ವಿಮಾನ ನಿಲ್ದಾಣದಲ್ಲಿ ವೈಎಸ್ಸಾರ್ ಜಗನ್ ಮೋಹನ್ ರೆಡ್ಡಿಗೆ ಚಾಕು ಇರಿತ
Recommended Video

ವೈಎಸ್ಸಾರ್ ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಹಲ್ಲೆ ಯತ್ನ ನಡೆದಿದೆ. ವೈಜಾಗ್ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಜಗನ್ ಅವರ ಬಳಿ ಬಂದು ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಚಾಕುವಿನಿಂದ ಇರಿದಿದ್ದಾನೆ.
ಮೊದಲ ಬಾರಿಗೆ ಇರಿದ ತಕ್ಷಣವೇ ಎಚ್ಚೆತ್ತುಕೊಂಡ ಜಗನ್ ಅವರು ಆತನಿಂದ ತಪ್ಪಿಸಿಕೊಂಡಿದ್ದಾರೆ. ಅಲ್ಲಿದ್ದ ಭದ್ರತಾ ಸಿಬ್ಬಂದಿಗಳು ಕೂಡಲೇ ಆ ವ್ಯಕ್ತಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ವಿಶಾಖಪಟ್ಟಣಂನ ವಿಮಾನ ನಿಲ್ದಾಣದ ಸಿಬ್ಬಂದಿ ಎಂದು ಹೇಳಿದ, ನಾನು ನಿಮ್ಮ ಅಭಿಮಾನಿ ಒಂದು ಸೆಲ್ಫಿ ತೆಗೆದುಕೊಳ್ಳುತ್ತೇನೆ ಎಂದು ಕೇಳಿದ ಹೀಗಾಗಿ, ನಾನು ಅವನ ಮನವಿಗೆ ಸ್ಪಂದಿಸಿದೆ. ನನಗೆ ತೀವ್ರಗಾಯವಾಗಿಲ್ಲ, ದೇವರ ದಯೆ, ಅಭಿಮಾನಿಗಳು ಆತಂಕಗೊಳ್ಳಬಾರದು ಎಂದು ಜಗನ್ ಮೋಹನ್ ರೆಡ್ಡಿ ಅವರು ಪ್ರತಿಕ್ರಿಯಿಸಿದ್ದಾರೆ.

ಜಗನ್ ಮೇಲೆ ಕೊಲೆ ಯತ್ನ ಎಂದ ಪಕ್ಷ
ಇದು ಪೂರ್ವನಿಯೋಜಿತ ಕೃತ್ಯ, ಜಗನ್ ಮೋಹನ್ ರೆಡ್ಡಿ ಅವರನ್ನು ಗಾಯಗೊಳಿಸುವುದು ಆತನ ಉದ್ದೇಶವಾಗಿರಲಿಲ್ಲ. ಆ ಚಾಕು ನೋಡಿ ಹೇಗಿದೆ. ಸಾಮಾನ್ಯ ದಿನ ಬಳಕೆ ಚಾಕುವಂತೂ ಅಲ್ಲ, ವಿಮಾನ ನಿಲ್ದಾಣದಲ್ಲೇ ಇಂಥ ಕೃತ್ಯ ಜರುಗುತ್ತದೆ ಎಂದರೆ ನಂಬಲಿಕೆ ಸಾಧ್ಯವಿಲ್ಲ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈ ಬಗ್ಗೆ ಉತ್ತರಿಸಬೇಕಿದೆ. ವಿಪಕ್ಷ ನಾಯಕರಿಗೆ ಭದ್ರತೆ ನೀಡಲು ಸಾಧ್ಯವಾಗದ ಸರ್ಕಾರ ಇದ್ದು ಪ್ರಯೋಜನವೇನು ಎಂದು ಪಕ್ಷದ ನಾಯಕಿ, ನಟಿ ರೋಜಾ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ದಾಳಿಕೋರನ ಗುರುತು ಪತ್ತೆ ಹಚ್ಚೆ
ವೈಎಸ್ಸಾರ್ ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಹಲ್ಲೆ ಯತ್ನ ನಡೆಸಿದ ವ್ಯಕ್ತಿಯನ್ನು ಬಂಧಿಸಿರುವ ವಿಮಾನ ನಿಲ್ದಾಣದ ಪೊಲೀಸ್ ಸಿಬ್ಬಂದಿಗಳು ಆತನ ವಿಚಾರಣೆ ಆರಂಭಿಸಿದ್ದಾರೆ. ವಿಮಾನ ನಿಲ್ದಾಣದ ರೆಸ್ಟೋರೆಂಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಯ್ಟರ್, ಆತನ ಹೆಸರು ಶ್ರೀನಿವಾಸ್ ಎಂದು ತಿಳಿದು ಬಂದಿದೆ.

ಹೈದರಾಬಾದಿಗೆ ತೆರಳಬೇಕಿದ್ದ ಜಗನ್
260ಕ್ಕೂ ಹೆಚ್ಚು ದಿನಗಳ ಕಾಲ ಚುನಾವಣಾ ಪಾದಯಾತ್ರೆ, ಜನಸ್ಪಂದನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಜಗನ್ ಅವರು ವಿಶಾಖಪಟ್ಟಣಂನಿಂದ ಹೈದರಾಬಾದಿಗೆ ತೆರಳಲು ಸಿದ್ಧರಾಗಿದ್ದರು. ಆದರೆ, ವಿಮಾನ ಹೊರಡಲು ಇನ್ನು ಸಮಯವಿತ್ತು. ಹೀಗಾಗಿ, ಏರ್ ಪೋರ್ಟ್ ಲಾಂಜ್ ನಲ್ಲಿ ವಿಶ್ರಮಿಸುತ್ತಿದ್ದರು. ಈ ಸಮಯದಲ್ಲಿ ಅಲ್ಲಿಗೆ ಬಂದು ಪರಿಚಯ ಮಾಡಿಕೊಂಡ ಶ್ರೀನಿವಾಸ್, ಸೆಲ್ಫಿ ಕೇಳಿದ್ದಾನೆ. ನಂತರ ಏಕಾಏಕಿ ಹಲ್ಲೆ ಮಾಡಿದ್ದಾನೆ.
ಜಗನ್ ಗೆ ಸೇರಿದ 148 ಕೋಟಿ ರು. ಮೌಲ್ಯದ ಭೂಮಿ ಅಕ್ರಮ ಎಂದ ಇ.ಡಿ.

ಜಗನ್ ಮೇಲೆ ದಾಳಿ ಉದ್ದೇಶವೇನು
ಜಗನ್ ಮೋಹನ್ ರೆಡ್ಡಿ ಮೇಲೆ ದಾಳಿ ಮಾಡಲು ಇಂಥ ಉದ್ದೇಶವೇ ಆಗಬೇಕು ಎಂದೇನಿಲ್ಲ, ಜಾತಿ ಮತ ಪಂಥ, ರಾಜಕೀಯ ದ್ವೇಷ ಹೀಗೆ ಏನಾದರೂ ಕಾರಣ ನೀಡಬಹುದು. ಆದರೆ, ಶ್ರೀನಿವಾಸ್ ಎಂಬ ವ್ಯಕ್ತಿ ಅಂಥ ಚಾಕುವನ್ನು ಏಕೆ ಬಳಸಿದ, ಆತನ ಉದ್ದೇಶವೇನು ಎಂಬುದು ತನಿಖೆ ನಂತರವಷ್ಟೇ ತಿಳಿಯಲಿದೆ. ಈ ನಡುವೆ, ಇದು ಸಾಮಾನ್ಯ ಹಲ್ಲೆಯತ್ನವಲ್ಲ, ಕೊಲೆ ಯತ್ನ ಎಂದು ವೈಎಸ್ಸಾರ್ ಪಕ್ಷ ಆರೋಪಿಸಿದೆ. ಚಾಕುವಿನಲ್ಲಿ ವಿಷಪೂರಿತ ಲೇಪನವಾಗಿರಬಹುದು ಎಂಬ ಸಂಶಯವನ್ನು ವ್ಯಕ್ತಪಡಿಸಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications