ಕರ್ನೂಲು ವಿಮಾನ ನಿಲ್ದಾಣಕ್ಕೆ ಗ್ರೀನ್ ಸಿಗ್ನಲ್, ಇನ್ನೆರಡು ತಿಂಗಳಲ್ಲಿ ಕಾರ್ಯಾರಂಭ
ಕರ್ನೂಲು , ಜನವರಿ 18: ಕರ್ನಾಟಕದ ಜೊತೆ ಒಡನಾಟ ಹೊಂದಿರುವ ಕರ್ನೂಲು ಪಟ್ಟಣಕ್ಕೆ ವಿಮಾನ ನಿಲ್ದಾಣ ಹೊಂದಲು ನಾಗರಿಕ ವಿಮಾನಯಾನ ಸಚಿವಾಲಯ (ಡಿಜಿಸಿಎ) ಹಸಿರು ನಿಶಾನೆ ತೋರಿದೆ. ಆಂಧ್ರಪ್ರದೇಶ ವಿಮಾನಯಾನ ಅಭಿವೃದ್ಧಿ ನಿಗಮ ನಿಯಮಿತ (ಎಪಿಡಿಸಿಎಲ್) ಕ್ಕೆ ಲೈಸನ್ಸ್ ದೊರೆತಿದೆ. ಕರ್ನೂಲ್ ವಿಮಾನ ನಿಲ್ದಾಣ ಮಾರ್ಚ್ ತಿಂಗಳಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ.
ಊರ್ವಕಾಲ್ ವಿಮಾನ ನಿಲ್ದಾಣ ಸುಮಾರು 970 ಎಕರೆ ವಿಸ್ತೀರ್ಣ ಹೊಂದಿದ್ದು, ಕರ್ನೂಲ್ ಪಟ್ಟಣದಿಂದ 20 ಕಿ.ಮೀ ದೂರದಲ್ಲಿದೆ. ವಿಜಯವಾಡದಿಂದ 350 ಕಿ.ಮೀ ಹಾಗೂ ಬೆಂಗಳೂರಿನಿಂದ 360 ಕಿ. ಮೀ ದೂರವಿದೆ. ಹೈದರಾಬಾದ್ ವಿಮಾನ ನಿಲ್ದಾಣ 200 ಕಿ.ಮೀ ದೂರದಲ್ಲಿದೆ.
ರಾಜ್ಯ ಸರ್ಕಾರದಿಂದಲೇ ಸಂಪೂರ್ಣವಾಗಿ ನಿರ್ಮಿತವಾದ ದಕ್ಷಿಣ ಭಾರತದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗುರತು ಈ ವಿಮಾನ ನಿಲ್ದಾಣ ಹೊಂದಿದೆ. ನಾಲ್ಕು ಪ್ರತ್ಯೇಕ ಪಾರ್ಕಿಂಗ್ ಸ್ಥಳ. ಎಟಿಆರ್ -72/ಕ್ಯೂ 400 ಕೆಟಗೆರಿ ಲಘು ಏರ್ ಕ್ರಾಫ್ಟ್ ಗಳ ಕಾರ್ಯಾಚರಣೆಗೆ ರನ್ ವೇ ಸಿದ್ಧವಾಗಿದೆ.

ರಾತ್ರಿ ವೇಳೆ ಲ್ಯಾಂಡಿಂಗ್, ಪೈಲಟ್ ತರಬೇತಿ ಕೇಂದ್ರಗಳನ್ನು ಶೀಘ್ರದಲ್ಲೇ ಊರ್ವಕಾಲ್ ವಿಮಾನ ನಿಲ್ದಾಣ ಹೊಂದಲಿದೆ ಎಂದು ಆಂಧ್ರಪ್ರದೇಶ ಕೈಗಾರಿಕಾ ಸಚಿವ ಮೇಕಾಪಟಿ ಗೌತಮ ರೆಡ್ಡಿ ತಿಳಿಸಿದರು.
ಈ ವಿಮಾನ ನಿಲ್ದಾಣದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದಂತೆ ರಾಯಲಸೀಮೆಯಂದ ಆಂಧ್ರಪ್ರದೇಶ ಹಾಗೂ ಕರ್ನಾಟಕದ ಪ್ರಮುಖ ನಗರಗಳಿಗೆ ಸಂಪರ್ಕ ಸಾಧ್ಯತೆ ಹೆಚ್ಚಾಗುವ ನಿರೀಕ್ಷೆಯಿದೆ.
ಮಂತ್ರಾಲಯ, ಶ್ರೀಶೈಲಂ, ಮಹಾನಂದಿ, ಅಹೋಬಿಲಂ, ಅದೋನಿ, ಉರುವಗೊಂಡ,ಎಲ್ಲಾರ್ತಿ ದರ್ಗಾ ಸೇರಿದಂತೆ ಪ್ರಮುಖ ಧಾರ್ಮಿಕ, ಪ್ರೇಕ್ಷಣೀಯ ಸ್ಥಳಿಗಳಿಗೆ ಉತ್ತಮ ಸಂಪರ್ಕ ಸಿಗಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications