ಪಶುವೈದ್ಯೆ 'ಹತ್ಯಾಚಾರಿ'ಗಳಿಗೆ ಗುಂಡೇಟು ಕೊಟ್ಟಿದ್ದಕ್ಕೆ ಭೇಷ್!
ಅಮರಾವತಿ, ಡಿಸೆಂಬರ್.09: ತೆಲಂಗಾಣದಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಖಾಕಿ ಗುಂಡೇಟಿನ ಶಿಕ್ಷೆ ನೀಡಿದೆ. ಪೊಲೀಸರ ಈ ಕಾರ್ಯಕ್ಕೆ ದೇಶಾದ್ಯಂತ ಶ್ಲಾಘನೆ ವ್ಯಕ್ತವಾಗಿತ್ತು. ಇದೀಗ ತೆಲಂಗಾಣ ಪೊಲೀಸರು ಹಾಗೂ ಸರ್ಕಾರದ ನಡೆಯನ್ನು ನೆರೆಯ ರಾಜ್ಯದ ಮುಖ್ಯಮಂತ್ರಿಗಳೇ ಮೆಚ್ಚಿಕೊಂಡಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ತೆಲಂಗಾಣ ಪೊಲೀಸರು ನಡೆಸಿದ ಎನ್ ಕೌಂಟರ್ ಗೆ ಹ್ಯಾಟ್ಸಾಫ್ ಎಂದಿದ್ದಾರೆ. ಇದರ ಜೊತೆಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೂ ಧನ್ಯವಾದ ಅರ್ಪಿಸಿದ್ದಾರೆ.
ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ತೆಲಂಗಾಣದಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದೇನೆ. ಟಿವಿ ಹಾಗೂ ಪತ್ರಿಕೆಗಳಲ್ಲಿ ಈ ಬಗ್ಗೆ ನೋಡಿದ್ದೇನೆ. ಆ ಹೆತ್ತವರ ನೋವು ಏನು ಎಂಬುದನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಈ ಪ್ರಕರಣದಲ್ಲಿ ತೆಲಂಗಾಣ ಸರ್ಕಾರ ಹಾಗೂ ಪೊಲೀಸರು ತೋರಿದ ದಿಟ್ಟತನಕ್ಕೆ ನನ್ನ ಸಲಾಂ ಎಂದು ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ನಾನೂ ಇಬ್ಬರು ಹೆಣ್ಣುಮಕ್ಕಳ ತಂದೆ:
ನನಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಒಬ್ಬ ತಂಗಿಯ ಅಣ್ಣನಾಗಿ, ಒಬ್ಬ ಗಂಡನಾಗಿ ಹಾಗೂ ಇಬ್ಬರು ಮಕ್ಕಳ ತಂದೆಯಾಗಿ ಇಂಥ ಹೆತ್ತವರ ನೋವು ನನಗೆ ಅರ್ಥವಾಗುತ್ತದೆ. ಪಶುವೈದ್ಯೆ ಮೇಲೆ ದುಷ್ಟರು ನಡೆಸಿದ ರಾಕ್ಷಣ ಕೃತ್ಯಕ್ಕೆ ಕ್ಷಮೆಯೇ ಇಲ್ಲ ಎಂದು ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ಕಳೆದ ಡಿಸೆಂಬರ್.06ರ ಶುಕ್ರವಾರವಷ್ಟೇ ಹೈದ್ರಾಬಾದ್ ಹೊರವಲಯ ಚಟಾನ್ ಪಲ್ಲಿ ಬಳಿ ಮಧ್ಯರಾತ್ರಿ 2.30ರ ಸಮಯದಲ್ಲಿ ಸ್ಥಳ ಮಹಜರುಗೆ ಆರೋಪಗಳನ್ನು ಕರೆದುಕೊಂಡು ಹೋಗಲಾಗಿತ್ತು. ಇದೇ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದರು. ನಾಲ್ವರ ಪೈಕಿ ಇಬ್ಬರು ಪೊಲೀಸರ ಪಿಸ್ತೂಲ್ ಕಿತ್ತುಕೊಂಡರು. ಇದರಿಂದ ಬೆದರಿದ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಫೈರಿಂಗ್ ನಡೆಸಿದರು. ಈ ವೇಳೆ ಪೊಲೀಸರು ನಡೆಸಿದ ಎನ್ ಕೌಂಟರ್ ನಲ್ಲಿ ನಾಲ್ವರು ಆರೋಪಿಗಳು ಬಲಿಯಾಗಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications