ಕರ್ನೂಲು ವಿಮಾನ ನಿಲ್ದಾಣಕ್ಕೆ ಗ್ರೀನ್ ಸಿಗ್ನಲ್, ಇನ್ನೆರಡು ತಿಂಗಳಲ್ಲಿ ಕಾರ್ಯಾರಂಭ
ಕರ್ನೂಲು , ಜನವರಿ 18: ಕರ್ನಾಟಕದ ಜೊತೆ ಒಡನಾಟ ಹೊಂದಿರುವ ಕರ್ನೂಲು ಪಟ್ಟಣಕ್ಕೆ ವಿಮಾನ ನಿಲ್ದಾಣ ಹೊಂದಲು ನಾಗರಿಕ ವಿಮಾನಯಾನ ಸಚಿವಾಲಯ (ಡಿಜಿಸಿಎ) ಹಸಿರು ನಿಶಾನೆ ತೋರಿದೆ. ಆಂಧ್ರಪ್ರದೇಶ ವಿಮಾನಯಾನ ಅಭಿವೃದ್ಧಿ ನಿಗಮ ನಿಯಮಿತ (ಎಪಿಡಿಸಿಎಲ್) ಕ್ಕೆ ಲೈಸನ್ಸ್ ದೊರೆತಿದೆ. ಕರ್ನೂಲ್ ವಿಮಾನ ನಿಲ್ದಾಣ ಮಾರ್ಚ್ ತಿಂಗಳಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ.
ಊರ್ವಕಾಲ್ ವಿಮಾನ ನಿಲ್ದಾಣ ಸುಮಾರು 970 ಎಕರೆ ವಿಸ್ತೀರ್ಣ ಹೊಂದಿದ್ದು, ಕರ್ನೂಲ್ ಪಟ್ಟಣದಿಂದ 20 ಕಿ.ಮೀ ದೂರದಲ್ಲಿದೆ. ವಿಜಯವಾಡದಿಂದ 350 ಕಿ.ಮೀ ಹಾಗೂ ಬೆಂಗಳೂರಿನಿಂದ 360 ಕಿ. ಮೀ ದೂರವಿದೆ. ಹೈದರಾಬಾದ್ ವಿಮಾನ ನಿಲ್ದಾಣ 200 ಕಿ.ಮೀ ದೂರದಲ್ಲಿದೆ.
ರಾಜ್ಯ ಸರ್ಕಾರದಿಂದಲೇ ಸಂಪೂರ್ಣವಾಗಿ ನಿರ್ಮಿತವಾದ ದಕ್ಷಿಣ ಭಾರತದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗುರತು ಈ ವಿಮಾನ ನಿಲ್ದಾಣ ಹೊಂದಿದೆ. ನಾಲ್ಕು ಪ್ರತ್ಯೇಕ ಪಾರ್ಕಿಂಗ್ ಸ್ಥಳ. ಎಟಿಆರ್ -72/ಕ್ಯೂ 400 ಕೆಟಗೆರಿ ಲಘು ಏರ್ ಕ್ರಾಫ್ಟ್ ಗಳ ಕಾರ್ಯಾಚರಣೆಗೆ ರನ್ ವೇ ಸಿದ್ಧವಾಗಿದೆ.

ರಾತ್ರಿ ವೇಳೆ ಲ್ಯಾಂಡಿಂಗ್, ಪೈಲಟ್ ತರಬೇತಿ ಕೇಂದ್ರಗಳನ್ನು ಶೀಘ್ರದಲ್ಲೇ ಊರ್ವಕಾಲ್ ವಿಮಾನ ನಿಲ್ದಾಣ ಹೊಂದಲಿದೆ ಎಂದು ಆಂಧ್ರಪ್ರದೇಶ ಕೈಗಾರಿಕಾ ಸಚಿವ ಮೇಕಾಪಟಿ ಗೌತಮ ರೆಡ್ಡಿ ತಿಳಿಸಿದರು.
ಈ ವಿಮಾನ ನಿಲ್ದಾಣದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದಂತೆ ರಾಯಲಸೀಮೆಯಂದ ಆಂಧ್ರಪ್ರದೇಶ ಹಾಗೂ ಕರ್ನಾಟಕದ ಪ್ರಮುಖ ನಗರಗಳಿಗೆ ಸಂಪರ್ಕ ಸಾಧ್ಯತೆ ಹೆಚ್ಚಾಗುವ ನಿರೀಕ್ಷೆಯಿದೆ.
ಮಂತ್ರಾಲಯ, ಶ್ರೀಶೈಲಂ, ಮಹಾನಂದಿ, ಅಹೋಬಿಲಂ, ಅದೋನಿ, ಉರುವಗೊಂಡ,ಎಲ್ಲಾರ್ತಿ ದರ್ಗಾ ಸೇರಿದಂತೆ ಪ್ರಮುಖ ಧಾರ್ಮಿಕ, ಪ್ರೇಕ್ಷಣೀಯ ಸ್ಥಳಿಗಳಿಗೆ ಉತ್ತಮ ಸಂಪರ್ಕ ಸಿಗಲಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications