ಖಾಸಗಿ ಸಂಸ್ಥೆಯಲ್ಲೂ ಸ್ಥಳೀಯರಿಗೆ ಮೀಸಲಾತಿ: ಜಗನ್ ಮಹತ್ವದ ನಿರ್ಣಯ
ಅಮರಾವತಿ, ಜುಲೈ 23: ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಕರ್ನಾಟಕದಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಪೂರ್ಣಪ್ರಮಾಣದಲ್ಲಿ ಜಾರಿಗೊಳಿಸಲು ಆಗುತ್ತಿಲ್ಲ, ಆದರೆ, ಆಂಧ್ರಪ್ರದೇಶದಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಆಂಧ್ರಪ್ರದೇಶದ ಔದ್ಯೋಗಿಕ ವಲಯದಲ್ಲಿ ಶೇ. 75 ಉದ್ಯೋಗವನ್ನು ಸ್ಥಳೀಯರಿಗೆ ಮೀಸಲಿಡುವಂತೆ ಕಾನೂನು ಜಾರಿಗೆ ತಂದಿರುವ ಜಗನ್ ರೆಡ್ಡಿ ಅವರು ಇಲಾಖೆಗೆ ಆದೇಶವನ್ನು ಕಳಿಸಿದ್ದಾರೆ.

ಹೊಸ ನಿಯಮದ ಪ್ರಕಾರ, "ಖಾಸಗಿ ಸಂಸ್ಥೆ, ಕಾರ್ಖಾನೆ, ಸರ್ಕಾರ-ಖಾಸಗಿ ಸಹಭಾಗಿತ್ವದ ಸಂಸ್ಥೆಗಳಲ್ಲಿ ಸ್ಥಳೀಯ ಯುವ ಪ್ರತಿಭಾವಂತರಿಗೆ ಶೇ.75 ಮೀಸಲಾತಿ ನೀಡಬೇಕಾಗುತ್ತದೆ. ಸ್ಥಳೀಯರಿಗೆ ಕೌಶಲ್ಯವಿಲ್ಲ ಎಂಬ ಕಾರಣ ನೀಡುವ ಹಾಗಿಲ್ಲ ಎಂದು ನಿಬಂಧನೆ ಹೂಡಲಾಗಿದೆ"
ಪಾದಯಾತ್ರೆ ವೇಳೆ ನೀಡಿದ್ದ ಆಶ್ವಾಸನೆ:
ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ವೈಎಸ್ಸಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಪಾದಯಾತ್ರೆ ನಡೆಸಿ ಜನರ ಅಹವಾಲುಗಳನ್ನು ಸ್ವೀಕರಿದ್ದರು. ಈ ಸಂದರ್ಭದಲ್ಲಿ "ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ" ಎಂಬುದು ದೊಡ್ಡ ಸಮಸ್ಯೆಯಾಗಿ ಕಾಣಿಸಿಕೊಂಡಿದೆ.
ಇದೇ ವೇಳೆಯಲ್ಲಿ ಯುವ ಪ್ರತಿಭಾವಂತರಿಗೆ ಅವಕಾಶ ನೀಡಿದ ಜಗನ್ ಅವರು, ವೈಎಸ್ಸಾರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, 'ಉದ್ಯೋಗ ಮೀಸಲಾತಿ' ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ, ಈ ನಿರ್ಣಯದ ಲಾಭವು ನೇರವಾಗಿ ಕೈಗಾರಿಕಾ ವಲಯಕ್ಕಾಗಿ ತಮ್ಮ ಸ್ವಂತ ಜಮೀನು ಕಳೆದುಕೊಂಡವರಿಗೆ ತಲುಪಬೇಕಿದೆ ಎಂದು ಜಗನ್ ಬಯಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications