ಜಗನ್ ಒಬ್ಬ ಸೈಕೋ: ಹರಿಹಾಯ್ದ ಚಂದ್ರಬಾಬು ನಾಯ್ಡು
ವಿಶಾಖಾಪಟ್ಟಣ, ಅಕ್ಟೋಬರ್ 12: "ಜಗನ್ಮೋಹನ್ ರೆಡ್ಡಿ ಒಬ್ಬ ಸೈಕೋ" ಎಂದು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಪಕ್ಷ ಬಲವರ್ಧನೆಗಾಗಿ ವಿಶಾಖಾಪಟ್ಟಣಕ್ಕೆ ತೆರಳಿ, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ನಾಯ್ಡು, ಜಗನ್ ರೆಡ್ಡಿ ಸರ್ಕಾರದ ವಿರುದ್ಧ ಹರಿಹಾಯ್ದರು.
"ನಾನು ಕಳೆದ 14 ವರ್ಷಗಳಿಂದ ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ. ಆದರೆ ಎಂದೂ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡಿರಲಿಲ್ಲ. ಆದರೆ ಜಗನ್ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಿಪಕ್ಷದ ನಾಯಕರ ಮೇಲೆ ಸುಳ್ಳು ಆರೋಪ ಹೊರಿಸುತ್ತಿದ್ದಾರೆ" ಎಂದು ನಾಯ್ಡು ದೂರಿದರು.

"ಜಗನ್ ಆಡಳಿತದಲ್ಲಿ 12 ಟಿಡಿಪಿ ಮುಖಂಡರನ್ನು ಕೊಲ್ಲಲಾಗಿದೆ, 40 ಕ್ಕೂ ಹೆಚ್ಚು ಜನರ ಮೇಲೆ ಸುಳ್ಳು ಕೇಸು ದಾಖಲಿಸಲಾಗಿದೆ" ಎಂದು ನಾಯ್ಡು ಆರೋಪಿಸಿದರು.
"ವೈಎಸ್ ಆರ್ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ನನಗೆ ಒಳ್ಳೆಯದನ್ನು ಮಾಡಿದ ಜನರಿಗೆ ನಾನೂ ಒಳ್ಳೆಯವನಾಗಿರಲಿಲ್ಲ. ಆದರೆ ಜಗನ್ ಹಾಗಲ್ಲ, ಅವರು ಯಾರಿಗೂ ಒಳ್ಳೆಯದನ್ನು ಮಾಡಲ್ಲ. ಅವರೊಬ್ಬ ಸೈಕೋ" ಎಂದು ನಾಯ್ಡು ಆಕ್ರೋಶ ವ್ಯಕ್ತಪಡಿಸಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications