ಜಗನ್ ರೆಡ್ಡಿ ಕ್ರೈಸ್ತ ಮತದಿಂದ ಹಿಂದುವಾಗಿ ಮತಾಂತರವಾಗಿದ್ದು ನಿಜಾನಾ?
Recommended Video
ಆಂಧ್ರಪ್ರದೇಶದ ರಾಜಕೀಯದಲ್ಲಿ ಬಿರುಗಾಳಿ ಬೀಸುವಂತೆ ಮಾಡಿದ ವೈಎಸ್ ಆರ್ ಕಾಂಗ್ರೆಸ್ ನ ವೈ ಎಸ್ ಜಗನ್ಮೋಹನ್ ರೆಡ್ಡಿ ಕ್ರೈಸ್ತ ಮತದಿಂದ ಹಿಂದುವಾಗಿ ಮತಾಂತರವಾಗಿದ್ದಾರೆ ಎಂಬ ಸುದ್ದಿ ಫಲಿತಾಂಶದ ದಿನದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು.
ಅವರು ಕೇಸರಿ ಬಟ್ಟೆ ತೊಟ್ಟು, ನದಿಯಲ್ಲಿ ಮುಳುಗೇಳುತ್ತಿರುವ ಚಿತ್ರವೂ ವೈರಲ್ ಆಗಿತ್ತು. ಆದರೆ ಈ ಕುರಿತು ಸತ್ಯಾಸತ್ಯ ತಿಳಿಸುವ ವರದಿಯನ್ನು 'ಇಂಡಿಯಾ ಟುಡೆ' ಪ್ರಕಟಿಸಿದ್ದು, ಜಗನ್ ಹಿಂದುವಾಗಿ ಮತಾಂತರವಾಗಿದ್ದು ಸುಳ್ಳುಸುದ್ದಿ ಎಂದು ಅದು ಹೇಳಿದೆ.
ಜಗನ್ ರೆಡ್ಡಿ ಆವರು ಹೋಮವೊಂದರಲ್ಲಿ ಪಾಲ್ಗೊಂಡಿರುವ ವಿಡಿಯೋವನ್ನು ಮನೋಜ್ ನಾಯರ್ ಎಂಬುವವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು. ಆ ವಿಡಿಯೋ ಪೋಸ್ಟ್ ಆದ ಕೆಲವೇ ಸಮಯದಲ್ಲಿ ಸಾವಿರಾರು ಜನ ಅದನ್ನು ಶೇರ್ ಮಾಡಿದ್ದರು.

ಹತ್ತು ನಿಮಿಷದ ಈ ವಿಡಿಯೋದಲ್ಲಿ ಪುರೋಹಿತರೊಬ್ಬರು ಜಗನ್ ಅವರಿಗೆ ಕೆಲವು ಸೂಚನೆಗಳನ್ನು ನೀಡುತ್ತಿದ್ದು, ಅವರು ಅದನ್ನು ಪಾಲಿಸುತ್ತಿರುವ ದೃಶ್ಯ ಸೆರೆಯಾಗಿತ್ತು. ಇದನ್ನೇ ಮತಾಂತರದ ಕ್ಷಣಗಳು ಎಂದು ಹೇಳಲಾಗಿತ್ತು. ಆದರೆ ಇಂಡಿಯಾ ಟುಡೆ ಈ ಕುರಿತು ಮಾಹಿತಿ ಕಲೆ ಹಾಕಿದ್ದು, ಈ ವಿಡಿಯೋ ಆಗಸ್ಟ್ 10, 2016 ರಲ್ಲಿ ಹೃಷಿಕೇಶದಲ್ಲಿ ಚಿತ್ರೀಕರಿಸಿದ್ದು ಎಂಬುದು ತಿಳಿದುಬಂದಿದೆ. ಇದು ಮತಾಂತರದ ವಿಡಿಯೋವು ಅಲ್ಲ ಎಂದು ಅದು ಸ್ಪಷ್ಟಪಡಿಸಿದೆ.
ಫಲಿತಾಂಶದ ನಂತರ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದ ಸಮಯದಲ್ಲಿ ಜಗನ್ ಅವರು, "ನಾನು ಬೈಬಲ್ ಓದುತ್ತೇನೆ. ದೇವರು ಎಲ್ಲವನ್ನೂ ನಿರ್ಧರಿಸುತ್ತಾನೆ" ಎಂದಿದ್ದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications