ವಿಶಾಖಪಟ್ಟಣಂ ಅನಿಲ ದುರಂತದ ಸಂತ್ರಸ್ತರಿಗಾಗಿ ಸಹಾಯವಾಣಿ
ವೈಜಾಗ್, ಮೇ 7: ಕೊರೊನಾವೈರಸ್ ಸೋಂಕಿನ ಭೀತಿಯಲ್ಲಿರುವಾಗಲೇ ವಿಶಾಖಪಟ್ಟಣಂ ಹೊರವಲಯದ ಆರ್ ಆರ್ ವೆಂಕಟಾಪುರಂ ಬಳಿಯ ಎಲ್ ಜಿ ಪಾಲಿಮರ್ಸ್ ಕಂಪನಿಯಿಂದ ಮೇ 7ರ ಮುಂಜಾನೆ ಸೋರಿಕೆಯಾದ ವಿಷಾನಿಲ ಹತ್ತಾರು ಮಂದಿ ಬಲಿ ಪಡೆದುಕೊಂಡಿರುವ ದುರ್ಘಟನೆ ನಡೆದಿದೆ.
ದಕ್ಷಿಣ ಕೊರಿಯಾದ ಈ ಎಂಎನ್ಸಿ ಕಂಪೆನಿಯ ಕಾರ್ಖಾನೆಯಲ್ಲಿ ಮಹಾ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಇದುವರೆಗೆ 11 ಜನ ಮೃತಪಟ್ಟಿದ್ದು, 800 ಕ್ಕೂ ಹೆಚ್ಚು ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. 5000 ಜನಕ್ಕೆ ನೇರವಾಗಿ ವಿಷಾನಿಲ ತಟ್ಟಿದೆ. 20ಕ್ಕೂ ಅಧಿಕ ಹಳ್ಳಿಗಳಿಗೆ ವಿಷ ಗಾಳಿ ಹಬ್ಬಿದೆ. ಸುತ್ತಮುತ್ತಲ ಪ್ರದೇಶದ ಕೆರೆ, ತೆರೆದ ನೀರಿನ ಸಂಗ್ರಹ ಬಳಸದಂತೆ ಎಚ್ಚರಿಕೆ ನೀಡಲಾಗಿದೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಹೆಲ್ಪ್ ಡೆಸ್ಕ್ ಸ್ಥಾಪನೆಗೆ ಸೂಚಿಸಿದರು, ಅದರಂತೆ ಕೈಗಾರಿಕಾ ಕೇಂದ್ರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಸಚಿವ ಮೆಕಪಟಿ ಗೌತಮ್ ರೆಡ್ಡಿ ಹೇಳಿದ್ದಾರೆ.

ಸಹಾಯವಾಣಿ ಸಂಖ್ಯೆ
* ಎಸ್ ಪ್ರಸಾದ್ ರಾವ್ ಡಿಡಿ-7997952301, 8919239341
* ಆರ್ ಬ್ರಹ್ಮ ಐಪಿಒ- 9701197069
ವಿಷಾನಿಲದ ಹೆಸರು Styrene. ಈ ಅನಿಲದ ವೈಜ್ಞಾನಿಕ ಹೆಸರು ethenylbenzene, vinylbenzene, and phenylethene (C6H5CH=CH2). ಪ್ಲಾಸ್ಟಿಕ್ ಮತ್ತು ರಬ್ಬರ್ ತಯಾರಿಸಲು ಸ್ಟಿರಿನ್ ಅನಿಲವನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ವಿದ್ಯುತ್ ವೈರಿಂಗ್ ವಸ್ತುಗಳು ತಯಾರಿಕೆ ಬಳಸುತ್ತಾರೆ. ಫೈಬರ್ಗ್ಲಾಸ್, ಪ್ಲಾಸ್ಟಿಕ್ ಕೊಳವೆಗಳು, ವಾಹನ ಭಾಗಗಳು, ಆಟಿಕೆಗಳು, ಪ್ಲಾಸ್ಟಿಕ್ ಕುಡಿಯುವ ನೀರಿನ ಕಪ್ಗಳ ತಯಾರಿಕೆಗೆ ಸ್ಟೈರಿನ್ ಬಳಸುತ್ತಾರೆ.
ಇದು ಗಾಳಿಯಲ್ಲಿ ವೇಗವಾಗಿ ಹರಡುತ್ತದೆ. ಜೀವಿಗಳಿಗೆ ಅತ್ಯಂತ ಮಾರಕವಾದ ಅನಿಲವಾಗಿದೆ. ಇದರ ಸಂಪರ್ಕಕ್ಕೆ ಬಂದ ಮನುಷ್ಯ, ಪ್ರಾಣಿ, ಪಕ್ಷಿಗಳು, ಹಲ್ಲಿ, ಹುತ್ತದಲ್ಲಿರುವ ಹಾವುಗಳು ಸಾಯುತ್ತವೆ. ಮನುಷ್ಯನ ಮೇಲೆ ಅತ್ಯಂತ ಕೆಟ್ಟ ಪರಿಣಾಮವನ್ನೇ ಬೀರುತ್ತದೆ. ಜಠರ, ಶಾಸಕೋಶದ ತೊಂದರೆ, ಉಸಿರಾಟದ ತೊಂದರೆ ಪರಿಣಾಮ ಬೀರುತ್ತೆ. ಕೇಂದ್ರ ನರಮಂಡಲದ ಮೇಲೆ ಅತ್ಯಂತ ವೇಗವಾಗಿ ಸ್ಟೈರೀನ್ ಅನಿಲ ಪರಿಣಾಮ ಬೀರುತ್ತದೆ. ಸದ್ಯ ಘಟನೆ ನಡೆದ ಸ್ಥಳದಿಂದ 1000 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಕಳಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಕಮಲ್ ಕಿಶೋರ್ ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications