ಮೋದಿಯ ಸ್ವಭಾವದಿಂದಲೇ ದೇಶದ ಅರ್ಥಿಕತೆ ಹಾಳು: ಚಂದ್ರಬಾಬು ನಾಯ್ಡು
Recommended Video

ವಿಶಾಖಪಟ್ಟಣ, ಡಿಸೆಂಬರ್ 22: "ಪ್ರಧಾನಿ ನರೇಂದ್ರ ಮೋದಿಯವರಲ್ಲಿರುವ ಋಣಾತ್ಮಕ ಸ್ವಭಾವದಿಂದಲೇ ಈ ದೇಶದ ಆರ್ಥಿಕತೆ ಹಾಳಾಗಿದೆ. ಮೋದಿ ಸರ್ಕಾರ ಈ ದೇಶದ ದೊಡ್ಡ ದುರಂತ" ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಆಂಧ್ರಪ್ರದೇಶದ ವಿಶಾಖಾಪಟ್ಟಣದಲ್ಲಿ ನಡೆದ ಇಂಡಿಯಾ ಟುಡೇ ಸೌತ್ ಕಾಂಕ್ಲೇವ್ ನಲ್ಲಿ ಅವರು ಮಾತನಾಡುತ್ತಿದ್ದರು. ಆರ್ಥಿಕತೆ ಮತ್ತು ಸಾಮಾಜಿಕ ಸ್ಥಿತಿಯೇ ಈ ಸರ್ಕಾರದ ಸಾಧನೆಯೇನು ಎಂಬುದಕ್ಕೆ ಸಾಕ್ಷಿ ಎಂದು ಲೇವಡಿ ಮಾಡಿದರು.
ಮೋದಿ ತಾವು ಬಹಳ ಗಟ್ಟಿ ಎನ್ನುತ್ತಾರೆ. ಆದರೆ ಈ ದೇಶಕ್ಕಾಗಿ ಅವರು ಏನು ಮಾಡಿದ್ದಾರೆ ಹೇಳಿ. ಭಾರತದ ಜನರಿಗೆ ಸರಿಯಾಗಿ ನಿದ್ದೆಯಿಲ್ಲ. ಸ್ಟಾರ್ಟ್ ಅಪ್ ಇಂಡಿಯಾ, ಸ್ಟಾಂಡಪ್ ಇಂಡಿಯಾ ಎಂಬುದೆಲ್ಲ ಕೇವಲ ಘೋಷಣೆಗಳಷ್ಟೆ ಎಂದು ನಾಯ್ಡು, ಕೇಂದ್ರ ಸರ್ಕಾರದ ಮೇಲೆ ಟೀಕೆಗಳ ಸುರಿಮಳೆಗೈದಿದ್ದಾರೆ.

ಮೋದಿಯವರಿಗಿಂತ ಈ ದೇಶದ ಯಾರಾದರೂ ಉತ್ತಮ. ಅವರ ಋಣಾತ್ಮಕ ಮನಸ್ಥಿತಿಯಿಂದಲೇ ಈ ದೇಶದ ಆರ್ಥಿಕತೆ ಹಾಳಾಗಿದೆ. 2014 ರ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಸರ್ಕಾರವನ್ನು ಹಳಿದು ಅಧಿಕಾರಕ್ಕೆ ಬಂದರು. ಆದರೆ ಈಗ ಮೋದಿಯವರು ಮಾಡುತ್ತಿರುವುದೇನು? ಆ ಸರ್ಕಾರಕ್ಕೂ, ಈ ಸರ್ಕಾರಕ್ಕೂ ಏನು ವ್ಯತ್ಯಾಸ ಎಂದು ಅವರು ಕೇಳಿದರು.
"ಸಿಬಿಐ, ಆದಾಯ ತೆರಿಗೆ ಇಲಾಖೆ, ಇಡಿ ಎಲ್ಲವನ್ನೂ ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಈ ದೇಶದಲ್ಲಿ ಮುಸ್ಲಿಮರು, ಪರಿಶಿಷ್ಟ ಜಾತಿಯವರು ಭಯದಿಂದ ಬದುಕುತ್ತಿದ್ದಾರೆ. ರೈತರಿಗೆ ಸುಳ್ಳು ಹೇಳಲಾಗಿದೆ. ನಾನೂ ಮೊದಲು ಮೋದಿಯವರ ಘೋಷಣೆಯನ್ನೂ, ಮೋದಿಯವರನ್ನೂ ನಂಬಿದ್ದೆ. ಆದರೆ ಈಗ ಇಡೀ ದೇಶವ ಮೋದಿಯವರನ್ನು ನಂಬುತ್ತಿಲ್ಲ. ಅವರು ದೇಶಕ್ಕೆ ಮೋಸ ಮಾಡುತ್ತಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುತ್ತದೆ' ಎಂದು ಮೋದಿ ಸರ್ಕಾರದ ಮೇಲೆ ಎಂದಿನಂತೇ ವಾಕ್ಪ್ರಹಾರ ನಡೆಸಿದರು.
2014 ರ ಚುನಾವಣೆಯ ನಂತರ ಎನ್ ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀದಿದ್ದ ಚಂದ್ರಬಾಬು ನಾಯ್ಡು, ನಂತರ ಅಲ್ಲಿಂದ ಹೊರಬಂದರು. ಇದೀಗ ಬಿಜೆಪಿ ವಿರೋಧಿ ಪಕ್ಷಗಳನ್ನೆಲ್ಲ ಒಗ್ಗೂಡಿಸಿ, ಮಹಾಘಟಬಂಧನ ರಚಿಸಲು ಖುದ್ದು ಆಸ್ಥೆಯಿಂದ ಓಡಾಡುತ್ತಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications