ಜಗನ್ ಕ್ಯಾಬಿನೆಟ್ ನಲ್ಲಿ ಸಿಗದ ಸ್ಥಾನ, ಬೇಸತ್ತ ನಟಿ ರೋಜಾ ಮಾಡಿದ್ದೇನು?
ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ನಟಿ, ವೈಎಸ್ಸಾರ್ ಸಿಪಿ ನಾಯಕಿ ರೋಜಾ ಅವರು ನಗರಿ ವಿಧಾನಸಭಾ ಕ್ಷೇತ್ರದಿಂದ ಮರು ಆಯ್ಕೆಯಾಗಿದ್ದಾರೆ. ಮರು ಆಯ್ಕೆಯಾದ ಬಳಿಕ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಚಿವ ಸಂಪುಟ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಜಗನ್ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಕ್ಕಿಲ್ಲ.
ಜಗನ್ಮೋಹನ್ ರೆಡ್ಡಿಯವರ ವೈ.ಎಸ್.ಆರ್.ಕಾಂಗ್ರೆಸ್ ಪಕ್ಷದಿಂದ ನಗರಿ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ರೋಜಾ ಅವರು ರೋಚಕ ಗೆಲುವು ಸಾಧಿಸಿದ ಬಳಿಕ ಮಾತನಾಡಿ, ನಾನು ಪಕ್ಷಕ್ಕೆ 'ಐರನ್ ಲೆಗ್' ದುರಾದೃಷ್ಟವಂತೆ ಎಂದು ಜರೆಯಲಾಗಿತ್ತು. ಆದರೆ, ನಾನು 'ಗೋಲ್ಡನ್ ಲೆಗ್' ಅದೃಷ್ಟವಂತೆ ಎಂದು ಸಾಬೀತು ಮಾಡಿದ್ದೇನೆ ಎಂದಿದ್ದರು.
2009ರಲ್ಲಿ ತೆಲುಗುದೇಶಂ ಪಕ್ಷದ ಮಹಿಳಾ ವಿಭಾಗದ ಅಧ್ಯಕ್ಷರಾಗಿದ್ದ ರೋಜಾ ಅವರು ಆ ವರ್ಷ ಸೋಲು ಕಂಡಿದ್ದರಿಂದ 'ಐರನ್ ಲೆಗ್ ' ಎಂದು ಎಲ್ಲರೂ ಜರೆದಿದ್ದರು. ನಂತರ ತೆಲುಗುದೇಶಂ ಪಕ್ಷವನ್ನು ಆಗಸ್ಟ್ 2009ರಲ್ಲಿ ತೊರೆದು ತಕ್ಷಣವೇ ವೈಎಸ್ಸಾರ್ ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು.

ಬೇಸತ್ತ ರೋಜಾ ಫೋನ್ ಸ್ವಿಚ್ಡ್ ಆಫ್
ವೈಎಸ್ಸಾರ್ ಕಾಂಗ್ರೆಸ್ ಪಕ್ಷದ ನೂತನ ಶಾಸಕಿಯಾಗಿ ಆರ್ ಕೆ ರೋಜಾ ಅವರಿಗೂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಚಿವ ಸಂಪುಟ ವಿಸ್ತರಣೆ ಸಮಾರಂಭಕ್ಕೆ ಹಾಜರಾಗಬೇಕಿತ್ತು. ಶನಿವಾರದಂದು 25 ಮಂದಿ ಶಾಸಕರನ್ನು ತಮ್ಮ ಸಂಪುಟಕ್ಕೆ ಜಗನ್ ಸೇರಿಸಿಕೊಂಡರು. ಆದರೆ, ಸಂಪುಟದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಾತ್ರಿಯಾಗುತ್ತಿದ್ದಂತೆ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ, ವೈಎಸ್ಸಾರ್ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಸಂಪರ್ಕಕ್ಕೂ ಸಿಗುತ್ತಿಲ್ಲ.

ಜಾತಿ ಲೆಕ್ಕಾಚಾರದಿಂದ ಕೈ ತಪ್ಪಿದ ಅವಕಾಶ
ರೆಡ್ಡಿ ಸಮುದಾಯಕ್ಕೆ ಸೇರಿರುವ ರೋಜಾ ಅವರಿಗೆ ಸ್ಥಾನ ಸಿಗದೆ ಪೆದ್ದಿರೆಡ್ಡಿ ರಾಮಚಂದ್ರ ರೆಡ್ಡಿ ಅವರಿಗೆ ಸ್ಥಾನ ಸಿಕ್ಕಿದೆ. ಚಿತ್ತೂರು ಕ್ಷೇತ್ರಕ್ಕೆ ಪ್ರಾತಿನಿಧ್ಯ ನೀಡುವ ದೃಷ್ಟಿಯಿಂದ ರೋಜಾ ಬದಲಿಗೆ ರಾಮಚಂದ್ರ ರೆಡ್ಡಿ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ಆದರೆ, ಅದೇ ಜಿಲ್ಲೆಯವರಾದ ರೋಜಾರನ್ನು ಕಡೆಗಣಿಸಲಾಗಿದೆ. ಇದರಿಂದ ರೋಜಾ ಅಭಿಮಾನಿಗಳು, ಪಕ್ಷದಲ್ಲಿನ ಹಿಂಬಾಲಕರು ಕೂಡಾ ಬೇಸರಗೊಂಡೀದ್ದು, ಯಾರೂ ಕೂಡಾ ಹಿರಿಯ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ.

ಕ್ಯಾಬಿನೆಟ್ ಜಾತಿ ಲೆಕ್ಕಾಚಾರ
11 ಮಂದಿ ಮುಂದುವರಿದ ಜಾತಿ, ಪಂಗಡ, 7 ಮಂದಿ ಹಿಂದುಳಿದ ವರ್ಗ, 5 ಎಸ್ಸಿ, 1 ಎಸ್ಟಿ ಹಾಗೂ 1 ಅಲ್ಪಸಂಖ್ಯಾತ ಸಮುದಾಯಕ್ಕೆ ಹಂಚಲಾಗಿದೆ.
ಈ ಪೈಕಿ ನಾಲ್ವರು ರೆಡ್ಡಿ ಸಮುದಾಯಕ್ಕೆ ಸೇರಿದ್ದಾರೆ. ಬಲಿನೇನಿ ಶ್ರೀನಿವಾಸ(ಓಂಗೊಲೆ), ಮೆಕಪಟಿ ಗೌತಮ್ ರೆಡ್ಡಿ(ಆತ್ಮಕೂರು), ಪೆದ್ದಿರೆಡ್ಡಿ ರಾಮಚಂದ್ರ ರೆಡ್ಡಿ(ಪುಂಗನೂರು), ಬುಗ್ಗನ್ನ ರಾಜೇಂದ್ರ ನಾಥ್ ರೆಡ್ಡಿ(ದೊನೆ) ಅವರಿಗೆ ಅವಕಾಶ ಸಿಕ್ಕಿದೆ.

ರೋಜಾ ಕಡಿಮೆ ಅಂತರದಲ್ಲಿ ರೋಚಕ ಗೆಲುವು ಕಂಡಿದ್ದಾರೆ
ರೋಜಾ ಕಡಿಮೆ ಅಂತರದಲ್ಲಿ ರೋಚಕ ಗೆಲುವು ಕಂಡಿದ್ದಾರೆ. ಟಿಡಿಪಿ ಅಭ್ಯರ್ಥಿಯಾಗಿ ನಿಂತಿದ್ದ ಗಾಲಿ ಭಾನು ಪ್ರಕಾಶ್ ವಿರುದ್ಧ ರೋಜಾ ಬರೀ 2,630 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. 2014 ರಲ್ಲಿ ಟಿಡಿಪಿ ಅಭ್ಯರ್ಥಿ ಗಾಲಿ ಮುದ್ದುಕೃಷ್ಣಂ ನಾಯ್ಡು ವಿರುದ್ಧ ಕೇವಲ 858 ಮತಗಳ ಅಂತರದಲ್ಲಿ ರೋಜಾ ಗೆದ್ದಿದ್ದರು. ಈ ಬಾರಿ ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಅವರ ಆಡಳಿತ ವಿರೋಧಿ ಅಲೆ, ಜಗನ್ ಮೋಹನ್ ರೆಡ್ಡಿ ಆಶ್ವಾಸನೆ ಎಲ್ಲವೂ ವರ್ಕ್ ಔಟ್ ಆಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications