ಮಗನ ಪ್ರಮಾಣವಚನದ ಸುದಿನದಂದು ವೈರಲ್ ಆದ ದಿವಂಗತ ತಂದೆಯ ವಿಡಿಯೋ
ಅಮರಾವತಿ, ಮೇ 30: ಆಂಧ್ರಪ್ರದೇಶದ ರಾಜಕೀಯದ ಮಟ್ಟಿಗೆ ಈ ದಿನ ಎಂದೂ ಮರೆಯಲಾಗದ ದಿನ. ರಾಜ್ಯ ಇಬ್ಭಾಗವಾದ ನಂತರ ಎರಡನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ದನಿಯಲ್ಲಿ ಸಂತಸ, ಸಾರ್ಥಕತೆ, ತಂದೆಯ ನೆನಪು... ಮರೆಯಲ್ಲಿ ಒಂದಷ್ಟು ಪ್ರತೀಕಾರ ತೀರಿಸಿಕೊಂಡ ನಿರಾಳತೆಯ ಭಾವ!
ಜಗನ್ ಬದುಕಿನ ಈ ಅದ್ಭುತ ದಿನದಂದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಅದು ಮಗನನ್ನು ರಾಜಕೀಯಕ್ಕೆ ಪರಿಚಯಿಸುತ್ತಿರುವ ದಿ.ವೈ ಎಸ್ ರಾಜಶೇಖರ ರೆಡ್ಡಿ ಅವರ ವಿಡಿಯೋ.
ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ವೈ ಎಸ್ ರಾಜಶೇಖರ್ ರೆಡ್ಡಿ ಅವರು 2009 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ದುರ್ಮರಣಕ್ಕೀದಾದರು. ಅದಾದ ನಂತರ ರೆಡ್ಡಿ ಕುಟುಂಬಕ್ಕೇ ಆಂಧ್ರಪ್ರದೇಶದ ಚುಕ್ಕಾಣಿಯನ್ನು ನೀಡದೆ ರೋಸಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ರೆಡ್ಡು ಅವರ ಮರಣದ ನಂತರ ಜಗನ್ ಅವರ ಕುಟುಂಬಸ್ಥರನ್ನೂ ಕಾಂಗ್ರೆಸ್ ಅವಮಾನಕರವಾಗಿ ನಡೆಸಿಕೊಂದಿತ್ತು ಎಂಬ ಸುದ್ದಿ ಇಂದಿಗೂ ಛಾಲ್ತಿಯಲ್ಲಿದೆ.
#YSR introducing his son @ysjagan to people of Andhra Pradesh. #YSJagan #YSRForever #YSRLivesForever #YSRCP pic.twitter.com/ONw1vff26s
— Dr. Y S Rajasekhara Reddy (@YSRLivesForever) May 22, 2019
ಅದನ್ನೇ ಪ್ರತೀಕಾರ ಎಂಬಂತೆ ತೆಗೆದುಕೊಂಡು ವೈಎಸ್ ಆರ್ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ ಜಗನ್ ರೆಡ್ಡಿ ಇದೀಗ ಆಂಧ್ರ ಪ್ರದೇಶದ ಚುಕ್ಕಾಣಿ ಹಿಡಿದಿದ್ದಾರೆ. ಆದರೆ ಅವರನ್ನು ರಾಜಕೀಯಕ್ಕೆ ಉತ್ಸಾಹದಿಂದ ಪರಿಚಯಿಸಿದ್ದ ಅವರ ತಂದೆ ರಾಜಶೇಖರ್ ರೆಡ್ಡಿ ಅವರು ಇವನ್ನೆಲ್ಲ ನೋಡುವುದಕ್ಕೆ ಬದುಕಿಲ್ಲ!

ಆಂಧ್ರಪ್ರದೇಶದ ಒಟ್ಟು 175 ವಿಧಾನಸಭಾ ಕ್ಷೇತ್ರಗಳಲ್ಲಿ 151 ವೈಎಸ್ ಆರ್ ಕಾಂಗ್ರೆಸ್, 22 ಟಿಡಿಪಿ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ 22 ವೈಎಸ್ ಆರ್ ಕಾಂಗ್ರೆಸ್ ಮತ್ತು ಕೇವಲ 2 ಕ್ಷೇತ್ರಗಳಲ್ಲಿ ಟಿಡಿಪಿ ಜಯಗಳಿಸಿತ್ತು. ಇಲ್ಲಿ ಏಪ್ರಿಲ್ 11 ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಮೇ 23 ರಂದು ಫಲಿತಾಂಶ ಹೊರಬಿದ್ದಿತ್ತು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications