ಶಾಸಕಿ ರೋಜಾಗೆ ಸಿಕ್ತು ಪವರ್, ಕೈಗಾರಿಕಾ ನಿಗಮಕ್ಕೆ ಮುಖ್ಯಸ್ಥೆ
ಅಮರಾವತಿ, ಜೂನ್ 13: ವೈಎಸ್ಸಾರ್ ಕಾಂಗ್ರೆಸ್ ಪಕ್ಷದ ಫೈರ್ ಬ್ರ್ಯಾಂಡ್ ನಾಯಕಿ, ನಗರಿ ವಿಧಾನಸಭಾ ಕ್ಷೇತ್ರದ ಶಾಸಕಿ ರೋಜಾ ಅವರಿಗೆ ಕೊನೆಗೂ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಭರ್ಜರಿ ಸ್ಥಾನಮಾನ ಕೊಟ್ಟಿದ್ದಾರೆ.
ಮುಖ್ಯಮಂತ್ರಿ ಜಗನ್ ರೆಡ್ಡಿ ಅವರ ಸಂಪುಟ ವಿಸ್ತರಣೆ ಕಾರ್ಯಕ್ಕೆ ಗೈರು ಹಾಜರಾಗಿದ್ದ ರೋಜಾ ಅವರು ಮಂಗಳವಾರದಂದು ಪ್ರತ್ಯಕ್ಷವಾಗಿದ್ದರು. ವಿಜಯವಾಡದಲ್ಲಿ ಜಗನ್ ಅವರನ್ನು ಭೇಟಿ ಮಾಡಿದ ಬಳಿಕ ಸಂತಸದಿಂದ ಸುದ್ದಿಗಾರರ ಜೊತೆ ಮಾತನಾಡಿದ್ದರು.
ರೋಜಾ ಅವರಿಗೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ(ಎಪಿ ಎಸ್ ಆರ್ ಟಿಸಿ) ದ ಅಧ್ಯಕ್ಷೆ ಪಟ್ಟ ಸಿಗಲಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ರೋಜಾ ಮಾತ್ರ ಕಳೆದ ಕೆಲ ದಿನಗಳಿಂದ ಪಕ್ಷದ ಹಿರಿಯ ನಾಯಕರು ಸೇರಿದಂತೆ ಸಿಎಂ ಜಗನ್ ಫೋನ್ ಕೂಡಾ ಎತ್ತಿರಲಿಲ್ಲ.

ರೋಜಾ ಅವರು ಜಗನ್ ಜೊತೆಗೆ ಏನು ಮಾತುಕತೆ ನಡೆಸಿದರು, ರೋಜಾಗೆ ಸಚಿವ ಸ್ಥಾನದ ಭರವಸೆ ಸಿಕ್ಕಿದೆಯೇ? ಅಥವಾ ನಿಗಮ ಮಂಡಳಿಯ ಸ್ಥಾನ ನೀಡಲಾಗುತ್ತಿದೆಯೇ? ಎಂಬುದರ ಬಗ್ಗೆ ರೋಜಾ ಏನು ಹೇಳಿಲ್ಲ.
ಈಗ ಲಭ್ಯ ಮಾಹಿತಿಯಂತೆ ಜಗನ್ ಅವರು ರೋಜಾ ಅವರನ್ನು ಆಂಧ್ರಪ್ರದೇಶ ಕೈಗಾರಿಕಾ ಮೂಲ ಸೌಕರ್ಯ ನಿಗಮ(APIIC) ಚೇರ್ಮನ್ ಆಗಿ ನೇಮಿಸಿದ್ದಾರೆ. ಈ ಕುರಿತಂತೆ ಅಧಿವೇಶನ ಸಂದರ್ಭದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆಯಿದೆ.
ಈ ಹುದ್ದೆ ಮಹತ್ವವೇನು? : ಆಂಧ್ರಪ್ರದೇಶದಲ್ಲಿ ಯಾವುದೇ ಮಟ್ಟದ ಕೈಗಾರಿಕೆ ಹೊಸದಾಗಿ ಸ್ಥಾಪಿಸಬೇಕಾದರೆ ಅಥವಾ ಹಳೆ ಕಂಪನಿ ಲೈಸನ್ಸ್ ನವೀಕರಿಸಬೇಕಾದರೆ ಎಪಿಐಐಸಿ ಚೇರ್ಮನ್ ಅನುಮತಿ ಅಗತ್ಯ. ಲೈಸನ್ಸ್ ಮಾತ್ರವಲ್ಲದೆ, ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ಹೊಣೆ ಕೂಡಾ ಈ ನಿಗಮದಡಿಯಲ್ಲಿ ಬರಲಿದೆ. ಜಮೀನು, ವಿದ್ಯುತ್, ಜಲ ಪೂರೈಕೆ ಹೀಗೆ ವಿವಿಧ ಇಲಾಖೆ ಜತೆ ಎಪಿಐಐಸಿ ಕಾರ್ಯ ನಿರ್ವಹಿಸಲಿದೆ.
ಆಂಧ್ರಪ್ರದೇಶ ಕೈಗಾರಿಕಾ ಮೂಲ ಸೌಕರ್ಯ ನಿಗಮ ಚೇರ್ಮನ್ ಹುದ್ದೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನವನ್ನು ಹೊಂದಿದ್ದು, ಈ ಹುದ್ದೆಯಿಂದ ರೋಜಾ ಸಂತುಷ್ಟರಾಗುತ್ತಾರೆ ಎಂದು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ, ರೋಜಾ ಈ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications