ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೆಸ್ ಬ್ಯಾಂಕ್ ಆರ್ಥಿಕ ಸಂಕಷ್ಟ; ತಿರುಪತಿ ತಿಮ್ಮಪ್ಪನಿಗೆ ಮೊದಲೇ ಗೊತ್ತಿತ್ತಾ?

|
Google Oneindia Kannada News

ಅಮರಾವತಿ, ಮಾರ್ಚ್ 6: ದೇಶದ ಬ್ಯಾಂಕಿಂಗ್ ವಲಯದಲ್ಲಿ ಯೆಸ್ ಬ್ಯಾಂಕ್ ಬಿರುಗಾಳಿ ಎಬ್ಬಿಸಿದೆ. ಯೆಸ್ ಬ್ಯಾಂಕ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದರಿಂದ ಬ್ಯಾಂಕ್ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದಾರೆ.

Recommended Video

ಬ್ಯಾಂಕ್ ನಲ್ಲಿಟ್ಟಿದ್ದ ಹಣವನ್ನು ವಾಪಸ್ ಪಡೆದಿದ್ದ TTD

ಬ್ಯಾಂಕ್‌ ಠೇವಣಿದಾರರು ತಮ್ಮ ಹಣ ವಾಪಸ್ ಸಿಗುತ್ತೋ ಇಲ್ಲವೋ ಎಂದು ಚಿಂತಾಕ್ರಾಂತರಾಗಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಗ್ರಾಹಕರಿಗೆ ಅಭಯ ನೀಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಯೆಸ್ ಬ್ಯಾಂಕ್ ಸಂಕಷ್ಟದ ಕುರಿತು ಮೇಲಿಂದ ಮೇಲೆ ಸಭೆಗಳನ್ನು ನಡೆಸುತ್ತಿದ್ದಾರೆ. ಮುಂದೆನಾಗುತ್ತೋ ಎಂದು ಬ್ಯಾಂಕ್ ಗ್ರಾಹಕರು ಕಾಲ ಕಳೆಯುತ್ತಿದ್ದಾರೆ.

ಯೆಸ್ ಬ್ಯಾಂಕ್ ಕುರಿತು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟುಯೆಸ್ ಬ್ಯಾಂಕ್ ಕುರಿತು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು

ಆದರೆ, ಯೆಸ್ ಬ್ಯಾಂಕ್‌ನ ಆರ್ಥಿಕ ದಿವಾಳಿತನ ಮುನ್ಸೂಚನೆಯ ಸುಳಿವು ದೇಶದ ಶ್ರೀಮಂತ ದೇವಸ್ಥಾನವಾದ ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿಗೆ (ಟಿಟಿಡಿ) ಮುಂಚಿತವಾಗಿಯೇ ಸಿಕ್ಕಿತ್ತಾ? ಎನ್ನುವ ವರದಿಗಳು ಬಂದಿವೆ. ಯೆಸ್ ಬ್ಯಾಂಕ್ ದಿವಾಳಿ ಎಳುವ ಮುನ್ಸೂಚನೆಯಿಂದ ಬ್ಯಾಂಕ್‌ನಲ್ಲಿ ಇರಿಸಿದ್ದ ಅಪಾರ ಪ್ರಮಾಣದ ಠೇವಣಿ ಹಣವನ್ನು ಟಿಟಿಡಿ ಈ ಹಿಂದೆಯೇ ವಾಪಸ್ ಪಡೆದಿತ್ತು ಎಂದು ತಿಳಿದು ಬಂದಿದೆ.

ಬ್ಯಾಂಕ್‌ ದಿವಾಳಿ ಆಗುವ ಮುನ್ಸೂಚನೆ

ಬ್ಯಾಂಕ್‌ ದಿವಾಳಿ ಆಗುವ ಮುನ್ಸೂಚನೆ

ಭಕ್ತರಿಂದ ತನ್ನಲ್ಲಿ ಜಮೆಯಾಗುವ ಅಪಾರ ಪ್ರಮಾಣದ ಹುಂಡಿ ಹಣ ಹಾಗೂ ಟಿಟಿಡಿಗೆ ಬರುವ ಆದಾಯವನ್ನು ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಠೇವಣಿ ರೂಪದಲ್ಲಿ ವಿವಿಧ ಬ್ಯಾಂಕ್‌ಗಳಲ್ಲಿ ಇರಿಸುತ್ತದೆ. ಇದರಿಂದ ದೇವಸ್ಥಾನಕ್ಕೆ ಬಡ್ಡಿಯ ರೂಪದಲ್ಲಿ ಮತ್ತಷ್ಟು ಹಣ ಹರಿದು ಬರುತ್ತದೆ. ಯೆಸ್ ಬ್ಯಾಂಕ್‌ನಲ್ಲೂ ಟಿಟಿಡಿ 1300 ಕೋಟಿ ರುಪಾಯಿಗೂ ಹೆಚ್ಚು ಮೊತ್ತದ ಹಣವನ್ನು ಇಟ್ಟಿತ್ತು. ಯಶ್ ಬ್ಯಾಂಕ್‌ ದಿವಾಳಿ ಆಗುವ ಮುನ್ಸೂಚನೆ ಅರಿತ ಟಿಟಿಡಿ ಬೃಹತ್ ಪ್ರಮಾಣದ ಹಣವನ್ನು ವಾಪಸ್ ಪಡೆದು ಬೇರೆಡೆ ಹೂಡಿಕೆ ಮಾಡಿದೆ.

1300 ಕೋಟಿ ರುಪಾಯಿ ಹಿಂತೆಗೆತ

1300 ಕೋಟಿ ರುಪಾಯಿ ಹಿಂತೆಗೆತ

ಯೆಸ್ ಬ್ಯಾಂಕ್ ದಿವಾಳಿ ಏಳಬಹುದು ಎಂದು ಕಳೆದ ಅಕ್ಟೋಬರ್‌ನಲ್ಲಿ ಟಿಟಿಡಿ 1300 ಕೋಟಿ ರುಪಾಯಿಯನ್ನು ಹಿಂದಕ್ಕೆ ಪಡೆದಿದೆ. ಹಣವನ್ನು ದೇವಸ್ಥಾನದ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಬಳಸಲು ಸಮಿತಿ ತೀರ್ಮಾನದಂತೆ ಹಿಂತೆಗೆಯಲಾಗಿತ್ತು. "ಈಗಿನ ಯೆಸ್ ಬ್ಯಾಂಕ್ ಬೆಳವಣಿಗೆಗಳಿಗೂ ಹಣ ಹಿಂತೆಗೆತಕ್ಕೂ ಯಾವುದೇ ಸಂಬಂಧವಿಲ್ಲ. ಸಮಿತಿ ಖಾಸಗಿ ಬ್ಯಾಂಕ್‌ಗಳಲ್ಲಿ ದೊಡ್ಡ ಮೊತ್ತದ ಹಣ ಠೇವಣಿ ಇಡಬಾರದು ಎಂಬ ನಿರ್ಧಾರ ತೆಗೆದುಕೊಂಡಿತ್ತು" ಎಂದು ಟಿಟಿಡಿ ಅಧ್ಯಕ್ಷ ಸುಬ್ಬಾ ರೆಡ್ಡಿ ಮಾಧ್ಯಮಗಳಿಗೆ ಹೇಳಿದ್ದಾರೆ.

ಯೆಸ್‌ ಬ್ಯಾಂಕ್ ಠೇವಣಿದಾರರು 50 ಸಾವಿರಕ್ಕಿಂತ ಹೆಚ್ಚು ಹಣ ವಿತ್‌ ಡ್ರಾ ಮಾಡುವಂತಿಲ್ಲಯೆಸ್‌ ಬ್ಯಾಂಕ್ ಠೇವಣಿದಾರರು 50 ಸಾವಿರಕ್ಕಿಂತ ಹೆಚ್ಚು ಹಣ ವಿತ್‌ ಡ್ರಾ ಮಾಡುವಂತಿಲ್ಲ

ಬ್ಯಾಂಕ್ ಮೇಲೆ ಸಾಕಷ್ಟು ನಿರ್ಭಂಧ

ಬ್ಯಾಂಕ್ ಮೇಲೆ ಸಾಕಷ್ಟು ನಿರ್ಭಂಧ

ಭಾರತೀಯ ರಿಸರ್ವ್ ಬ್ಯಾಂಕ್ ಯೆಸ್ ಬ್ಯಾಂಕ್ ಮೇಲೆ ಸಾಕಷ್ಟು ನಿರ್ಭಂಧಗಳನ್ನು ಹೇರಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಎಲ್ಲಾ ಖಾತೆಗಳನ್ನೂ ಒಳಗೊಂಡಂತೆ ಬ್ಯಾಂಕ್ ಗ್ರಾಹಕರು ಮಾರ್ಚ್‌ 31 ರ ವರಗೆ ಕೇವಲ 50 ಸಾವಿರ ರುಪಾಯಿಗಳನ್ನು ಮಾತ್ರ ಹಿಂತೆಗೆಯಬೇಕು ಎಂದು ಆರ್‌ಬಿಐ ಹೇಳಿದೆ.

ಪ್ರಶಾಂತ್ ಕುಮಾರ್ ಅಧ್ಯಕ್ಷ

ಪ್ರಶಾಂತ್ ಕುಮಾರ್ ಅಧ್ಯಕ್ಷ

ಸದ್ಯ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿಯೆಸ್ ಬ್ಯಾಂಕ್ ಆಡಳಿತ ಮಂಡಳಿಯನ್ನು ಆರ್‌ಬಿಐ ವಜಾಗೊಳಿಸಿದೆ. ಎಸ್‌ಬಿಐನ ಮಾಜಿ ಸಿಎಫ್ ಓ ಪ್ರಶಾಂತ್ ಕುಮಾರ್ ಅವರನ್ನು ಆಡಳಿತ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಬ್ಯಾಂಕ್‌ನ್ನು ಎಸ್‌ಬಿಐನೊಂದಿಗೆ ವಿಲೀನ ಮಾಡಲಾಗುತ್ತಿದೆ ಎನ್ನಲಾಗಿದೆ.

ಯೆಸ್ ಬ್ಯಾಂಕ್ ಸ್ಥಗಿತ, 3 ಲಕ್ಷ ಕೋಟಿ ನಷ್ಟ, ಡಿಜಿಟಲ್ ಪೇಮೆಂಟ್ ಡೌನ್ಯೆಸ್ ಬ್ಯಾಂಕ್ ಸ್ಥಗಿತ, 3 ಲಕ್ಷ ಕೋಟಿ ನಷ್ಟ, ಡಿಜಿಟಲ್ ಪೇಮೆಂಟ್ ಡೌನ್

English summary
Tirupati Tirumala Temple TTD withdraw Rs 1300 CR From Yes Bank in Oct 2019. TTD officials Confirms it. Reports says, it was withdrawn from ttd after realizing that YES Bank Bankruptcy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X