರ ಸ್ಥಿತಿ ಕಂಡುಬಂದಿದೆ. ಅವರನ್ನು ಪ್ರಶ್ನೆ ಮಾಡಿದರೆ, "ನಾವು ಹೊರಗೆ ಬಂದರೆ ಸಾಯುತ್ತೇವೆ. ಬರುವುದಿಲ್ಲ" ಎಂದು ಉತ್ತರಿಸಿರುವುದಾಗಿ ಸರಪಂಚ್ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರ ತಂಡ ಬಂದು ಈ ಕುಟುಂಬದವರನ್ನು ರಕ್ಷಿಸಿದೆ. ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಎರಡು ಮೂರು ದಿನಗಳಾಗಿದ್ದರೆ ಅವರು ಸಾಯುವ ಸಾಧ್ಯತೆಯೇ ಹೆಚ್ಚಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications