ಪ್ರಶಸ್ತಿಗೆ ಕಲಾಂ ಬದಲು ಅಪ್ಪನ ಹೆಸರು, ಆಕ್ರೋಶಕ್ಕೆ ಹೆದರಿ ಒಲ್ಲೆ ಎಂದ ಜಗನ್
ಅಮರಾವತಿ, ನವೆಂಬರ್ 05: ಮಾಜಿ ರಾಷ್ಟ್ರಪತಿ ಎಪಿಎ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಪ್ರಶಸ್ತಿಯೊಂದರ ಹೆಸರನ್ನು 'ವೈಎಸ್ ಆರ್ ವಿದ್ಯಾ ಪುರಸ್ಕಾರ' ಎಂದು ಬದಲಿಸಲು ಮುಂದಾಗಿದ್ದ ಆಂಧ್ರ ಪ್ರದೇಶ ಸರ್ಕಾರ ಜನರ ಆಕ್ರೋಶಕ್ಕೆ ಮಣಿದು ತನ್ನ ನಿರ್ಧಾರದಿಂದ ಹಿಂದೆಸರಿದಿದೆ.
'ಡಾ. ಎಪಿಜೆ ಅಬ್ದುಲ್ ಕಲಾಂ ಪ್ರತಿಭಾ ವಿದ್ಯಾ ಪುರಸ್ಕಾರ' ಎಂಬ ಹೆಸರಿನಲ್ಲಿ ನೀಡಲಾಗುತ್ತಿದ್ದ ಪ್ರಶಸ್ತಿಯನ್ನು 'ವೈಎಸ್ ಆರ್(ವೈ ಎಸ್ ರಾಜಶೇಖರ ರೆಡ್ಡಿ) ವಿದ್ಯಾ ಪುರಸ್ಕಾರ' ಎಂದು ಬದಲಿಸಲು ಆಂಧ್ರ ಸರ್ಕಾರ ಮುಂದಾಗಿತ್ತು. ಆಗಲೇ ಆ ಕುರಿತು ಪ್ರಕಟಣೆಯನ್ನೂ ಹೊರಡಿಸಿತ್ತು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತನ್ನ ನಿರ್ಧಾರದಿಂದ ಅದು ಹಿಂದೆ ಸರಿದಿದ್ದು, ಈ ಪ್ರಶಸ್ತಿಯನ್ನು 'ವೈಎಸ್ ಆರ್ ವಿದ್ಯಾ ಪುರಸ್ಕಾರ' ಎಂಬ ಹೆಸರಿನ ಬದಲಿಗೆ 'ಎಪಿಜೆ ಅಬ್ದುಲ್ ಕಲಾಂ ಪ್ರತಿಭಾ ವಿದ್ಯಾ ಪುರಸ್ಕಾರ' ಎಂದು ಮರುನಾಮಕರಣ ಮಾಡಿರುವುದಾಗಿ ಹೊಸ ಪ್ರಕರಟಣೆಯಲ್ಲಿ ಸರ್ಕಾರ ಹೇಳಿದೆ.

ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ತಮ್ಮ ತಂದೆಯ ಹೆಸರಿನಲ್ಲಿ ಈ ಪ್ರಶಸ್ತಿ ನೀಡುವ ಪ್ರಸ್ತಾವಕ್ಕೆ ಮೊದಲು ಸಮ್ಮತಿ ಸೂಚಿಸಿದ್ದರು. ಈ ಪ್ರಶಸ್ತಿಯ ಅಡಿಯಲ್ಲಿ 10 ನೇ ತರಗತಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ, ಪಾರಿತೋಷಕ ಮತ್ತು ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.
ಕಲಾಂ ಹೆಸರಿನಿಂದ ವೈಎಸ್ ಆರ್ ಹೆಸರಿಗೆ ಬದಲಿಸಿದ ಸರ್ಕಾರದ ಕ್ರಮವನ್ನು ವಿಪಕ್ಷ ನಾಯಕ ಟಿಡಿಪಿಯ ಎನ್. ಚಂದ್ರಬಾಬು ನಾಯ್ಡು ಅವರೂ ಕಟುವಾಗಿ ವಿರೋಧಿಸಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications