just in: ತಿರುಪತಿ ತಿಮ್ಮಪ್ಪಗೆ 1.5 ಕೋಟಿ ದೇಣಿಗೆ ನೀಡಿದ ಮುಕೇಶ್ ಅಂಬಾನಿ
ಅಮರಾವತಿ, ಸೆ.16: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಶುಕ್ರವಾರ ತಿರುಮಲದಲ್ಲಿರುವ ವೆಂಕಟೇಶ್ವರನ ಪುರಾತನ ಬೆಟ್ಟದ ದೇವಾಲಯಕ್ಕೆ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಮುಕೇಶ್ ಅಂಬಾನಿ ಶುಕ್ರವಾರ ತಿರುಮಲದ ಸಮೀಪದ ವೆಂಕಟೇಶ್ವರನ ಪುರಾತನ ಬೆಟ್ಟದ ದೇವಾಲಯಕ್ಕೆ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ತಿರುಮಲದಲ್ಲಿ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದರು.
ವೆಂಕಟೇಶ್ವರ ದೇವರ ಕಟ್ಟಾ ಭಕ್ತರಾಗಿರುವ ಅಂಬಾನಿ, ಎನ್ಕೋರ್ ಹೆಲ್ತ್ಕೇರ್ ಸಿಇಒ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಮತ್ತು ಇತರ ರಿಲಯನ್ಸ್ ಇಂಡಸ್ಟ್ರೀಸ್ ಅಧಿಕಾರಿಗಳು ಶುಕ್ರವಾರ ನಸುಕಿನಲ್ಲಿ ತಿರುಮಲ ಬೆಟ್ಟಗಳಿಗೆ ಆಗಮಿಸಿದ್ದಾರೆ ಎಂದು ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪೂಜೆಯ ನಂತರ ಮುಕೇಶ್ ಅಂಬಾನಿ, ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎ ವೆಂಕಟ ಧರ್ಮ ರೆಡ್ಡಿ ಅವರಿಗೆ 1.5 ಕೋಟಿ ರೂಪಾಯಿಗಳ ಚೆಕ್ ಅನ್ನು ಹಸ್ತಾಂತರಿಸಿದರು. ಈ ವೇಳೆ ದೇವಾಲಯದಲ್ಲಿ ಆನೆಗಳಿಗೆ ಆಹಾರವನ್ನು ನೀಡಿದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಇತ್ತಿಚೆಗೆ ವಿಶ್ವದ ಸಿರಿವಂತ ದೇವಾಲಯಗಳಲ್ಲಿ ಒಂದಾದ ತಿರುಮಲ ತಿರುಪತಿ ದೇವಸ್ಥಾನ, ಹುಂಡಿ ಗಳಿಕೆಯಲ್ಲಿ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ. ಶ್ರಾವಣ ಮಾಸದಲ್ಲಿ ಶ್ರೀವಾರಿ ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ತಿರುಪತಿ ದೇವಾಲಯದಲ್ಲಿ ಹುಂಡಿಯ ಮೂಲಕ ಕೋಟಿ ಕೋಟಿ ದೇಣಿಗೆ ಮೊತ್ತ ಸಂಗ್ರಹವಾಗಿದೆ.
ಮೇ ತಿಂಗಳಲ್ಲಿ 130.29 ಕೋಟಿ, ಜೂನ್ನಲ್ಲಿ 123.76 ಕೋಟಿ, ಜುಲೈನಲ್ಲಿ 139.46 ಕೋಟಿ ಮತ್ತು ಆಗಸ್ಟ ತಿಂಗಳಲ್ಲಿ 140.34 ಕೋಟಿ ರೂಪಾಯಿ ಸಂಗ್ರಹವಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications