ಎಲೂರಿನಲ್ಲಿ ವಿಚಿತ್ರ ಕಾಯಿಲೆ; ಸಿಎಂ ಜಗನ್ ಭೇಟಿ
ಅಮರಾವತಿ, ಡಿಸೆಂಬರ್ 07: ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಎಲೂರು ನಗರದಲ್ಲಿ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. ಇದುವರೆಗೂ 340 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರ್ಛೆರೋಗ ಹೋಲುವಂತಹ ಸಮಸ್ಯೆ ಜನರಲ್ಲಿ ಆತಂಕ ಉಂಟು ಮಾಡಿದೆ.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೋಮವಾರ ವಿಜಯವಾಡ ಆಸ್ಪತ್ರೆಗೆ ಭೇಟಿ ನೀಡಿದರು. ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ಮಹಿಳೆಯರು, ಮಕ್ಕಳು ಸೇರಿದಂತೆ 300ಕ್ಕೂ ಅಧಿಕ ಜನರಿಗೆ ನಿಗೂಢ ಕಾಯಿಲೆ ಕಾಣಿಸಿಕೊಂಡಿದೆ.
ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಆಂಧ್ರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರವಾಣಿ ಕರೆ ಮಾಡಿದ್ದಾರೆ. ಎಲೂರಿನ ಪರಿಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ಅಗತ್ಯ ಸಹಾಯವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಭರವಸೆ ಕೊಟ್ಟಿದ್ದಾರೆ.
ಇದುವರೆಗೂ 340 ಜನರಲ್ಲಿ ವಿಚಿತ್ರ ರೋಗ ಕಾಣಿಸಿಕೊಂಡಿದೆ. 157 ಜನರು ಇನ್ನೂ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ವಿಜಯವಾಡ ಸರ್ಕಾರಿ ಆಸ್ಪತ್ರೆಯಲ್ಲಿಯೇ 150 ರೋಗಿಗಳು ದಾಖಲಾಗಿದ್ದಾರೆ.

ಶನಿವಾರದಿಂದ ಕಾಣಿಸಿಕೊಂಡ ರೋಗ
ಪಶ್ಚಿಮ ಗೋದಾವರಿ ಜಿಲ್ಲೆಯ ಎಲೂರು ನಗರದಲ್ಲಿ ಶನಿವಾರ ಈ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. ಜನರಲ್ಲಿ ಮೈ-ಕೈ ನೋವು, ತಲೆ ನೋವು ಕಾಣಿಸಿಕೊಳ್ಳುತ್ತಿದ್ದು, ಬಳಿಕ ಅವರು ಮೂರ್ಛೆ ಹೋಗುತ್ತಾರೆ. 10-15 ನಿಮಿಷದಲ್ಲಿ ಅವರು ಸಾಮಾನ್ಯ ಸ್ಥಿತಿಗೆ ಮರಳುತ್ತಿದ್ದಾರೆ. ಈ ವಿಚಿತ್ರ ರೋಗದಿಂದ 45 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

340 ಜನರಿಗೆ ವಿಚಿತ್ರ ರೋಗ
ಇದುವರೆಗೂ 340 ಜನರಿಗೆ ಈ ವಿಚಿತ್ರ ರೋಗ ಕಾಣಿಸಿಕೊಂಡಿದೆ. 157 ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿದರು.

ರೋಗಕ್ಕೆ ವಯೋಮಿತಿಯೇ ಇಲ್ಲ
ಈ ರೋಗಕ್ಕೆ ವಯೋಮಿತಿಯೇ ಇಲ್ಲ ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲರಿಗೂ ರೋಗದ ಲಕ್ಷಣ ಕಾಣಿಸಿಕೊಂಡಿದೆ. ಆದರೆ, ಇದು ಒಬ್ಬರಿಂದ ಒಬ್ಬರಿಗೆ ಹರಡುತ್ತಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮಿನರಲ್ ವಾಟರ್ ಕುಡಿದವರು ಇದ್ದಾರೆ
ಎಲೂರು ನಗರ ಸಭೆಯ ವ್ಯಾಪ್ತಿಯಲ್ಲಿ ನೀರು ಕುಡಿದವರಿಗೆ ಮಾತ್ರ ರೋಗದ ಲಕ್ಷಣವಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ನಗರ ಸಭೆ ವ್ಯಾಪ್ತಿಯಿಂದ ಹೊರಗಿರುವವರಿಗೂ ರೋಗ ಹಬ್ಬಿದೆ. ಪ್ರತಿದಿನ ಮಿನರಲ್ ವಾಟರ್ ಕುಡಿಯುತ್ತಿದ್ದವರಿಗೂ ರೋಗದ ಲಕ್ಷಣ ಕಾಣಿಸಿಕೊಂಡಿದೆ.
-
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications