ರೆಬೆಲ್ ವೈಎಸ್ಆರ್ ಕಾಂಗ್ರೆಸ್ ಸಂಸದ ರಾಮಕೃಷ್ಣರಾಜುಗೆ ಜಾಮೀನು
ನವದೆಹಲಿ, ಮೇ 21: ವೈಎಸ್ಆರ್ ಕಾಂಗ್ರೆಸ್ ರೆಬೆಲ್ ಸಂಸದ ಕನಮುರಿ ರಘು ರಾಮಕೃಷ್ಣರಾಜು ಅವರಿಗೆ ಇಂದು ಸುಪ್ರೀಂಕೋರ್ಟ್ನಿಂದ ಜಾಮೀನು ಸಿಕ್ಕಿದೆ. ಆಂಧ್ರಪ್ರದೇಶ ಸಿಐಡಿ ಹೂಡಿರುವ ದೇಶದ್ರೋಹ ಪ್ರಕರಣದಲ್ಲಿ ಅವರಿಗೆ ಅಲ್ಲಿನ ಹೈಕೋರ್ಟ್ನಿಂದ ಜಾಮೀನು ಸಿಕ್ಕಿರಲಿಲ್ಲ. ಸಿಐಡಿ ಅಧಿಕಾರಿಗಳು ತಮ್ಮ ಮೇಲೆ ವಿವೇಚನೆ ಇಲ್ಲದೆ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅಳಲು ತೋಡಿಕೊಂಡಿದ್ದರು.
ತಾವು ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಕೂಡಲೇ ಜಾಮೀನು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿ ಅವರು ಮತ್ತೊಂದು ಅರ್ಜಿಯನ್ನು ಸಂಸದ ರಾಜು ಪರ ವಕೀಲ ಮುಕುಲ್ ರೋಹ್ಟಗಿ ಅವರು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದರು.
ಅರ್ಜಿಯನ್ನು ಪರಿಗಣಿಸಿದ ಪರಿಗಣಿಸಿದ ಸುಪ್ರೀಂಕೋರ್ಟ್ ವಿಭಾಗೀಯ ಪೀಠದ ನ್ಯಾ ವಿನೀತ್ ಸರನ್ ಹಾಗೂ ಬಿಆರ್ ಗವಾಯಿ ಸಿಕಂದರಾಬಾದ್ ಆರ್ಮಿ ಆಸ್ಪತ್ರೆಯಿಂದ ಲಭ್ಯವಾದ ವೈದ್ಯಕೀಯ ವರದಿ ಆಧಾರದ ಮೇಲೆ ರಾಜು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಷರತ್ತುಗಳಲ್ಲಿ ಮುಖ್ಯವಾಗಿ ಆಸ್ಪತ್ರೆಯಲ್ಲಿರುವಾಗ ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಬಾರದು ಎಂದು ಕೋರ್ಟ್ ಸೂಚಿಸಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ಸಿಎಂ ಜಗನ್ ಮೋಹನ್ ರೆಡ್ಡಿ ಅಧಿಕಾರ ದುರುಪಯೋಗ ಮಾಡಿಕೊಂಡು ಪೊಲೀಸರನ್ನು ನನ್ನ ವಿರುದ್ಧ ಎತ್ತಿ ಕಟ್ಟಿದ್ದಾರೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ಪಕ್ಷದ ನೇತಾರ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಜಾಮೀನು ಪಡೆದಿದ್ದು ಹೇಗೆ? ಎಂದು ಪ್ರಶ್ನಿಸಿ ರಾಮಕೃಷ್ಣರಾಜು ಸಾಮಾಜಿಕ ಜಾಲ ತಾಣಗಳಲ್ಲಿ ವಾಗ್ದಾಳಿ ನಡೆಸಿದ್ದರು. ತಮ್ಮ ವಿರುದ್ಧ ಹೂಡಲಾಗಿರುವ ಮೊಕದ್ದಮೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications