ಆಂಧ್ರದಲ್ಲಿ ಜಗನ್-ನಾಯ್ಡು ಜಟಾಪಟಿ, ಗೃಹಬಂಧನ ಮುಂದುವರಿಕೆ
ಅಮರಾವತಿ, ಸೆಪ್ಟೆಂಬರ್ 12: ಆಂಧ್ರಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ಆರಂಭವಾಗಿದ್ದು, ಟಿಡಿಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತವರ ಪುತ್ರ ನಾರಾ ಲೋಕೇಶ್ ಅವರ ಗೃಹಬಂಧನವನ್ನು ಮುಂದುವರಿಸಲಾಗಿದೆ.
ಗೃಹಬಂಧನಕ್ಕೂ ಮುನ್ನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನಾಯ್ಡು, "ಆಂಧ್ರಪ್ರದೇಶದಲ್ಲಿ ಮಾನವ ಹಕ್ಕುಗಳ ಮತ್ತು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ನಾನು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇನೆ, ಪೊಲೀಸರಿಗೂ ಎಚ್ಚರಿಕೆ ನೀಡುತ್ತೇನೆ. ನೀವು ಇಂಥ ರಾಜಕೀಯ ಮಾಡುವಂತಿಲ್ಲ. ನಮ್ಮನ್ನು ಬಂಧಿಸಿ ನಿಯಂತ್ರಿಸುವುದಕ್ಕೆ ಸಾಧ್ಯವಿಲ್ಲ. ನನ್ನನ್ನು ಬಿಟ್ಟ ಕೂಡಲೆ ನಾನು ಮತ್ತೆ ಚಲೋ ಆತ್ಮಕುರ್" ಆರಂಭಿಸುತ್ತೇನೆ ಎಂದು ಗುಡುಗಿದರು.
ಆಂಧ್ರದಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನೂರು ದಿನಗಳು ಕಳೆದಿದ್ದು, ಅದರ ಸಂಭ್ರಮಾಚರಣೆ ನಡೆಸಲು ಸರ್ಕಾರ ನಿರ್ಧರಿಸಿತ್ತು. ಆದರೆ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯವರ ವೈಎಸ್ ಆರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಚಂದ್ರಬಾಬು ನಾಯ್ಡು ಮತ್ತು ಕೆಲವು ಮುಖಂಡರು 12 ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದರು. ಜೊತೆಗೆ ಚಲೋ ಆತ್ಮಾಕುರ್ ಎಂಬ ಜಾಥಾ ನಡೆಸಲು ಮುಂದಾಗಿದ್ದರು.

ಈ ಪ್ರತಿಭಟನೆಯಿಂದ ಕಾನೂನು, ಸುವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂದು ಆರೋಪಿಸಿ, ಪ್ರತಿಭಟನೆ ಆರಂಭವಾಗುವ ಮೊದಲೇ ನಾಯ್ಡು ಸೇರಿದಂತೆ ಟಿಡಿಪಿಯ ಪ್ರಮುಖ ಮುಖಂಡರನ್ನು ಗೃಹಬಂಧನದಲ್ಲಿರಿಸಲಾಯಿತು. ಅವರಿದ್ದ ಕಟ್ಟಡದ ಮುಂದಿನ ಗೇಟನ್ನು ಲಾಕ್ ಮಾಡಲಾಗಿದ್ದು, ಇಂದಿಗೂ ಗೃಹಬಂಧನ ಮುಂದುವರಿದಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications