Get Updates
Get notified of breaking news, exclusive insights, and must-see stories!

ಖಾಸಗಿ ಸಂಸ್ಥೆಯಲ್ಲೂ ಸ್ಥಳೀಯರಿಗೆ ಮೀಸಲಾತಿ: ಜಗನ್ ಮಹತ್ವದ ನಿರ್ಣಯ

ಅಮರಾವತಿ, ಜುಲೈ 23: ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಕರ್ನಾಟಕದಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಪೂರ್ಣಪ್ರಮಾಣದಲ್ಲಿ ಜಾರಿಗೊಳಿಸಲು ಆಗುತ್ತಿಲ್ಲ, ಆದರೆ, ಆಂಧ್ರಪ್ರದೇಶದಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಆಂಧ್ರಪ್ರದೇಶದ ಔದ್ಯೋಗಿಕ ವಲಯದಲ್ಲಿ ಶೇ. 75 ಉದ್ಯೋಗವನ್ನು ಸ್ಥಳೀಯರಿಗೆ ಮೀಸಲಿಡುವಂತೆ ಕಾನೂನು ಜಾರಿಗೆ ತಂದಿರುವ ಜಗನ್ ರೆಡ್ಡಿ ಅವರು ಇಲಾಖೆಗೆ ಆದೇಶವನ್ನು ಕಳಿಸಿದ್ದಾರೆ.

Jagan law to provide 75 PC reservation to local youths in Private Companies

ಹೊಸ ನಿಯಮದ ಪ್ರಕಾರ, "ಖಾಸಗಿ ಸಂಸ್ಥೆ, ಕಾರ್ಖಾನೆ, ಸರ್ಕಾರ-ಖಾಸಗಿ ಸಹಭಾಗಿತ್ವದ ಸಂಸ್ಥೆಗಳಲ್ಲಿ ಸ್ಥಳೀಯ ಯುವ ಪ್ರತಿಭಾವಂತರಿಗೆ ಶೇ.75 ಮೀಸಲಾತಿ ನೀಡಬೇಕಾಗುತ್ತದೆ. ಸ್ಥಳೀಯರಿಗೆ ಕೌಶಲ್ಯವಿಲ್ಲ ಎಂಬ ಕಾರಣ ನೀಡುವ ಹಾಗಿಲ್ಲ ಎಂದು ನಿಬಂಧನೆ ಹೂಡಲಾಗಿದೆ"

ಪಾದಯಾತ್ರೆ ವೇಳೆ ನೀಡಿದ್ದ ಆಶ್ವಾಸನೆ:
ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ವೈಎಸ್ಸಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಪಾದಯಾತ್ರೆ ನಡೆಸಿ ಜನರ ಅಹವಾಲುಗಳನ್ನು ಸ್ವೀಕರಿದ್ದರು. ಈ ಸಂದರ್ಭದಲ್ಲಿ "ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ" ಎಂಬುದು ದೊಡ್ಡ ಸಮಸ್ಯೆಯಾಗಿ ಕಾಣಿಸಿಕೊಂಡಿದೆ.

ಇದೇ ವೇಳೆಯಲ್ಲಿ ಯುವ ಪ್ರತಿಭಾವಂತರಿಗೆ ಅವಕಾಶ ನೀಡಿದ ಜಗನ್ ಅವರು, ವೈಎಸ್ಸಾರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, 'ಉದ್ಯೋಗ ಮೀಸಲಾತಿ' ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ, ಈ ನಿರ್ಣಯದ ಲಾಭವು ನೇರವಾಗಿ ಕೈಗಾರಿಕಾ ವಲಯಕ್ಕಾಗಿ ತಮ್ಮ ಸ್ವಂತ ಜಮೀನು ಕಳೆದುಕೊಂಡವರಿಗೆ ತಲುಪಬೇಕಿದೆ ಎಂದು ಜಗನ್ ಬಯಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+