ತಿರುಪತಿಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಕೊಠಡಿ ಲಭ್ಯ- ಎಸ್ಆರ್ ವಿಶ್ವನಾಥ್
ತಿರುಪತಿ, ಜುಲೈ 12: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ಧವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಆದ ತಿರುಪತಿ ತಿರುಮಲ ಮಂಡಳಿ ಸದಸ್ಯ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ.
ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಎಸ್.ಆರ್ ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡಿದರು.
ತಿರುಮಲದಲ್ಲಿ ಕರ್ನಾಟಕದ ಯಾತ್ರಾರ್ಥಿಗಳು ಬಂದು ವಾಸ್ತವೂಡಲು ಸೌಲಭ್ಯಗಳು ಅಷ್ಟಾಗಿ ಇರಲಿಲ್ಲ. ಜೊತೆಗೆ ರಾಜ್ಯಕ್ಕೆ ಸೇರಿದ ಸುಮಾರು ಏಳು ಎಕರೆ ಜಾಗ ಕೂಡ ನ್ಯಾಯಾಲಯದಲ್ಲಿತ್ತು. ಅದೆಲ್ಲವನ್ನು ಈಗ ಸರಿಪಡಿಸಿ ಯಾತ್ರಾರ್ಥಿಗಳಿಗೆ ಅನುಕೂಲ ಆಗುವಂತೆ ಸುಸಜ್ಜಿತ ಕೊಠಡಿಗಳು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

₹236 ಕೋಟಿ ವೆಚ್ಚ 346 ಕೊಠಡಿ ನಿರ್ಮಾಣ
ಕರ್ನಾಟಕ ಭವನ ನವೀಕರಣ ವಸತಿಗೃಹಗಳ ನಿರ್ಮಾಣ ಸೇರಿದಂತೆ ಒಟ್ಟಾರೆ ಸುಮಾರು ₹236 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಒಟ್ಟು 346 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ವಿವಿಧ ಕಾರಣಗಳಿಂದ ಇಲ್ಲಿ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಆಗುತ್ತಿರಲಿಲ್ಲ. ಯಡಿಯೂರಪ್ಪರವರು ಮುಖ್ಯಮಂತ್ರಿ ಆಗಿದ್ದಾಗ ನೀಡಿದ್ದ ಅನುದಾನ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ಮೇಲೆ ನೀಡಿದ ಸಹಕಾರದಿಂದ ಈಗ ಶೀಘ್ರಗತಿಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಿರುಮಲಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದರು. ಹೀಗಾಗಿ ಮುಂದಿನ ಫೆಬ್ರವರಿ ವೇಳೆಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ ಎಂದು ವಿಶ್ವನಾಥ್ ವಿವರಣೆ ನೀಡಿದರು.

100 ಕೋಟಿ ರೂ ಬಿಡುಗಡೆ ಅನುದಾನ
ತಿರುಪತಿಗೆ ನಿತ್ಯ ಲಕ್ಷಾಂತರ ಯಾತ್ರಾರ್ಥಿಗಳು ಬರುತ್ತಿದ್ದು ಇವರ ಪೈಕಿ ರಾಜ್ಯದಿಂದ ಬರುವ ಯಾತ್ರಾರ್ಥಿಗಳಲ್ಲಿ ಸುಮಾರು ಏಕಕಾಲಕ್ಕೆ ಒಂದುವರೆ ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ವಸತಿ ಸೌಲಭ್ಯ ಕಲ್ಪಿಸಬಹುದು. ಹೀಗಾಗಿ ರಾಜ್ಯ ಸರ್ಕಾರ ಈಗ ತಕ್ಷಣಕ್ಕೆ 100 ಕೋಟಿ ರೂ ಬಿಡುಗಡೆ ಮಾಡುತ್ತಿದ್ದು ಉಳಿದ ಅನುದಾನವನ್ನು ಹಂತ ಹಂತವಾಗಿ ಕೊಡಲಿದೆ. ಹೀಗಾಗಿ ತಿರುಮಲದಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.
ತಿರುಪತಿ ಬೆಟ್ಟದ ಕೆಳಗೆ ರಾಜ್ಯ ಸರ್ಕಾರದ ಆಸ್ತಿ ಇದೆ. ಅದನ್ನು ಕೂಡ ಅಭಿವೃದ್ಧಿಪಡಿಸಿ ಅದರಿಂದ ಬರುವ ಆದಾಯವನ್ನು ತಿರುಮಲದಲ್ಲಿರುವ ಕರ್ನಾಟಕ ಭವನ ನಿರ್ವಹಣೆಗೆ ಬಳಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ವಿಶ್ವನಾಥ್ ತಿಳಿಸಿದರು.

ಹೆಚ್ಚಿನ ಸಹಕಾರಕ್ಕೆ ಜೊಲ್ಲೆಗೆ ಮನವಿ
ಈ ಎಲ್ಲಾ ಕಾಮಗಾರಿಗಳನ್ನು ಮುಜರಾಯಿ ಇಲಾಖೆ ವತಿಯಿಂದ ನಡೆಸಲಾಗುತ್ತಿದ್ದು ಇಲಾಖೆಯಿಂದ ಈಗಾಗಲೇ ಸಾಕಷ್ಟು ಸಹಕಾರ ಸಿಕ್ಕಿದೆ ಇನ್ನೂ ಹೆಚ್ಚಿನ ಸಹಕಾರ ನೀಡಬೇಕೆಂದು ಸಚಿವೆ ಶಶಿಕಲಾ ಜೊಲ್ಲೆಯವರಿಗೆ ವಿನಂತಿಸಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೆಚ್ಚಿನ ಸೌಲಭ್ಯಗಳು ಸಿಗಲಿದೆ ಎಂದು ಎಸ್.ಆರ್ ವಿಶ್ವನಾಥ್ ತಿಳಿಸಿದರು.

ಯಾತ್ರಾರ್ಥಿಗಳ ಸೌಲಭ್ಯಕ್ಕೆ ಬಳಕೆ
ತಿರುಮಲದಲ್ಲಿ ಬೇರೆ ರಾಜ್ಯಗಳು ಹೊಂದಿರುವ ಆಸ್ತಿಗಳಿಗೆ ಹೋಲಿಸಿದರೆ ಕರ್ನಾಟಕ ಅತಿ ಹೆಚ್ಚಿನ ಆಸ್ತಿ ಅಂದರೆ ಸುಮಾರು ಏಳು ಎಕರೆ ಜಾಗ ಹೊಂದಿದೆ. ಇದನ್ನು ಯಾತ್ರಾರ್ಥಿಗಳ ಸೌಲಭ್ಯ ಹಾಗೂ ಅನುಕೂಲಕ್ಕೆ ಬಳಸಿಕೊಳ್ಳಬೇಕೆನ್ನುವ ನಿಟ್ಟಿನಲ್ಲಿ ಇನ್ನೂ ಅನೇಕ ಕ್ರಮ ಕೈಗೊಳ್ಳುವ ಆಲೋಚನೆಗಳಿವೆ ಎಂದು ಬಿಡಿಎ ಅಧ್ಯಕ್ಷರಾದ ಎಸ್.ಆರ್ ವಿಶ್ವನಾಥ್ ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications