ವಿಜಯವಾಡದ ಕೀಲಾದ್ರಿ ಬೆಟ್ಟದಲ್ಲಿ ಭೂಕುಸಿತ: ಹಲವರು ಸಿಲುಕಿರುವ ಶಂಕೆ
ವಿಜಯವಾಡ, ಅಕ್ಟೋಬರ್ 21: ಆಂಧ್ರಪ್ರದೇಶದ ವಿಜಯವಾಡದಲ್ಲಿ ಭೂಕುಸಿತ ಉಂಟಾಗಿದ್ದು, ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಕ್ಷಣಾ ಕಾರ್ಯ ಮುಂದುವರೆದಿದೆ. ಕಳೆದ ಒಂದು ವಾರದಿಂದ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಪ್ರವಾಹ ಉಂಟಾಗಿದ್ದು, 50ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಕರ್ನಾಟಕದ 16 ಜಿಲ್ಲೆಗಳಲ್ಲಿ ಮತ್ತೆ ವರುಣನ ಆರ್ಭಟ
ವಿಜಯವಾಡದ ಇಂದ್ರ ಕೀಲಾದ್ರಿ ಬೆಟ್ಟದಿಂದ ಹಲವು ಬಂಡೆಗಳು ಉರುಳಿಬಿದ್ದಿದ್ದು, ಕನಕ ದುರ್ಗಾ ದೇವಸ್ಥಾನದ ಶೆಡ್ ಅನ್ನು ನೆಲಕ್ಕುರುಳಿಸಿವೆ. ಇದರಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆ ಪ್ರದೇಶಕ್ಕೆ ಭೇಟಿ ನೀಡುವ ಕೆಲವೇ ಕೆಲವು ಗಂಟೆಗಳ ಅಂತರದಲ್ಲಿ ಈ ಘಟನೆ ನಡೆದಿದೆ.
ಶ್ರೀ ದುರ್ಗಾ ಮಲ್ಲೇಶ್ವರ ಸ್ವಾಮಿ ವರ್ಲಾ ದೇವಸ್ಥಾನವು ಭಕ್ತರಿಗಾಗಿ ತೆರೆದಿದೆ. ಪ್ರತಿ ಗಂಟೆಗೆ ಸಾವಿರ ಭಕ್ತರಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶವಿದೆ.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಕೀಲಾದ್ರಿ ಬೆಟ್ಟಕ್ಕೆ ಪಟ್ಟು ವಸ್ತ್ರವನ್ನು ನೀಡಲು ಬರುವವರಿದ್ದರು.