ಆಂಧ್ರದಲ್ಲಿ ಮದ್ಯ ಸಿಗದಿದ್ದಕ್ಕೆ, ಸ್ಯಾನಿಟೈಸರ್ ಸೇವಿಸಿ ಸಾವನ್ನಪ್ಪಿದ ತಾಯಿ, ಮಗ
ಕಡಪ, ಜೂನ್ 1: ಲಾಕ್ಡೌನ್ ಸಂದರ್ಭದಲ್ಲಿ ಕುಡಿಯಲು ಮದ್ಯ ಸಿಗಲಿಲ್ಲ ಎಂದು ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸುದ್ದಿ ಮಾಸುವ ಮುನ್ನವೇ ಆಂಧ್ರಪ್ರದೇಶದ ತಾಯಿ, ಮಗ ಸ್ಯಾನಿಟೈಸರ್ ಸೇವಿಸಿ ಸಾವನ್ನಪ್ಪಿದ್ದಾರೆ. ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ.
Recommended Video
ಸ್ಯಾನಿಟೈಸರ್ನಲ್ಲೂ ಆಲ್ಕೋಹಾಲ್ ಇರುತ್ತೆ, ಅದನ್ನ ಕುಡಿದರೂ ಕಿಕ್ ಏರುತ್ತೆ ಎಂದು ಯಾರೋ ಹೇಳಿದ್ದಾರೆ. ಇದನ್ನ ನಂಬಿರುವ ತಾಯಿ, ಮಗ ಇಬ್ಬರೂ ಸಾನಿಟೈಸರ್ ಸೇವಿಸಿದ್ದಾರೆ. ಬಳಿಕ ಇಬ್ಬರೂ ಪ್ರಜ್ಞೆತಪ್ಪಿ ಬಿದಿದ್ದು, ಅವರನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲಿಸರು ಕೂಡಲೇ ಇಬ್ಬರನ್ನು ಕಡಪ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಇಬ್ಬರೂ ಮೃತಪಟ್ಟಿದ್ದಾರೆ.

ಕಡಪ ಜಿಲ್ಲೆಯ ಚೆನ್ನೂರ್ ಮಂಡಲದ ಯಲ್ಲಮ್ಮ ಗುಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಶ್ರೀರಾಮ್ ನಾಯಕ್ ಮತ್ತು ಆತನ ತಾಯಿ ವಿಜಯಲಕ್ಷ್ಮಿ ಕಟ್ಟಡ ಕಾರ್ಮಿಕರಾಗಿದ್ದು, ಮದ್ಯ ಕುಡಿಯುತ್ತಿದ್ದರು. ಅದರಂತೆ ಭಾನುವಾರ ಸಂಜೆ ಕುಡಿಯಲು ಮದ್ಯ ಸಿಗದಿದ್ದಾಗ ಸಾನಿಟೈಸರ್ ಕುಡಿದು ಈ ದುರ್ಘಟನೆ ಸಂಭವಿಸಿದೆ ಎಂದು ಚೆನ್ನೂರ್ ಪೊಲೀಸರು ತಿಳಿಸಿದ್ದಾರೆ.
ಸಾನಿಟೈಸರ್ ಹೆಚ್ಚಾಗಿ ಕುಡಿದಿರುವುದರಿಂದ ಇಬ್ಬರ ಸಾವಿಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications