ವೈಜಾಗ್ ಅನಿಲ ಸೋರಿಕೆ: ಎಲ್ ಜಿ ಪಾಲಿಮರ್ ಸಿಇಒ ಬಂಧನ
ವಿಶಾಖಪಟ್ಟಣಂ, ಜುಲೈ 8: ವಿಶಾಖಪಟ್ಟಣಂನ ಎಲ್ ಜಿ ಪಾಲಿಮಾರ್ ರಾಸಾಯನಿಕ ಸ್ಥಾವರದಿಂದ ವಿಷಾನಿಲ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಸಿಇಒ ಹಾಗೂ ಇನ್ನಿತರ ಉನ್ನತ ಅಧಿಕಾರಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಮೇ 7ರಂದು ಎಲ್ ಜಿ ಪಾಲಿಮರ್ ಸಂಸ್ಥೆಯಿಂದ ಅನಿಲ ಸೋರಿಕೆ ಉಂಟಾಗಿ ಹನ್ನೆರಡು ಮಂದಿ, 34 ಜಾನುವಾರುಗಳು ಮೃತಪಟ್ಟು, 5000ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು. ವೈಜಾಗ್ ನ ಗೋಪಾಲಪಟ್ಟಣಂನಲ್ಲಿರುವ ಈ ಘಟಕವನ್ನು ಬಂದ್ ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ ಜಿ ಪಾಲಿಮಾರ್ಸ್ ನ ಇಬ್ಬರು ಸಿಇಒಗಳಾದ ದಕ್ಷಿಣ ಕೊರಿಯಾದ ಸಂಕೀ ಜಿಯಾಂಗ್ ಎಂಡಿ, ಸಿಇಒ ಹಾಗೂ ತಾಂತ್ರಿಕ ನಿರ್ದೇಶಕ ಡಿಎಸ್ ಕಿಮ್ ಸೇರಿದಂತೆ 12 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಹೆಚ್ಚುವರಿ ನಿರ್ದೇಶಕ ಪಿಚ್ಚುಕಾ ಪಿಸಿ ಮೋಹನ್ ರಾವ್, ನೈಟ್ ಡ್ಯೂಟಿ ಅಧಿಕಾರಿ, ಇಂಜಿನಿಯರ್ಸ್, ಸೆಫ್ಟಿ ಅಧಿಕಾರಿ ಸೇರಿದ್ದಾರೆ.

ಈ ಎಲ್ಲಾ ಅಧಿಕಾರಿಗಳು ಈ ಅನಿಲ ಸೋರಿಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣಾರಾಗಿದ್ದಾರೆ. ಎಂ6 ಸ್ಟೈರಿನ್ ಶೇಖರಣಾ ಟ್ಯಾಂಕ್ ನಿಂದ ಅನಿಲ ಸೋರಿಕೆಯಾಗಲು ಈ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ, ಅನಿಲ ಸೋರಿಕೆಯಿಂದ ಸಾವು ಸಂಭವಿಸುವ ಬಗ್ಗೆ ಅಧಿಕಾರಿಗಳಿಗೆ ತಿಳಿದಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸುವ ಸಾಧ್ಯತೆಯಿದೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 304 II, 278, 284 ಹಾಕಲಾಗಿದೆ. ಆಂಧ್ರಪ್ರದೇಶದ ವಿಶೇಷ ಪ್ರಧಾನ ಕಾರ್ಯದರ್ಶಿ ನೀರಭ್ ಕುಮಾರ್ ಪ್ರಸಾದ್ ಅವರು 4000 ಪುಟಗಳ ವರದಿಯನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಗೆ ಸಲ್ಲಿಸಿದ್ದರು. ಈ ವರದಿಯನ್ನು ಕೂಡಾ ತನಿಖೆಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications