ವೈಜಾಗ್ ಅನಿಲ ಸೋರಿಕೆ: ಎಲ್ ಜಿ ಪಾಲಿಮರ್ ಸಿಇಒ ಬಂಧನ
ವಿಶಾಖಪಟ್ಟಣಂ, ಜುಲೈ 8: ವಿಶಾಖಪಟ್ಟಣಂನ ಎಲ್ ಜಿ ಪಾಲಿಮಾರ್ ರಾಸಾಯನಿಕ ಸ್ಥಾವರದಿಂದ ವಿಷಾನಿಲ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಸಿಇಒ ಹಾಗೂ ಇನ್ನಿತರ ಉನ್ನತ ಅಧಿಕಾರಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಮೇ 7ರಂದು ಎಲ್ ಜಿ ಪಾಲಿಮರ್ ಸಂಸ್ಥೆಯಿಂದ ಅನಿಲ ಸೋರಿಕೆ ಉಂಟಾಗಿ ಹನ್ನೆರಡು ಮಂದಿ, 34 ಜಾನುವಾರುಗಳು ಮೃತಪಟ್ಟು, 5000ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು. ವೈಜಾಗ್ ನ ಗೋಪಾಲಪಟ್ಟಣಂನಲ್ಲಿರುವ ಈ ಘಟಕವನ್ನು ಬಂದ್ ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ ಜಿ ಪಾಲಿಮಾರ್ಸ್ ನ ಇಬ್ಬರು ಸಿಇಒಗಳಾದ ದಕ್ಷಿಣ ಕೊರಿಯಾದ ಸಂಕೀ ಜಿಯಾಂಗ್ ಎಂಡಿ, ಸಿಇಒ ಹಾಗೂ ತಾಂತ್ರಿಕ ನಿರ್ದೇಶಕ ಡಿಎಸ್ ಕಿಮ್ ಸೇರಿದಂತೆ 12 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಹೆಚ್ಚುವರಿ ನಿರ್ದೇಶಕ ಪಿಚ್ಚುಕಾ ಪಿಸಿ ಮೋಹನ್ ರಾವ್, ನೈಟ್ ಡ್ಯೂಟಿ ಅಧಿಕಾರಿ, ಇಂಜಿನಿಯರ್ಸ್, ಸೆಫ್ಟಿ ಅಧಿಕಾರಿ ಸೇರಿದ್ದಾರೆ.

ಈ ಎಲ್ಲಾ ಅಧಿಕಾರಿಗಳು ಈ ಅನಿಲ ಸೋರಿಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣಾರಾಗಿದ್ದಾರೆ. ಎಂ6 ಸ್ಟೈರಿನ್ ಶೇಖರಣಾ ಟ್ಯಾಂಕ್ ನಿಂದ ಅನಿಲ ಸೋರಿಕೆಯಾಗಲು ಈ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ, ಅನಿಲ ಸೋರಿಕೆಯಿಂದ ಸಾವು ಸಂಭವಿಸುವ ಬಗ್ಗೆ ಅಧಿಕಾರಿಗಳಿಗೆ ತಿಳಿದಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸುವ ಸಾಧ್ಯತೆಯಿದೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 304 II, 278, 284 ಹಾಕಲಾಗಿದೆ. ಆಂಧ್ರಪ್ರದೇಶದ ವಿಶೇಷ ಪ್ರಧಾನ ಕಾರ್ಯದರ್ಶಿ ನೀರಭ್ ಕುಮಾರ್ ಪ್ರಸಾದ್ ಅವರು 4000 ಪುಟಗಳ ವರದಿಯನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಗೆ ಸಲ್ಲಿಸಿದ್ದರು. ಈ ವರದಿಯನ್ನು ಕೂಡಾ ತನಿಖೆಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications