ಕೊರೊನಾದಿಂದ ಸಾವಿಗೆ ಹೆದರಿ 15 ತಿಂಗಳಿನಿಂದ ಮನೆಯೊಳಗೇ ಸೇರಿಕೊಂಡ ಕುಟುಂಬ
ಅಮರಾವತಿ, ಜುಲೈ 22: ಕೊರೊನಾ ಸೋಂಕಿನಿಂದ ಸಾವನ್ನಪ್ಪುವ ಭಯದಿಂದ ಕುಟುಂಬ ಸದಸ್ಯರೆಲ್ಲರೂ ಹದಿನೈದು ತಿಂಗಳಿನಿಂದ ಮನೆಯೊಳಗೇ ಬಂಧಿಯಾಗಿರುವ ಸಂಗತಿ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದಲ್ಲಿ ಕಡಾಲಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಪೊಲೀಸರು, ಒಳಗೇ ಸೇರಿಕೊಂಡಿದ್ದ ಕುಟುಂಬದ ಮೂವರನ್ನು ಹೊರಕರೆತಂದು ರಕ್ಷಣೆ ಮಾಡಿದ್ದಾರೆ.
ಕಳೆದ ವರ್ಷ ತಮ್ಮ ನೆರೆ ಮನೆಯವರೊಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ನಂತರ, ಕೊರೊನಾ ಭಯದಿಂದ ರುತಮ್ಮ (50), ಕಾಂತಮಣಿ (32) ಹಾಗೂ ರಾಣಿ (30) ಎಂಬ ಮೂವರು ಮನೆಯೊಳಗೆ ತಮ್ಮನ್ನು ತಾವೇ ಬಂಧಿಸಿಕೊಂಡಿದ್ದಾರೆ.

ಸುಮಾರು ಹದಿನೈದು ತಿಂಗಳಿನಿಂದಲೂ ಮನೆ ಬಾಗಿಲು ತೆರೆದಿಲ್ಲ. ಅತಿ ಪುಟ್ಟ ಮನೆಯೊಳಗೇ ಈ ಮೂವರೂ ಕೂಡಿಕೊಂಡಿದ್ದಾರೆ ಎಂದು ಕಡಾಲಿ ಗ್ರಾಮ ಸರಪಂಚ್ ಚೊಪ್ಪಾಲ ಗುರುನಾಥ್ ತಿಳಿಸಿದ್ದಾರೆ.
ಸರ್ಕಾರಿ ಯೋಜನೆಯಡಿಯಲ್ಲಿ ವಸತಿ ಅನುಷ್ಠಾನ ಸಂಬಂಧ ಈ ಕುಟುಂಬದವರ ಹೆಬ್ಬೆಟ್ಟಿನ ಗುರುತು ಪಡೆದುಕೊಳ್ಳಲು ಮನೆ ಬಳಿ ಆಶಾ ಕಾರ್ಯಕರ್ತರು ಹೋದಾಗ ಈ ಸಂಗತಿ ಬೆಳಕಿಗೆ ಬಂದಿದೆ. ಅವರು ಆನಂತರ ಗ್ರಾಮದ ಇನ್ನಿತರರಿಗೆ ವಿಷಯ ತಿಳಿಸಿದ್ದಾರೆ.
"ರುತ್ರಮ್ಮ ಹಾಗೂ ಅವರ ಇಬ್ಬರು ಮಕ್ಕಳು ಇಲ್ಲಿ ನೆಲೆಸಿದ್ದಾರೆ. ಕೊರೊನಾ ಭಯದಿಂದ ತಮ್ಮನ್ನು ತಾವೇ ಲಾಕ್ ಮಾಡಿಕೊಂಡು ಒಳಗೆ ಸೇರಿಕೊಂಡಿದ್ದಾರೆ. ಆಶಾ ಕಾರ್ಯಕರ್ತರು ಮನೆ ಬಳಿ ಹೋದಾಗ ಯಾರೂ ಪ್ರತಿಕ್ರಿಯೆ ನೀಡಿಲ್ಲ. ಕಿಟಕಿಯಿಂದ ನೋಡಿದಾಗ, ಅವರ ಸ್ಥಿತಿ ಕಂಡುಬಂದಿದೆ. ಅವರನ್ನು ಪ್ರಶ್ನೆ ಮಾಡಿದರೆ, "ನಾವು ಹೊರಗೆ ಬಂದರೆ ಸಾಯುತ್ತೇವೆ. ಬರುವುದಿಲ್ಲ" ಎಂದು ಉತ್ತರಿಸಿರುವುದಾಗಿ ಸರಪಂಚ್ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರ ತಂಡ ಬಂದು ಈ ಕುಟುಂಬದವರನ್ನು ರಕ್ಷಿಸಿದೆ. ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಎರಡು ಮೂರು ದಿನಗಳಾಗಿದ್ದರೆ ಅವರು ಸಾಯುವ ಸಾಧ್ಯತೆಯೇ ಹೆಚ್ಚಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications