ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಕ್ಷ್ಮೀ ನರಸಿಂಹ ದೇವಾಲಯದ ರಥ ಬೆಂಕಿಗೆ ಅಹುತಿ

|
Google Oneindia Kannada News

ಅಮರಾವತಿ, ಸೆಪ್ಟೆಂಬರ್ 06 : ಆಂಧ್ರ ಪ್ರದೇಶದ ಶ್ರೀ ಲಕ್ಷ್ಮೀ ನರಸಿಂಹ ದೇವಾಲಯದ ರಥ ಬೆಂಕಿಗೆ ಆಹುತಿಯಾಗಿದೆ. ಅಗ್ನಿ ಅಕಸ್ಮಿಕದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಭಾನುವಾರ ಮುಂಜಾನೆ ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಸಖಿನೇತಿಪಲ್ಲಿ ತಾಲೂಕಿನಲ್ಲಿನ ಅಂತರ್ವೇದಿಯಲ್ಲಿರುವ ದೇವಾಲಯದ ರಥಕ್ಕೆ ಬೆಂಕಿ ತಗುಲಿದೆ. ರಥದ ಕೊಟ್ಟಿಗೆಯಲ್ಲಿದ್ದ ರಥ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಭೋಗನಂದೀಶ್ವರ ದೇವಾಲಯ ಅರ್ಚಕರಿಗೆ ಕೊರೊನಾ ಸೋಂಕು ದೃಢಭೋಗನಂದೀಶ್ವರ ದೇವಾಲಯ ಅರ್ಚಕರಿಗೆ ಕೊರೊನಾ ಸೋಂಕು ದೃಢ

ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಗ್ನಿ ಆಕಸ್ಮಿಕದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಎಂದು ತನಿಖೆ ನಡೆದಿದೆ.

ಹಿಂದೂ ಧರ್ಮದ ಪ್ರಸಿದ್ಧ ದೇವಾಲಯ ಚಿದಂಬರಂ ಬಗ್ಗೆ ಗಾಲಿ ರೆಡ್ಡಿ ಹಿಂದೂ ಧರ್ಮದ ಪ್ರಸಿದ್ಧ ದೇವಾಲಯ ಚಿದಂಬರಂ ಬಗ್ಗೆ ಗಾಲಿ ರೆಡ್ಡಿ

Temple Chariot

ಅಂತರ್ವೇದಿಯ ಶ್ರೀ ಲಕ್ಷ್ಮೀ ನರಸಿಂಹ ದೇವಾಲಯವನ್ನು ದಕ್ಷಿಣ ಕಾಶಿ ಎಂದು ಕರೆಯಲಾಗುತ್ತದೆ. ಭಾರತದಲ್ಲಿರುವ 104 ಶ್ರೀ ಲಕ್ಷ್ಮೀ ನರಸಿಂಹ ದೇವಾಲಯಗಳಲ್ಲಿ ಇದು ಸಹ ಒಂದಾಗಿದೆ.

ಭಕ್ತರ ಗೊಂದಲಗಳಿಗೆ ತೆರೆ ಎಳೆದ ತಿರುಪತಿ ದೇವಾಲಯ ಭಕ್ತರ ಗೊಂದಲಗಳಿಗೆ ತೆರೆ ಎಳೆದ ತಿರುಪತಿ ದೇವಾಲಯ

ಗ್ರಹ ದೋಷದಿಂದ ಬಳುತ್ತಿರುವವರು ಅದರಲ್ಲು ಕುಜ ದೋಷದಲ್ಲಿ ಇರುವವರು ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರೆ ತೊಂದರೆ ನಿವಾರಣೆಯಾಗಲಿದೆ ಎಂಬ ನಂಬಿಕೆಯೂ ಇದೆ.

English summary
Chariot of Andhra Pradesh Sri Lakshmi Narasimha temple caught fire around 3 am. There is no any injury. Temple of in East Godavari district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X