ಸುಲಿಗೆ ಪ್ರಕರಣ: ಆಂಧ್ರ ಪ್ರದೇಶ ಸಿಎಂ ಜಗನ್ ಸಂಬಂಧಿ ಬಂಧನ
ಅಮರಾವತಿ, ಮೇ 11: ಸುಲಿಗೆ ಪ್ರಕರಣವೊಂದರಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂಬಂಧಿಯೊಬ್ಬರು ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ ಬಂಧಿತರಾಗಿದ್ದಾರೆ. ಕಟ್ಟಡ ನಿರ್ಮಾಣ ಕಂಪನಿಯೊಂದರ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಂಡಾ ರೆಡ್ಡಿಯನ್ನು ಬಂಧಿಸಲಾಗಿದೆ.
ಎಸ್ಆರ್ಕೆ ಕನ್ಸ್ಟ್ರಕ್ಷನ್ ಎಂಬ ಕಂಪನಿ ನೀಡಿದ ದೂರಿನ ಆಧಾರದ ಮೇಲೆ ಚಕರಾಯಪೇಟಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವೈ. ಎಸ್. ಕೊಂಡಾ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
"ಯಾರೋ ವ್ಯಕ್ತಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಎಸ್ಆರ್ಕೆ ಕಂಪನಿಯಿಂದ ದೂರು ಬಂದಿತ್ತು. ತಾನು ಕೇಳಿದಷ್ಟು ಹಣ ಕೊಡದಿದ್ದರೆ ಕೆಲಸ ನಿಲ್ಲುವಂತೆ ಮಾಡುತ್ತೇನೆ ಎಂದು ಹೆದರಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು" ಎಂದು ಕಡಪ ಪೊಲೀಸ್ ಅಧೀಕ್ಷಕ ಕೆ. ಕೆ. ಎನ್. ಅಣಬುರಾಜನ್ ತಿಳಿಸಿದ್ದಾರೆ.

"ಎಸ್ಆರ್ಕೆ ಕಂಪನಿ ನೀಡಿದ ದೂರಿನ ಮೇರೆಗೆ ಪ್ರಾಥಮಿಕ ವಿಚಾರಣೆ ನಡೆಸಿದಾಗ, ಕರೆ ಮಾಡಿದ್ದು ಕೊಂಡಾ ರೆಡ್ಡಿ ಎಂಬ ವಿಚಾರ ತಿಳಿಯಿತು. ಇನ್ನಷ್ಟು ತನಿಖೆ ನಡೆಸಿ ಖಚಿತಪಡಿಸಿಕೊಂಡ ಬಳಿಕ ಬಂಧಿಸಿದೆವು" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವೈ. ಎಸ್. ಕೊಂಡಾ ರೆಡ್ಡಿಯನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು ಎಂದು ಕೆ. ಕೆ. ಎನ್. ಅಣ್ಬುರಾಜನ್ ಹೇಳಿದ್ದಾರೆ. ಭ್ರಷ್ಟಾಚಾರ ಯಾರೇ ಮಾಡಲಿ ಸರಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಪುಲಿವೆಂದುಲದ ಚಕರಾಯಪೇಟ ಮಂಡಲದಲ್ಲಿ ರಸ್ತೆ ಕಾಮಗಾರಿ ಮಾಡುವ ವೇಳೆ ಗುತ್ತಿಗೆದಾರನಿಂದ ಹಣ ವಸೂಲಿಗೆ ಕೊಂಡಾ ರೆಡ್ಡಿ ಬೆದರಿಕೆ ಹಾಕಿದ್ದಾರೆ ಎಂಬುದು ಆರೋಪ.

ಕರ್ನಾಟಕದ ಬಿಜೆಪಿ ನಾಯಕನ ಹೆಸರು: ಬಂಧಿತರಾಗಿರುವ ಕೊಂಡಾ ರೆಡ್ಡಿ ಆಂಧ್ರ ಪ್ರದೇಶದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ. ಕಡಪ ಜಿಲ್ಲೆಯ ಪಕ್ಷದ ಅಧ್ಯಕ್ಷ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯ ಹತ್ತಿರದ ಸಂಬಂಧಿ.
ಅತ್ತ ಎಸ್ಆರ್ಕೆ ಕನ್ಸ್ಟ್ರಕ್ಷನ್ ಕಂಪನಿಯು ಕರ್ನಾಟಕದ ಬಿಜೆಪಿ ನಾಯಕನೊಬ್ಬನಿಗೆ ಸೇರಿದ್ದು ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಮೂಲಕ ಪ್ರಕರಣಕ್ಕೆ ರಾಜಕೀಯ ಬಣ್ಣವೂ ಮೆತ್ತಿಕೊಂಡಂತಿದೆ. ಇದೇ ವೇಳೆ, ಕೊಂಡಾ ರೆಡ್ಡಿ ಬಂಧನ ಕಡಪ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
(ಒನ್ಇಂಡಿಯಾ ಸುದ್ದಿ)
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications