ಸಿಎಂ ಜಗನ್ ಆರೋಪದ ನಡುವೆ ಆಂಧ್ರ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ
ಅಮರಾವತಿ, ಡಿಸೆಂಬರ್ 16: ಸುಪ್ರೀಂ ಕೋರ್ಟ್ ಕೊಲೀಜಿಯಂ ಆಂಧ್ರ ಪ್ರದೇಶದ ನ್ಯಾಯಮೂರ್ತಿ ಜೆ.ಕೆ. ಮಾಹೇಶ್ವರಿ ಒಳಗೊಂಡಂತೆ ವಿವಿಧ ಹೈಕೋರ್ಟ್ ಗಳ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡುವಂತೆ ಶಿಫಾರಸ್ಸು ಮಾಡಿದೆ.
ಮಂಗಳವಾರ ನಡೆದ ಬೆಳವಣಿಗೆಯಂತೆ, ಜೆ.ಕೆ. ಮಾಹೇಶ್ವರಿ ಅವರನ್ನು ಸಿಕ್ಕಿಂಗೆ ವರ್ಗಾವಣೆ ಮಾಡಲಾಗಿದ್ದು, ಪಂಜಾಬ್, ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರನ್ನು ಒಡಿಶಾದ ಮುಖ್ಯ ನ್ಯಾಯಮೂರ್ತಿಯಾಗಿ ನಿಯೋಜಿಸಲು ಶಿಫಾರಸ್ಸು ಮಾಡಿರುವುದಾಗಿ ತಿಳಿದುಬಂದಿದೆ.
ಮತ್ತಷ್ಟು ನ್ಯಾಯಮೂರ್ತಿಗಳ ವರ್ಗಾವಣೆ ಸಂಬಂಧ ಕಾನೂನು ಸಚಿವರಿಗೆ ಶಿಫಾರಸ್ಸು ಕಳಿಸಲಾಗುವುದೆಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶ ಹಾಗೂ ಸಿಕ್ಕಿಂನ ಮುಖ್ಯ ನ್ಯಾಯಮೂರ್ತಿಗಳು ಸಿಕ್ಕಿಂನ ಗಾಂಗ್ಟಕ್ ಗೆ ತೆರಳುತ್ತಿರುವ ಮುಖ್ಯ ನ್ಯಾಯಮೂರ್ತಿ ಜೆ.ಕೆ. ಮಾಹೇಶ್ವರಿ ಹಾಗೂ ಮುಖ್ಯ ನ್ಯಾಯಮೂರ್ತಿ ಅರುಪ್ ಕುಮಾರ್ ಗೋಸ್ವಾಮಿ ಅವರ ಸ್ಥಳಗಳಿಗೆ ನಿಯೋಜನೆಗೊಳ್ಳಲಿರುವುದಾಗಿ ತಿಳಿದುಬಂದಿದೆ.
ಈಚೆಗೆ ಆಂಧ್ರ ಪ್ರದೇಶ ಹೈಕೋರ್ಟ್ ವಿವಾದಕ್ಕೆ ಸಿಲುಕಿದ್ದು, ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ, ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿಗಳು ಹೈಕೋರ್ಟ್ ನ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ವರ್ಗಾವಣೆಯ ಬೆಳವಣಿಗೆ ನಡೆದಿದೆ.
ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ಎಸ್ ಮುರಳೀಧರ್ ಅವರನ್ನು ಒಡಿಶಾ ಹೈಕೋರ್ಟ್ ಗೆ ನಿಯೋಜಿಸಿರುವುದಾಗಿ ತಿಳಿದುಬಂದಿದೆ. ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರನ್ನು ಜಮ್ಮು ಹಾಗೂ ಕಾಶ್ಮೀರದ ಮುಖ್ಯ ನ್ಯಾಯಮೂರ್ತಿಯಾಗಿ ಹಾಗೂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನು ತೆಲಂಗಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಶಿಫಾರಸ್ಸು ಮಾಡಿರುವುದಾಗಿ ತಿಳಿದುಬಂದಿದೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications