ಆಂಧ್ರದಲ್ಲಿ ಕರಾಳ ದಿನ! ಮತದಾನದ ವೇಳೆ ಇಬ್ಬರ ಬರ್ಬರ ಹತ್ಯೆ
ಅಮರಾವತಿ, ಏಪ್ರಿಲ್ 11: ಆಂಧ್ರಪ್ರದೇಶದಲ್ಲಿ ಮೊದಲ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಕಾದಾಟದಲ್ಲಿ ಇಬ್ಬರ ಹತ್ಯೆಯಾಗಿದೆ.
#WATCH: Clash broke out between YSRCP and TDP workers in Puthalapattu Constituency in Bandarlapalli, Andhra Pradesh. Police resorted to lathi-charge pic.twitter.com/q7vxRIR0R8
— ANI (@ANI) April 11, 2019
ಇಲ್ಲಿನ ಅನಂತಪುರ ಜಿಲ್ಲೆಯ ಪೀಠಾಪುರ ಎಂಬಲ್ಲಿ ಟಿಡಿಪಿ ಮತ್ತು ವೈಎಸ್ ಆರ್ ಸಿಪಿ ಪಕ್ಷದ ಕಾರ್ಯಕರ್ತರ ನಡುವೆ ಕ್ಷುಲ್ಲಕ ವಿಷಯಕ್ಕಾಗಿ ಗಲಾಟೆ ಆರಂಭವಾಗಿತ್ತು. ಅದೇ ವಿಕೋಪಕ್ಕೆ ತಿರುಗಿದ ಕಾರಣ ಭಾಸ್ಕರ ರೆಡ್ಡಿ ಮತ್ತು ಪುಲ್ಲಾರೆಡ್ಡಿ ಎಂಬುವವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲ್ಲಲಾಗಿದೆ.

ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.












Click it and Unblock the Notifications