ಪವನ್ ಕಲ್ಯಾಣ್ ಬೆಂಬಲ ಶೇ 200ರಷ್ಟು ಇದೆ: ತಿರುಪತಿ ಬಿಜೆಪಿ ಅಭ್ಯರ್ಥಿ ರತ್ನಪ್ರಭ ವಿಶ್ವಾಸ
ತಿರುಪತಿ, ಮಾರ್ಚ್ 29: ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಕೆ. ರತ್ನಪ್ರಭ, ಸಂಸತ್ನಲ್ಲಿ ತಿರುಪತಿ ಮತ್ತು ಆಂಧ್ರಪ್ರದೇಶದ ಜನರ ಧ್ವನಿಯಾಗುವುದಾಗಿ ತಿಳಿಸಿದ್ದಾರೆ.
ತಿರುಪತಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಭಾನುವಾರ ಮೊದಲ ಬಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರತ್ನಪ್ರಭ, ದೇವರ ಆಶೀರ್ವಾದಿಂದ ತಮಗೆ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು, ಯಾವುದೇ ವೇದಿಕೆಯಲ್ಲಿ ಅಭಿವೃದ್ಧಿಯ ಅಗತ್ಯವಾದ ಯಾವುದೇ ಕ್ರಮಕ್ಕೆ ಮುಂದಾಗಲು ಮತ್ತು ಅಗತ್ಯಬಿದ್ದರೆ ಪ್ರಧಾನಿ ಬಳಿ ಧ್ವನಿ ಎತ್ತಲು ಕೂಡ ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
22 ಸಂಸದರಿದ್ದರೂ ನಮ್ಮ ಸಮಸ್ಯೆಗಳು ಎದ್ದು ಕಾಣಿಸುತ್ತಿಲ್ಲ ಮತ್ತು ನಮ್ಮ ಧ್ವನಿಯನ್ನು ಆಲಿಸುತ್ತಿಲ್ಲ ಎಂದು ವೈಎಸ್ಆರ್ ಕಾಂಗ್ರೆಸ್ ಸಂಸದರನ್ನು ಪರೋಕ್ಷವಾಗಿ ಟೀಕಿಸಿದ ರತ್ನಪ್ರಭ, ರಾಜ್ಯದ ಒಳಿತಿಗಾಗ ಹೋರಾಡಲು ತಮಗೆ ಚುನಾವಣೆಯಲ್ಲಿ ಗೆಲುವು ನೀಡಬೇಕು ಎಂದು ಕೋರಿದರು. ತಾವು ಆಂಧ್ರಪ್ರದೇಶದ ಮಣ್ಣಿನ ಮಗಳು. ಆಂಧ್ರಪ್ರದೇಶ ಜನ್ಮಭೂಮಿ ಮತ್ತು ಕರ್ನಾಟಕ ತಮ್ಮ ಕರ್ಮಭೂಮಿ ಎಂದರು.

ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ತಮ್ಮ ಬಯಕೆಯ ಕಾರಣಕ್ಕೆ ನಿವೃತ್ತಿ ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದಾಗಿ ತಿಳಿಸಿದ ಅವರು, ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷ ಈ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುತ್ತಿಲ್ಲ ಎಂಬ ಹೇಳಿಕೆಗಳು ಶೇ 200ರಷ್ಟು ಸತ್ಯಕ್ಕೆ ದೂರ ಎಂದರು.
'ನನ್ನ ಕೋರಿಕೆಯಂತೆ ಪವನ್ ಕಲ್ಯಾಣ್ ಅವರು ಪ್ರಚಾರದಲ್ಲಿ ಭಾಗವಹಿಸುವ ಭರವಸೆ ನೀಡಿದ್ದಾರೆ. ತಮ್ಮ ಪ್ರವಾಸಕ್ಕೆ ನಕಾಶೆ ಸಿದ್ಧಪಡಿಸುವಂತೆ ತಿಳಿಸಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಜನ ಸೇನಾ ಜತೆಗೂಡಿ ಕೆಲಸ ಮಾಡಲಿವೆ' ಎಂದು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications