ಶಾಸಕಿ ರೋಜಾ ಕಾರಿಗೆ ಮುತ್ತಿಗೆ ಹಾಕಿದ ವೈಎಸ್ಸಾರ್ ಕಾರ್ಯಕರ್ತರು
ಅಮರಾವತಿ, ಜನವರಿ 07: ಆಂಧ್ರಪ್ರದೇಶ ಕೈಗಾರಿಕಾ ಮೂಲ ಸೌಕರ್ಯ ನಿಗಮ(ಎಪಿಐಐಸಿ) ಅಧ್ಯಕ್ಷೆ, ನಟಿ, ಶಾಸಕಿ ಆರ್ ಕೆ ರೋಜಾ ಅವರ ಕಾರಿಗೆ ಸ್ವಪಕ್ಷೀಯರೇ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ತಮ್ಮ ನಗರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಕೆಬಿಆರ್ ಪುರಂನಲ್ಲಿ ತೆರಳುವಾಗ ಈ ಘಟನೆ ನಡೆದಿದೆ.
ಶಾಸಕಿ ರೋಜಾ ಅವರ ಮೇಲೆ ಸ್ವಪಕ್ಷೀಯದವರೇ ಹಲ್ಲೆಗೆ ಯತ್ನ ಎಂದು ಬಿಂಬಿಸಲಾಗಿತ್ತು. ಆದರೆ, ಇದು ಪ್ರತಿಭಟನೆಯ ಒಂದು ಸ್ವರೂಪ, ನ್ಯಾಯಕ್ಕಾಗಿ ಆಗ್ರಹಿಸಿ ಈ ರೀತಿ ಕಾರು ತಡೆದಿದ್ದರು ಎಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಮಾತ್ರ ಫೇಸ್ ಬುಕ್, ಟ್ವಿಟ್ಟರ್ ನಲ್ಲಿ ಹರಿದಾಡುತ್ತಿದೆ.
நகரி தொகுதி எம்.எல்.ஏவான ரோஜாவின் காரை முற்றுகையிட்டு அவரது கட்சியினரே தாக்க முயற்சி. தொகுதிப் பக்கம் ரோஜா தலைகாட்டவில்லை எனக்குற்றச்சாட்டு. சினிமா டூ அரசியல்.. கொஞ்சம் கஷ்டம்தான் போலையே.. #Roja #Attack #Nagari pic.twitter.com/RxnVwLau4w
— Mahalingam Ponnusamy (@mahajournalist) January 6, 2020
ಬಹುಭಾಷಾ ನಟಿ ರೋಜಾ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷದಿಂದ ನಗರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು. ಜಗನ್ ಸಂಪುಟದಲ್ಲಿ ಉನ್ನತ ಸ್ಥಾನದ ಆಕಾಂಕ್ಷಿಯಾಗಿದ್ದ ವೈಎಸ್ಆರ್ ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆರೋಜಾಗೆ ಆಂಧ್ರಪ್ರದೇಶ ರಾಜ್ಯದ ಕೈಗಾರಿಕಾ ಮೂಲ ಸೌಕರ್ಯ ನಿಗಮದ ಅಧ್ಯಕ್ಷೆ ಸ್ಥಾನ ಸಿಕ್ಕಿದೆ. ಆಂಧ್ರಪ್ರದೇಶ ಕೈಗಾರಿಕಾ ಮೂಲ ಸೌಕರ್ಯ ನಿಗಮ ಚೇರ್ಮನ್ ಹುದ್ದೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನವನ್ನು ಹೊಂದಿದ್ದು, ಈ ಹುದ್ದೆಯಿಂದ ರೋಜಾ ಸಂತುಷ್ಟರಾಗುತ್ತಾರೆ ಎಂದು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಚಿತ್ತೂರ್ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಉದ್ಘಾಟನೆಗೆ ತೆರಳಿ ಹಿಂತಿರುಗುವಾಗ, 200 ಬೆಂಬಲಿಗರೊಂದಿಗೆ ರೋಜಾ ಅವರ ಕಾರನ್ನು ತಡೆದು, ದಾಳಿ ಮಾಡಲು ಯತ್ನಿಸಿ, ಪಕ್ಷದ ಕಾರ್ಯಕರ್ತರಿಗೆ ಉತ್ತಮ ಸ್ಥಾನಕ್ಕಾಗಿ ಆಗ್ರಹಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಆದರೆ, ಸ್ವಪಕ್ಷಿಯರಿಂದಲ್ಲೆ ಹಲ್ಲೆ ಯತ್ನ ವಿಚಾರವನ್ನು ರೋಜಾ ನಿರಾಕರಿಸಿದ್ದು, ಇದು ತೆಲುಗು ದೇಶಂ ಪಕ್ಷದ ಕುಮ್ಮಕ್ಕು ಎಂದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 143, 149, 341, 427, 509 ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications