ವಿಶಾಖಪಟ್ಟಣ ಅನಿಲ ಸೋರಿ: 178 ಮಹಿಳಾ ಕಾರ್ಮಿಕರು ಅಸ್ವಸ್ಥ
ವಿಶಾಖಪಟ್ಟಣ, ಜೂನ್ 3: ಆಂಧ್ರ ಪ್ರದೇಶದ ವಿಶಾಖಪಟ್ಟಣದ ಕೆಮಿಕಲ್ ಘಟಕದಲ್ಲಿ ಅನಿಲ ಸೋರಿಕೆಯಾಗಿ ಕನಿಷ್ಠ 178 ಮಂದಿ ಮಹಿಳಾ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ ಎಂದು ಆಂಧ್ರ ಪ್ರದೇಶದ ಕೈಗಾರಿಗಾ ಸಚಿವ ಗುಡಿವದಾ ಅಮರ್ ನಾಥ್ ಶುಕ್ರವಾರ ತಿಳಿಸಿದ್ದಾರೆ.
ವಿಶಾಖಪಟ್ಟಣದ ಅಚ್ಚುತಪುರಂನಲ್ಲಿರುವ ವೆಟರ್ನರಿ ಔಷಧದ ಕಂಪನಿಯಾಗಿರುವ ಪೋರಸ್ ಲ್ಯಾಬೋರೇಟರೀಸ್ ಪ್ರೈವೇಟ್ ಲಿಮಿಟೆಡ್ ನ ಕೆಮಿಕಲ್ ಘಟಕದಲ್ಲಿ ಈ ಘಟನೆ ಸಂಭವಿಸಿದೆ.
ಪೋರಸ್ ಲ್ಯಾಬೋರೇಟರೀಸ್ ಘಟಕದಲ್ಲಿ ಬಹುತೇಕ ಮಹಿಳಾ ಕಾರ್ಮಿಕರೇ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಕಂಪನಿಯ ಕೆಮಿಕಲ್ ಘಟಕದಿಂದ ಅನಿಲ ಸೋರಿಕೆಯಾಗಿದೆ. ಇದರ ಪರಿಣಾಮ ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕರಿಗೆ ಕಣ್ಣು ಉರಿ, ವಾಕರಿಕೆ ಮತ್ತು ವಾಂತಿಯ ಲಕ್ಷಣಗಳು ಕಂಡುಬಂದಿದೆ.

ಮಾರಣಾಂತಿಕ ಅನಿಲ ಅಲ್ಲ: ಘಟನೆ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ(ಪಿಸಿಬಿ) ಮತ್ತು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸೋರಿಕೆಯ ಮೂಲವನ್ನು ಗುರುತಿಸಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸೋರಿಕೆಯಾಗಿರುವ ಅನಿಲವು ಮಾರಣಾಂತಿಕವಲ್ಲ ಎಂಬುದು ತಿಳಿದುಬಂದಿದೆ. ಘಟಕದಲ್ಲಿ ಹಾನಿಗೊಳಗಾದ ಸ್ಕ್ರಬ್ಬರ್ ಗಳು ಅನಿಲ ಸೋರಿಕೆಗೆ ಕಾರಣ ಎಂದು ತಿಳಿದುಬಂದಿದೆ.
ಕೆಲವು ಕಾರ್ಮಿಕರು ಆಸ್ಪತ್ರೆಗೆ ದಾಖಲು: "ಘಟನೆಯಲ್ಲಿ ಕೆಲವು ಮಹಿಳಾ ಕಾರ್ಮಿಕರು ಪ್ರಜ್ಞಾಹೀನರಾದರು. ಅವರನ್ನು ಚಿಕಿತ್ಸೆಗಾಗಿ ಅನಕಾಪಲ್ಲಿ ಮತ್ತು ವಿಶಾಖಪಟ್ಟಣದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ,'' ಎಂದು ಸಚಿವ ಗುಡಿವದಾ ಅಮರನಾಥ್ ತಿಳಿಸಿದ್ದಾರೆ.

"ಹೆಚ್ಚಿನ ಕಾರ್ಮಿಕರು ಕಣ್ಣು ಉರಿ ಮತ್ತು ವಾಕರಿಕೆ ಅನುಭವಿಸಿದರು. ಪ್ರಥಮ ಚಿಕಿತ್ಸೆ ನೀಡಿದ ನಂತರ ಅನೇಕ ಕಾರ್ಮಿಕರು ಚೇತರಿಸಿಕೊಂಡಿದ್ದಾರೆ. ಕೆಲವು ಕಾರ್ಮಿಕರನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಸದ್ಯ ಯಾರ ಪ್ರಾಣಕ್ಕೂ ಅಪಾಯವಿಲ್ಲ,'' ಎಂದು ಅನಕಾಪಲ್ಲಿ ಜಿಲ್ಲಾ ವೈದ್ಯಾಧಿಕಾರಿ ಹೇಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
"ಘಟನೆಯ ಕುರಿತು ತನಿಖೆ ನಡೆಯುತ್ತಿದೆ. ಕಾರ್ಮಿಕರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಸದ್ಯ ಪೋರಸ್ ಲ್ಯಾಬೋರೇಟರೀಸ್ ಘಟಕವನ್ನು ಮುಚ್ಚಲಾಗಿದೆ,'' ಎಂದು ವಿಶಾಖಪಟ್ಟಣ ಎಸ್ಪಿ ಗೌತಮಿ ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications