ಲಾಕ್ ಡೌನ್ ತೆರವುಗೊಂಡ ನಂತರ ತಿರುಪತಿ ತಿಮ್ಮಪ್ಪನ 2ವಾರದ ಆದಾಯ ಪ್ರಕಟ
ಅಮರಾವತಿ, ಜೂನ್ 25: ಸುದೀರ್ಘ ಅವಧಿಯ ಲಾಕ್ ಡೌನ್ ನಂತರ ಭಕ್ತರಿಗೆ ದರ್ಶನಕ್ಕೆ ಮುಕ್ತವಾದ ತಿರುಮಲ ವೆಂಕಟೇಶ್ವರಸ್ವಾಮಿ ದೇವಾಲಯದ ಎರಡು ವಾರಗಳ ಆದಾಯ ಎಷ್ಟು ಎನ್ನುವುದನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಪ್ರಕಟಿಸಿದೆ.
ಜೂನ್ ಹನ್ನೊಂದರಿಂದ ಓಪನ್ ಆಗಿರುವ ದೇವಸ್ಥಾನದ ಎರಡು ವಾರದ ಆದಾಯ 7.5 ಕೋಟಿ. ಲಾಕ್ ಡೌನ್ ಅವಧಿಯಲ್ಲಿ ದೇವಸ್ಥಾನ ಬಂದ್ ಆಗಿದ್ದರಿಂದ ಸುಮಾರು ಐನೂರು ಕೋಟಿ ರೂಪಾಯಿ ಟಿಟಿಡಿಗೆ ನಷ್ಟವಾಗಿತ್ತು.
"ಹುಂಡಿಯಲ್ಲಿ ಆರು ಕೋಟಿ ಸಂಗ್ರಹವಾಗಿದ್ದರೆ, ಮುನ್ನೂರು ರೂಪಾಯಿಯ ಆನ್ಲೈನ್ ದರ್ಶನದ ಟಿಕೆಟಿನಿಂದ 1.5 ಕೋಟಿ ಸಂಗ್ರಹವಾಗಿದೆ. ಹುಂಡಿಯಲ್ಲಿ ಭಕ್ತರು ಸಮರ್ಪಿಸಿರುವ, ಚಿನ್ನ, ಬೆಳ್ಳಿ ಮತ್ತು ಇತರ ವಸ್ತುಗಳ ಮೌಲ್ಯವು ಇದರಲ್ಲಿ ಸೇರಿಲ್ಲ" ಎಂದು ಟಿಟಿಡಿ ಅಧಿಕಾರಿಗಳು ಹೇಳಿದ್ದಾರೆ.

"ಜೂನ್ 21ರಂದು ಒಂದೇ ದಿನ ಹುಂಡಿಯಲ್ಲಿ 67ಲಕ್ಷ ರೂಪಾಯಿ ಸಂಗ್ರಹವಾಗಿದ್ದರೆ, ಜೂನ್ 17ರಂದು 37 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಸಾಕಷ್ಟು ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಲಬೇಕಿರುವುದರಿಂದ, ದೇವಸ್ಥಾನ ಪುನರಾರಂಭಗೊಂಡ ಮೊದಲಿನಲ್ಲಿ ಆರು ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು"ಎಂದು ಟಿಟಿಡಿ ಅಧಿಕಾರಿಗಳು ಹೇಳಿದ್ದಾರೆ.
"ಈಗ ಮುನ್ನೂರು ರೂಪಾಯಿಯ ಟಿಕೆಟ್ ಹೊಂದಿರುವ ಆರು ಸಾವಿರ ಭಕ್ತರಿಗೆ ಮತ್ತು ಮೂರು ಸಾವಿರ ಭಕ್ತರಿಗೆ ಧರ್ಮದರ್ಶನದ ಮೂಲಕ, ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ"ಎಂದು ಟಿಟಿಡಿ ಅಧಿಕಾರಿಗಳು ಹೇಳಿದ್ದಾರೆ.
"ಲಾಕ್ ಡೌನ್ ತೆರವುಗೊಂಡ ನಂತರ ಇದುವರೆಗೆ ಸುಮಾರು 25ಸಾವಿರ ಭಕ್ತರು ಮುಡಿ ಅರ್ಪಿಸಿದ್ದಾರೆ. ಹಂತ ಹಂತವಾಗಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ" ಎಂದು ಟಿಟಿಡಿ ಅಧಿಕಾರಿಗಳು ಹೇಳಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications