ಪಡಿತರ ಚೀಟಿಯಲ್ಲಿ ಏಸುವಿನ ಚಿತ್ರ ಆಂಧ್ರ ಸರ್ಕಾರ ಹೇಳಿದ್ದೇನು?
ಅಮರಾವತಿ, ಡಿಸೆಂಬರ್ 10: ಆಂಧ್ರಪ್ರದೇಶ ಸರ್ಕಾರದ ಪಡಿತರ ಚೀಟಿಯಲ್ಲಿ ಏಸುವಿನ ಚಿತ್ರ ಕಾಣಿಸಿಕೊಂಡಿರುವುದು ಬಾರಿ ವಿವಾದಕ್ಕೆ ಕಾರಣವಾಗಿದೆ.
ಸ್ಥಳೀಯ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿ ಎಲ್ಲೆಡೆ ಕ್ರಿಶ್ಚಿಯನ್ ಧರ್ಮ ಪ್ರಚಾರ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಇದ್ದವು.
ಆದರೆ ಈಗ ಸರ್ಕಾರದ ಪಡಿತರ ಚೀಟಿಯಲ್ಲೇ ಏಸು ಪ್ರತ್ಯಕ್ಷವಾಗಿದ್ದಾರೆ.ಆಂಧ್ರ ಸರ್ಕಾರವೇ ಮತಾಂತರ ಹಾಗೂ ಕ್ರಿಶ್ಚಿಯನ್ ಧರ್ಮ ಪ್ರಚಾರಕ್ಕೆ ಪ್ರೇರಣೆ ನೀಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಲು ಆರಂಭಿಸಿದ್ದಾರೆ.

ಆದರೆ ರಾಜ್ಯ ಸರ್ಕಾರ ಮಾತ್ರ ಈ ಆರೋಪವನ್ನು ಅಲ್ಲಗಳೆದಿದೆ. ಆಂಧ್ರದ ಒಡ್ಲಮೂರು ಎಂಬ ಹಳ್ಳಿಯಲ್ಲಿ ಪಡಿತರ ಅಂಗಡಿಯ ಮಾಲೀಕರು ಈ ಪ್ರಮಾದವೆಸಗಿದ್ದಾರೆ.
ಇವರು ತೆಲುಗು ದೇಶಂ ಪಕ್ಷದ ಕಟ್ಟ ಬೆಂಬಲಿಗರಾಗಿದ್ದು, ಸರ್ಕಾರದ ವಿರುದ್ಧ ಅಪ ಪ್ರಚಾರಕ್ಕಾಗಿಯೇ ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ.
ಇದರಲ್ಲಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಉದ್ದೇಶಪೂರ್ವಕವಾಗಿಯೇ ಪಡಿತರ ಅಂಗಡಿಯ ಮಾಲೀಕರು ಏಸುವಿನ ಚಿತ್ರ ಪ್ರಕಟಿಸಿ ಗ್ರಾಹಕರಿಗೆ ನೀಡುತ್ತದ್ದಾರೆ.
ಈ ಹಿಂದೆ ಸಾಯಿಬಾಬಾ ಹಾಗೂ ತಿರುಪತಿ ತಿಮ್ಮಪ್ಪನ ಚಿತ್ರವನ್ನು ಕೂಡ ಇವರು ಪ್ರಕಟಿಸಿದ್ದರು.ಒಟ್ಟಾರೆ ಈ ಷಡ್ಯಂತ್ರವನ್ನು ಟಿಡಿಪಿಯಿಂದಲೇ ಹೆಣೆಯಲಾಗಿದ್ದು, ಹಾಗೆಯೇ ಆ ಕುಟುಂಬವು ಕ್ರೈಸ್ತ ಧರ್ಮಕ್ಕೆ ಮತಾಂತರವೂ ಆಗಿಲ್ಲ.
ಆದಾಗ್ಯೂ ಈ ರೀತಿ ತಪ್ಪು ಮಾಡಿದ ಅಂಗಡಿ ವಿರುದ್ಧ ಕ್ರಮಕ್ಕೆ ನಿರ್ಧರಿಸಲಾಗಿದೆ. ಈಗಾಗಲೇ ಇಲಾಖೆ ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications