ನಾಯ್ಡು ಪದಚ್ಯುತಿಗೆ 'ಆಪರೇಷನ್ ಗರುಡ' ನಟ ಶಿವಾಜಿಗೆ ಕಂಟಕ
ಅಮರಾವತಿ, ಅಕ್ಟೋಬರ್ 30 : ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪದಚ್ಯುತಿಗಾಗಿ ನಡೆದಿರುವ ಕಾರ್ಯತಂತ್ರಗಳ ಕುರಿತಂತೆ ಕೇಳಿ ಬಂದಿರುವ 'ಆಪರೇಷನ್ ಗರುಡ' ಬಗ್ಗೆ ವಿವರಿಸಿದ ನಟ ಕಮ್ ರಾಜಕೀಯ ಕಾರ್ಯಕರ್ತ ಶಿವಾಜಿ ಮೇಲೆ ಕೇಂದ್ರ ಸರ್ಕಾರ ಹದ್ದಿನ ಕಣ್ಣಿಟ್ಟಿದೆ.
ಎನ್ಡಿಎ ಮಿತ್ರ ಪಕ್ಷವಾಗಿದ್ದ ತೆಲುಗು ದೇಶಂ ಪಾರ್ಟಿ ಈಗ ಮೈತ್ರಿ ಕಡಿದುಕೊಂಡಿದೆ. ಹೀಗಾಗಿರುವಾಗ, ನಾಯ್ಡು ಅವರನ್ನು ಕೆಳಗಿಳಿಸಲು ಹೂಡಿದ ರಣ ತಂತ್ರದ ಬಗ್ಗೆ ಕೇಂದ್ರ ಸರ್ಕಾರ ಏಕೆ ಆಸಕ್ತಿ ವಹಿಸಿದೆ ಎಂಬುದು ಕುತೂಹಲಕಾರಿ.
ಆದರೆ, ಆಂಧ್ರಪ್ರದೇಶ ಪ್ರಮುಖ ಮಾಧ್ಯಮಗಳ ವರದಿ ಪ್ರಕಾರ, ಆಂಧ್ರದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ 'ಆಪರೇಷನ್ ಗರುಡ' ಅಂದರೇನು? ಈ ಬಗ್ಗೆ ನಟಿ ಶಿವಾಜಿ ನೀಡಿರುವ ವಿವರಣೆ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ನಡೆಸಿದೆ.

ಸದ್ಯ ಹೈದರಾಬಾದ್ ತೊರೆದು ಅಮೆರಿಕಕ್ಕೆ ತೆರಳಿರುವ ನಟ ಶಿವಾಜಿ, ಚಂದ್ರಬಾಬು ನಾಯ್ಡು ಅವರನ್ನು ಪಟ್ಟದಿಂದ ಕೆಳಗಿಳಿಸಲು ಬಿಜೆಪಿ ಹೈಕಮಾಂಡ್ ಸಂಚು ರೂಪಿಸಿದ್ದು ಎಂದು ತಮ್ಮ ವಿಡಿಯೋ ಪ್ರಾತ್ಯಕ್ಷಿಕೆಯಲ್ಲಿ ಆರೋಪಿಸಿದ್ದರು.
ಇದು ರಾಜಕೀಯ ಉದ್ದೇಶದಿಂದ ಮಾಡಿರುವ ವಿಡಿಯೋವೇ? ಅಥವಾ ಇಂಥ ಸಂಚು ರೂಪಿಸಲಾಗಿತ್ತೆ? ಈ ಬಗ್ಗೆ ಸುಳಿವು ತಿಳಿದು ನಾಯ್ಡು ಅವರು ಮೈತ್ರಿಯಿಂದ ಹೊರಗೆ ಬಂದರೇ? ಎಂಬೆಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.
ಸದ್ಯ ಅಮೆರಿಕದಲ್ಲಿ ನೆಲೆಸಿರುವ ಶಿವಾಜಿ ಅವರು ಭಾರತದಲ್ಲಿ ಚುನಾವಣೆ ಗಲಾಟೆ ಮುಗಿಯುವ ತನಕ ಹಿಂತಿರುಗುವ ಸಾಧ್ಯತೆಯಿಲ್ಲ ಎಂಬ ಸುದ್ದಿ ಬಂದಿದೆ. ಕೇಂದ್ರದ ತನಿಖಾ ದಳ ಹಾಗೂ ತೆಲಂಗಾಣ ಪೊಲೀಸರು, ಮುಂದಿನ ಕ್ರಮದ ಬಗ್ಗೆ ಚಿಂತನೆ ನಡೆಸಿದ್ದಾರೆ.
ಈ ನಡುವೆ ಜಗನ್ ಮೇಲೆ ಹಲ್ಲೆ ಮಾಡಿದ್ದು ಪೂರ್ವನಿಯೋಜಿತ ಕೃತ್ಯ, ಜಗನ್ ಮೋಹನ್ ರೆಡ್ಡಿ ಅವರನ್ನು ಗಾಯಗೊಳಿಸುವುದು ಆತನ ಉದ್ದೇಶವಾಗಿರಲಿಲ್ಲ. ಆತ ಜಗನ್ ಅಭಿಮಾನಿ, ಪಕ್ಷದ ಪರ ಅನುಕಂಪದ ಸೃಷ್ಟಿ ಉದ್ದೇಶವಾಗಿತ್ತು ಎಂದು ವಿಪಕ್ಷಗಳು ಆರೋಪಿಸಿವೆ. ತಿರುಪತಿ ಸಮೀಪ ಈ ಹಿಂದೆ ನಾಯ್ಡು ಮೇಲೆ ನಡೆದ ನೆಲ ಬಾಂಬ್ ದಾಳಿ ಬಗ್ಗೆ ಕೂಡಾ ಪ್ರಸ್ತಾಪಿಸಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications