ಚಂದ್ರಬಾಬು ನಾಯ್ಡು ವಿರುದ್ಧ ಕ್ರೈಸ್ತ ಮುಖಂಡರ ಪ್ರತಿಭಟನೆ, ಟಿಡಿಪಿಗೆ ರಾಜೀನಾಮೆ
ಅಮರಾವತಿ, ಜನವರಿ 13: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಅವರ ತೆಲುಗು ದೇಶಂ ಪಕ್ಷಕ್ಕೆ ದೊಡ್ಡ ಆಘಾತ ಎದುರಾಗಿದೆ. ಕ್ರೈಸ್ತರ ಕುರಿತಾದ ಅವರ ಇತ್ತೀಚಿನ ಹೇಳಿಕೆಯನ್ನು ಖಂಡಿಸಿ ರಾಜ್ಯದ ಎಲ್ಲ 13 ಜಿಲ್ಲೆಗಳ ಕ್ರೈಸ್ತ ಮುಖಂಡರು ಟಿಡಿಪಿ ತ್ಯಜಿಸಿದ್ದಾರೆ. ಹಾಗೆಯೇ ನಾಯ್ಡು ಅವರು ತಮ್ಮ ಹೇಳಿಕೆ ಹಿಂಪಡೆದು ಕ್ಷಮೆ ಕೋರುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಪಕ್ಷದ ಪ್ರಣಾಳಿಕೆಯಲ್ಲಿ ಕ್ರೈಸ್ತರ ಕುರಿತು ನೀಡಿರುವ ಭರವಸೆಯ ವಿಚಾರದಲ್ಲಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರ ನಿಲುವನ್ನು ಅವರು ಪ್ರಶ್ನಿಸಿದ್ದಾರೆ. ಕ್ರೈಸ್ತರ ಕುರಿತಾದ ನಾಯ್ಡು ಅವರ ಹೇಳಿಕೆಗೆ ಸ್ಪಷ್ಟೀಕರಣ ನೀಡಬೇಕು ಎಂದು ಪಕ್ಷದ ಮಾಜಿ ರಾಜ್ಯ ಸಂಚಾಲಕ ಹಾಗೂ ಚಿತ್ತೂರು ಜಿಲ್ಲಾಧ್ಯಕ್ಷ ಯಲಮಂಚಿಲಿ ಪ್ರವೀಣ್ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಹಿಂದೂ ದೇವಾಲಯಗಳ ಮೇಲಿನ ದಾಳಿ ಹಾಗೂ ಹಿಂದೂ ದೇವತೆಗಳ ವಿಗ್ರಹಗಳನ್ನು ಹಾಳುಗೆಡವಿದ ಪ್ರಕರಣಗಳನ್ನು ಚಂದ್ರಬಾಬು ನಾಯ್ಡು ಪ್ರಶ್ನಿಸಿದ್ದರು. ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಜಗನ್ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದಿದ್ದರು.

ಶ್ರೀರಾಮನೊಂದಿಗೆ ಕ್ರಿಶ್ಚಿಯನ್ನನ್ನು ಹೇಗೆ ಹೋಲಿಕೆಮಾಡಲು ಸಾಧ್ಯ? ಘೋಷಣೆಗೆ ಸಹಿ ಹಾಕದೆ ಒಬ್ಬ ಕ್ರೈಸ್ತ ತಿರುಮಲ ದೇವಾಲಯಕ್ಕೆ ಪ್ರವೇಶಿಸಲು ಹೇಗೆ ಸಾಧ್ಯ? ಎಂದು ನಾಯ್ಡು ಕೇಳಿದ್ದರು. ಇದುವರೆಗೂ ಜಾತ್ಯತೀತ ನಿಲುವುಗಳನ್ನು ಪ್ರದರ್ಶಿಸಿಕೊಂಡು ಬರುತ್ತಿದ್ದ ಚಂದ್ರಬಾಬು ನಾಯ್ಡು ಈ ಬಾರಿ ಹಿಂದುತ್ವದ ಪರ ಮಾತನಾಡಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.
ನಾಯ್ಡು ಅವರು ನೀಡಿದ ಹೇಳಿಕೆ ನಮಗೆ ನೋವುಂಟುಮಾಡಿದೆ. ಅವರು ಇಡೀ ಕ್ರೈಸ್ತ ಸಮುದಾಯವನ್ನು ಅವಮಾನಿಸಿದ್ದಾರೆ. ಅವರು ನಮ್ಮ ಧರ್ಮದ ಬಗ್ಗೆ ಈ ರೀತಿ ಕೀಳಾಗಿ ಮಾತನಾಡಬಾರದಿತ್ತು ಎಂದು ಟಿಡಿಪಿ ಕ್ರೈಸ್ತ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ಹೇಳಿದ್ದಾರೆ.
ಟಿಡಿಪಿಯ ಮಾಜಿ ಶಾಸಕ ಫಿಲಿಪ್ ಸಿ ಟಾಚರ್ ಅವರು ನಾಯ್ಡು ಹೇಳಿಕೆ ಖಂಡಿಸಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಹಾಗೂ ಜಿಲ್ಲಾ ಘಟಕದ ಅನೇಕರು ಅವರನ್ನು ಅನುಸರಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications