ಆಗಸ್ಟ್ 18ರಿಂದ ಅಕ್ಟೋಬರ್ನ ತಿರುಪತಿ ಆನ್ಲೈನ್ ದರ್ಶನಕ್ಕೆ ಟಿಕೆಟ್ ಬಿಡುಗಡೆ
ತಿರುಮಲ, ಆಗಸ್ಟ್ 17: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಮಲದ ಏಳನೇ ಬೆಟ್ಟದ ಮೇಲಿರುವ ತಿರುಪತಿ ದೇವಸ್ಥಾನವು ಪ್ರಪಂಚದಲ್ಲೇ ಅತ್ಯಂತ ಪ್ರಸಿದ್ಧ ಮತ್ತು ಶ್ರೀಮಂತ ದೇವಾಲಯವಾಗಿದೆ. ಹೀಗಾಗಿ ಇಲ್ಲಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಕೂಡ ಅಧಿಕ. ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಅಕ್ಟೋಬರ್ನ ಆನ್ಲೈನ್ ದರ್ಶನದ ಟಿಕೆಟ್ಗಳನ್ನು ಗುರುವಾರ ಬಿಡುಗಡೆ ಮಾಡಲಿದೆ.
ನಾಳೆಯಿಂದ ಭಕ್ತರು ಅಕ್ಟೋಬರ್ ಆನ್ಲೈನ್ ದರ್ಶನಕ್ಕಾಗಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಟಿಕೆಟ್ ಅನ್ನು 300 ರೂಗಳಿಗೆ ಖರೀದಿಸಬಹುದು. ಅಕ್ಟೋಬರ್ ತಿಂಗಳಿನಲ್ಲಿ ತಿರುಮಲ ತಿರುಪತಿಯ ವಿಶೇಷ ಪ್ರವೇಶ ದರ್ಶನಕ್ಕಾಗಿ (ಎಸ್ಇಡಿ) 18 ಆಗಸ್ಟ್ 2022 ರಂದು ಟಿಕೆಟ್ಗಳನ್ನು ನೀಡಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಪ್ರಕಟಿಸಿವೆ. ಆದಾಗ್ಯೂ, ಒಂಬತ್ತು ದಿನಗಳ ವೆಂಕಟೇಶ್ವರನ ವಾರ್ಷಿಕ ಬ್ರಹ್ಮೋತ್ಸವಗಳಲ್ಲಿ ವಿಶೇಷ ಮತ್ತು ವಿಶೇಷ ದರ್ಶನಗಳ ಎಲ್ಲಾ ಸ್ವರೂಪಗಳನ್ನು ಟಿಟಿಡಿ ರದ್ದುಗೊಳಿಸಿದೆ. ಈ ಅವಧಿಯಲ್ಲಿ ಸರ್ವ ದರ್ಶನ ಮಾತ್ರ ಜಾರಿಯಾಗಲಿದೆ.

ಭಕ್ತರು ಈಗ ದರ್ಶನಕ್ಕಾಗಿ ಅಧಿಕೃತ ವೆಬ್ಸೈಟ್ನಿಂದ ತಿರುಮಲ ತಿರುಪತಿ ದೇವಸ್ಥಾನಂನ ಟಿಕೆಟ್ ಅನ್ನು 300 ರೂಗಳಿಗೆ ಖರೀದಿಸಬಹುದು. ಆಸಕ್ತರು 300 ರೂಪಾಯಿ ಮೌಲ್ಯದ ಟಿಕೆಟ್ಗಳನ್ನು ಆನ್ಲೈನ್ನಲ್ಲಿ ಬೆಳಗ್ಗೆ 9 ಗಂಟೆಯಿಂದ ಬುಕ್ ಮಾಡಬಹುದು. ಕೊವಿಡ್-19 ಮುನ್ನೆಚ್ಚರಿಕೆಗಳನ್ನು ಯಾತ್ರಾರ್ಥಿಗಳು ಟಿಕೆಟ್ಗಳನ್ನು ಕಾಯ್ದಿರಿಸುವಾಗ ಗಮನಿಸಲು ಮತ್ತು ಟಿಟಿಡಿ ಆಡಳಿತದೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.

ಬ್ರಹ್ಮೋತ್ಸವವು ಸೆಪ್ಟೆಂಬರ್ 27 ರಂದು ದ್ವಜಾರೋಹಣದೊಂದಿಗೆ ಪ್ರಾರಂಭಗೊಂಡು ಅಕ್ಟೋಬರ್ 5 ರಂದು ಚಕ್ರಸ್ನಾನದೊಂದಿಗೆ ಮುಕ್ತಾಯಗೊಳ್ಳಲಿದೆ. ಸಂಬಂಧಪಟ್ಟ ಅಧಿಕಾರಿಗಳು ಬದಲಾವಣೆಗಳನ್ನು ಗಮನಿಸಿ ಅದರಂತೆ ತೀರ್ಥಯಾತ್ರೆಯನ್ನು ಯೋಜಿಸುವಂತೆ ಭಕ್ತರಲ್ಲಿ ಮನವಿ ಮಾಡಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications