ಟೆಕ್ಕಿ ಎನ್. ಮನೋಜ್ಞ ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು
ಅಮರಾವತಿ, ಸೆಪ್ಟೆಂಬರ್ 04: ಗುಂಟೂರು ಮೂಲಕ ಸಾಫ್ಟ್ವೇರ್ ಇಂಜಿನಿಯರ್ ಎನ್. ಮನೋಜ್ಞ ಸಾವಿನ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. 9 ತಿಂಗಳ ಮಗು ತುಳಸಿ ಜೊತೆ ಮನೋಜ್ಞ ಮೃತದೇಹ ಆಗಸ್ಟ್ 29ರಂದು ಪತ್ತೆಯಾಗಿತ್ತು.
29 ವರ್ಷದ ಎನ್. ಮನೋಜ್ಞ ಶವ ಪರೀಕ್ಷೆಗೂ 36 ರಿಂದ 48 ಗಂಟೆಗಳ ಮೊದಲು ಮೃತಪಟ್ಟಿದ್ದಾಳೆ. ತಲೆಗೆ ಆದ ಗಂಭೀರಗಾಯದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ಹೇಳಿದೆ.
ಮನೋಜ್ಞ ಕುಟುಂಬ ಸದಸ್ಯರು ಆಕೆಯ ಪತಿ ಕಲ್ಯಾಣ ಚಂದ್ರ ಮತ್ತು ಅತ್ತೆ ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಮೂರು ವರ್ಷಗಳ ಹಿಂದೆ ಮನೋಜ್ಞ ಮತ್ತು ಕಲ್ಯಾಣ ಚಂದ್ರ ವಿವಾಹ ನಡೆದಿತ್ತು.

ಘಟನೆ ವಿವರ: ಗಂಟೂರಿನ ಲಕ್ಷ್ಮೀಪುರಂ ಬಡಾವಣೆಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಮನೋಜ್ಞ, ಕಲ್ಯಾಣ ಚಂದ್ರ 9 ತಿಂಗಳ ತುಳಸಿ ಎಂಬ ಮಗುವಿನ ಜೊತೆ ನೆಲೆಸಿದ್ದರು. ಕಲ್ಯಾಣ ಚಂದ್ರ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು.
ಆಗಸ್ಟ್ 29ರಂದು ಮಜೋಜ್ಞ, 9 ತಿಂಗಳ ಮಗುವಿನ ಜೊತೆ ಅಪಾರ್ಟ್ಮೆಂಟ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅತ್ತೆ ಹೇಳಿಕೆ ನೀಡಿದ್ದರು. ಮಜೋಜ್ಞ ದೇಹದಲ್ಲಿ ಕೋವಿಡ್ ಸೋಂಕು ಸಹ ಪತ್ತೆಯಾಗಿತ್ತು.
ಮನೆಯಲ್ಲಿ ಹೆಚ್ಚುವರಿ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ತಾಯಿಯ ಬಳಿ ಮನೋಜ್ಞ ಹೇಳಿದ್ದರು. ಹೈದರಾಬಾದ್ನ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಕೆಲಸ ಬಿಟ್ಟಿದ್ದರು.
ಮರಣೋತ್ತರ ಪರೀಕ್ಷೆ ವರದಿ ಪ್ರಕಾರ ಮನೋಜ್ಞ ತಲೆಗೆ ಆದ ಗಂಭೀರವಾದ ಗಾಯಯಿಂದಾಗಿ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗೂ 36 ರಿಂದ 48 ಗಂಟೆಗಳ ಮೊದಲು ಅವರು ಮೃತಪಟ್ಟಿದ್ದಾರೆ. ಪೊಲೀಸರು ಕಲ್ಯಾಣ ಚಂದ್ರ ಮೊಬೈಲ್ ಕರೆಗಳ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications