ಕಣ್ಣಿಲ್ಲದ ಈಕೆ ಭಾರತದ ಶ್ರೀಮಂತ ಮಹಿಳೆ : ನಟ ಸೋನು ಸೂದ್ ಪ್ರಶಂಸೆ
ಅಮರಾವತಿ, ಮೇ. 14: ನಟ ಸೋನು ಸೋದ್ ತನ್ನ ಫೌಂಡೇಶನ್ ಮೂಲಕ ಕೊರೊನಾ ಸೋಂಕಿತರ ಜೀವ ಉಳಿಸುವ ಕಾರ್ಯ ಮಾಡಿ ಇಡೀ ಜಗತ್ತಿನಲ್ಲಿ ಪ್ರಶಂಸೆಗೆ ಪಾತ್ರ ರಾಗಿದ್ದಾರೆ. ರೀಲ್ನಲ್ಲಿ ವಿಲನ್ ರಿಯಲ್ ಜೀವನದಲ್ಲಿ ಹೀರೋ ಆಗಿ ಹೊರ ಹೊಮ್ಮಿರುವ ನಟ ಸೋನು ಸೂದ್ ಆಂಧ್ರ ಪ್ರದೇಶದ ಕಣ್ಣು ಕಾಣದ ಮಹಿಳೆಯ ಹೃದಯ ಶ್ರೀಮಂತಿಕೆ ನೋಡಿ ಪ್ರಶಂಸೆ ಮಾಡಿದ್ದಾರೆ. ಆಕೆಗೆ ಕಣ್ಣು ಇಲ್ಲದಿದ್ದರೂ ಭಾರತದ ಶ್ರೀಮಂತ ಮಹಿಳೆ ಎಂದು ಆಕೆಯನ್ನು ಕೊಂಡಾಡಿದ್ದಾರೆ.
ಆಕೆ ಬೇರೆ ಯಾರೂ ಇಲ್ಲ. ಆಂಧ್ರ ಪ್ರದೇಶದ ನಾವಿ ಬೊಡ್ಡು ನಾಗಲಕ್ಷ್ಮೀ. ಕಣ್ಣು ಕಾಣುವುದಿಲ್ಲ. ಸರ್ಕಾರದಿಂದ ಬರುವ ಪಿಂಚಣಿ ಹಣ ನೆಚ್ಚಿಕೊಂಡೇ ಜೀವನ ಸಾಗಿಸುತ್ತಿದ್ದಾರೆ. ಜತೆಗೆ ಯೂಟ್ಯೂಬ್ ಮಾಡುವ ಮೂಲಕ ಬೊಡ್ಡು ನಾಗಲಕ್ಷ್ಮೀ ಸಮಾಜಕ್ಕೆ ಚಿರ ಪರಿಚಿತಳು. ಸೋನು ಸೋದ್ ಅವರ ಸೇವೆ ನೋಡಿ, ಅವರ ಫೌಂಡೇಷನ್ಗೆ ತನ್ನ ಐದು ತಿಂಗಳ ಪಿಂಚಣಿ ಹಣ 15 ಸಾವಿರ ದಾನ ಮಾಡಿದ್ದಾಳೆ. ಈ ಮೂಲಕ ತನ್ನ ಹೃದಯ ಶ್ರೀಮಂತಿಕೆ ತೋರಿದ್ದಾರೆ.
ನಾಗಲಕ್ಷ್ಮೀಯ ಈ ಹೃದಯ ಶ್ರೀಮಂತಿಕೆಯನ್ನು ಕೊಂಡಾಡಿರುವ ನಟ ಸೋನು ಸೂದ್, ಆಕೆಯ ಪೋಟೊ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ಭಾರತದ ಶ್ರೀಮಂತ ಮಹಿಳೆ ಎಂದು ಪ್ರಶಂಸೆ ಮಾಡಿದ್ದಾರೆ. ಸದ್ಯ ಕೊರೊನಾ ಸೋಂಕಿತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸೋನು ಸೋದ್ ಅವರ ಫೌಂಡೇಶನ್ಗೆ ಅನೇಕರು ಕೈಲಾದ ಮಟ್ಟಿಗೆ ನೆರವು ನೀಡುತ್ತಿದ್ದಾರೆ. ಸೋನು ಸೂದ್ ಕೂಡ ತನ್ನ ಫೌಂಡೇಷನ್ ಮೂಲಕ ಕೊರೊನಾ ಸೋಂಕಿತರಿಗೆ ಉಚಿತ ಆಕ್ಸಿಜನ್ ಪೂರೈಕೆ ಮಾಡಿ ಜೀವ ಉಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಇತ್ತೀಚೆಗೆ ಚಿತ್ರದುರ್ಗಕ್ಕು ಸೋನು ಸೋದ್ ಅವರ ಫೌಂಡೇಷನ್ ವತಿಯಿಂದ ಆಕ್ಸಿಜನ್ ಪೂರೈಕೆ ಮಾಡಿ ಹಲವರ ಜೀವ ಉಳಿಸಲಾಗಿತ್ತು. ಇದಕ್ಕೂ ಮೊದಲು ಯಲಹಂಕದ ಖಾಸಗಿ ಆಸ್ಪತ್ರೆಗೆ ಎರಡು ತಾಸಿನಲ್ಲಿ ಹದಿನೆಂಟು ಆಕ್ಸಿಜನ್ ಸಿಲಿಂಡರ್ ಪೂರೈಕೆ ಮಾಡಿ ಹತ್ತು ಮಂದಿಯ ಜೀವ ಉಳಿಸುವಲ್ಲಿ ಸೋನು ಸೂದ್ ಫೌಂಡೇಶನ್ ಅಮೂಲ್ಯ ಸೇವೆ ಒದಗಿಸಿತ್ತು. ಇಡೀ ದೇಶ ವ್ಯಾಪ್ತಿ ಯಾವ ತಾರತಮ್ಯ ಇಲ್ಲದೇ ಸೋನು ಸೋದ್ ಫೌಂಡೇಷನ್ ಆಕ್ಸಿಜನ್ ಮತ್ತು ಕೊರೊನಾ ಸೋಂಕಿತರಿಗೆ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡುತ್ತಿದೆ. ಇದೀಗ ಆಂಧ್ರ ಪ್ರದೇಶದ ಕಣ್ಣು ಕಾಣದ ಮಹಿಳೆ ತನ್ನ ಐದು ತಿಂಗಳ ಪಿಂಚಣಿ ದಾನ ನೀಡಿರುವುದು ಇಡೀ ದೇಶದಲ್ಲೆಡೆ ಚರ್ಚೆಗೆ ನಾಂದಿ ಹಾಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications