Breaking; ತಿರುಪತಿ ಭೇಟಿ ಮುಂದೂಡಿ, ಭಕ್ತರಿಗೆ ಟಿಟಿಡಿ ಮನವಿ
ಅಮರಾವತಿ, ಮೇ 29; ತಿರುಪತಿ ಭಕ್ತರಿಂದ ತುಂಬಿ ತುಳುಕುತ್ತಿದೆ. ಭಕ್ತರನ್ನು ನಿಯಂತ್ರಿಸಲು ಟಿಟಿಡಿ ಆಡಳಿತ ಮಂಡಳಿ ಹರಸಾಹಸ ಪಡುತ್ತಿದೆ. ಆದ್ದರಿಂದ ತಿರುಪತಿ ಭೇಟಿಯನ್ನು 4 ರಿಂದ 5 ದಿನ ಮುಂದೂಡುವಂತೆ ಆಡಳಿತ ಮಂಡಳಿ ಭಕ್ತರಿಗೆ ಮನವಿ ಮಾಡಿದೆ.
ದರ್ಶನಕ್ಕಾಗಿ ಭಕ್ತರು 48 ಗಂಟೆಗಳ ಕಾಲ ಕಾಯುವಷ್ಟು ಜನದಟ್ಟಣೆ ಉಂಟಾಗಿದೆ. ಇದರಿಂದಾಗಿ ತಿರುಪತಿ ದೇವಾಲಯ, ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮುಂತಾದ ಕಡೆ ಭಕ್ತರೇ ಕಾಣಿಸುತ್ತಿದ್ದಾರೆ.
ಶನಿವಾರ ಮತ್ತು ಭಾನುವಾರದ ಹಿನ್ನಲೆಯಲ್ಲಿ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ವೈಕುಂಠ ದರ್ಶನ ಪಡೆಯಲು 2 ಕಿ. ಮೀ. ತನಕ ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ವಿವಿಧ ಕೌಂಟರ್ಗಳಲ್ಲಿ ಭಕ್ತರನ್ನು ನಿಯಂತ್ರಿಸುವುದು ಸವಾಲಾಗಿದೆ.

ಲಗೇಜ್ ಕೌಂಟರ್, ಲಡ್ಡು ಕೌಂಟರ್, ಬಸ್ ನಿಲ್ದಾಣ, ರಸ್ತೆಗಳಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಭಕ್ತರು ಆಗಮಿಸಿದರೂ ವಸತಿ ವ್ಯವಸ್ಥೆ ಮಾಡುವುದು ಸವಾಲಾಗಿದೆ. ಈ ಹಿನ್ನಲೆಯಲ್ಲಿ ಟಿಟಿಡಿ ತಿರುಪತಿ ಭೇಟಿ ಮುಂದೂಡುವಂತೆ ಭಕ್ತರಿಗೆ ಮನವಿ ಮಾಡಿದೆ.
ಕೋವಿಡ್ ನಿಯಮಗಳ ಸಡಿಲಿಕೆ ಬಳಿಕ ತಿರುಪತಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲಿಯೂ ರಜಾ ದಿನಗಳಲ್ಲಿ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಟಿಟಿಡಿ ಭಕ್ತರು ಪ್ರವಾಸ ಮುಂದೂಡುವಂತೆ ಹೇಳಿದೆ.
ಆಂಧ್ರ ಪ್ರದೇಶ ಮಾತ್ರವಲ್ಲ ಅಕ್ಕಪಕ್ಕದ ರಾಜ್ಯಗಳ ಭಕ್ತರು ವಾರಾಂತ್ಯದ ರಜೆ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡಿದ್ದು, ದೇವಾಲಯದ ಆವರಣ ಭಕ್ತರಿಂದ ತುಂಬಿ ಹೋಗಿದೆ. ಸಾಮಾನ್ಯ ದರ್ಶನ ಪಡೆಯಲು 48 ಗಂಟೆಗಳ ಕಾಲವಾಗುತ್ತಿದೆ. ಈ ಹಿನ್ನಲೆಯಲ್ಲಿ ಟಿಟಿಟಿ ಶನಿವಾರ ಭಕ್ತರಿಗೆ ದೇವಾಲಯದ ಭೇಟಿ ಮುಂದೂಡಿ ಎಂದು ಹೇಳಿದೆ.
ಜೂನ್ ತಿಂಗಳು ಆರಂಭವಾದರೆ ಮಳೆಗಾಲದಲ್ಲಿ ತಿರುಪತಿ ಭೇಟಿ ಕಷ್ಟ. ಅಲ್ಲದೇ ಶಾಲೆಗಳು ಆರಂಭವಾದರೆ ಮಕ್ಕಳಿಗೆ ರಜೆ ಸಿಗುವುದು ಕಷ್ಟ ಎಂಬ ಕಾರಣಕ್ಕೆ ಮೇ ಅಂತ್ಯದಲ್ಲಿ ಲಕ್ಷಾಂತರ ಭಕ್ತರು ತಿರುಪತಿಗೆ ಭೇಟಿ ನೀಡುತ್ತಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications