ತಿರುಪತಿಯಲ್ಲಿ ಆಗಸ್ಟ್ 14ರ ತನಕ ಲಾಕ್ ಡೌನ್
ಅಮರಾವತಿ, ಆಗಸ್ಟ್ 06 : ಆಂಧ್ರ ಪ್ರದೇಶದ ತಿರುಪತಿಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಆಗಸ್ಟ್ 14ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ತಿರುಪತಿ ನಗರ ಸಭೆ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ತರಕಾರಿ ಅಂಗಡಿ, ದಿನಸಿ ಅಂಗಡಿಗಳು ಬೆಳಗ್ಗೆ 6 ರಿಂದ 2 ಗಂಟೆಯ ತನಕ ಮಾತ್ರ ಖರೀದಿ ಮಾಡಲು ಅವಕಾಶ ನೀಡಲಾಗಿದೆ.
ತಿರುಪತಿ ಬಂದ್ ಮಾಡಿ; ದರ್ಶನದ ವಿಚಾರ ಮತ್ತೆ ಆರಂಭ
ತಿರುಪತಿಯಲ್ಲಿ ಪ್ರತಿದಿನ ಸುಮಾರು 400 ಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದ ಹಿನ್ನಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಈ ಪ್ರತಿದಿನ 200 ಪ್ರಕರಣಗಳು ವರದಿಯಾಗುತ್ತಿದೆ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಆಂಧ್ರ ಪ್ರದೇಶದಲ್ಲಿ ಒಂದೇ ದಿನ 10128 ಮಂದಿಗೆ ಕೊವಿಡ್-19
ತಿರುಪತಿಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ದೇವಾಲಯಕ್ಕೆ ಬರುವ ಭಕ್ತರಿಗೆ ಯಾವುದೇ ರೀತಿಯಲ್ಲಿ ತೊಂದರೆ ಉಂಟು ಮಾಡುವುದಿಲ್ಲ ಎಂದು ನಗರ ಸಭೆ ಹೇಳಿದೆ. ಭಕ್ತರು ಎಂದಿನಂತೆ ಬಂದು ದೇವರ ದರ್ಶನವನ್ನು ಪಡೆಯಬಹುದಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ತಿರುಪತಿ ದೇವಾಲಯ ಬಂದ್ ಮಾಡಿ; ಟಿಟಿಡಿ ಸಿಬ್ಬಂದಿ ಪತ್ರ
ಜೂನ್ 20ರಿಂದ ಆಗಸ್ಟ್ 5ರ ತನಕ ತಿರುಪತಿಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಇದನ್ನು ಈಗ ಆಗಸ್ಟ್ 15ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಇರುವ ರಾಜ್ಯಗಳಲ್ಲಿ ಆಂಧ್ರ ಪ್ರದೇಶವೂ ಸೇರಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,86,461ಕ್ಕೆ ಏರಿಕೆಯಾಗಿದೆ.