Get Updates
Get notified of breaking news, exclusive insights, and must-see stories!

ಆಂಧ್ರದಲ್ಲಿ ನಾಯ್ಡು ಯುಗಾಂತ್ಯ! ಮೇ 30 ರಂದು ಜಗನ್ ಗದ್ದುಗೆಗೆ

ಅಮರಾವತಿ, ಮೇ 24: ಆಂಧ್ರಪ್ರದೇಶದಲ್ಲಿ ಆಡಳಿತಾರೂಢ ತೆಲುಗುದೇಶಂ ಪಕ್ಷಕ್ಕೆ ಮುಖಭಂಗವಾಗುವಂಥ ಫಲಿತಾಂಶ ಹೊರಬಿದ್ದಿದ್ದು, ವೈಎಸ್ ಆರ್ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಏರಲಿದೆ.

ಮೇ 30 ರಂದು ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ಮೋಹನ್ ರೆಡ್ಡಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಅದಕ್ಕೂ ಮುನ್ನ ಮೇ 25 ರಂದು ಪಕ್ಷದ ನಾಯಕರು ಸಭೆ ಸೇರಲಿದ್ದಾರೆ.

ಒಟ್ಟು 175 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದ ಆಂಧ್ರಪ್ರದೇಶದಲ್ಲಿ 149 ಕ್ಷೇತ್ರಗಳಲ್ಲಿ ವೈಎಸ್ ಆರ್ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಆಡಳಿತಾರೂಢ ಟಿಡಿಪಿ ಕೇವಲ 25 ಕ್ಷೇತ್ರಗಳಲ್ಲಿ ಗೆದ್ದು ಭಾರೀ ಮುಖಭಂಗ ಅನುಭವಿಸಿತು.

Jagan Reddy to take oath as CM of Andhra on May 30

ಈಗಾಗಲೇ ಮುಖ್ಯಮಂತ್ರಿ ಚಂದ್ರಬಾಭು ನಾಯ್ಡು ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲೂ ವೈಎಸ್ ಆರ್ ಕಾಂಗ್ರೆಸ್ ಅಭೂತಪೂರ್ವ ಸಾಧನೆ ಮೆರೆದಿದ್ದು, 25 ಕ್ಕೆ 25 ಸ್ಥಾನಗಳಲ್ಲೂ ಗೆದ್ದು ಕ್ಲೀನ್ ಸ್ವೀಪ್ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+