ಜ್ಯೂಸ್ ಟೆಟ್ರಾ ಪ್ಯಾಕ್, ಬಿಸ್ಕೆಟ್ ಪ್ಯಾಕೆಟ್ ನಲ್ಲಿ 20 ಕೋಟಿಯ ಹೆರಾಯಿನ್ ಸಾಗಾಟ
ಪಂಜಾಬ್ ಪೊಲೀಸರು ಬುಧವಾರ ಭರ್ಜರಿ ಬೇಟೆ ಆಡಿದ್ದಾರೆ. ಮಿಜೋರಾಮ್ ನ ಮಹಿಳೆ ಹಾಗೂ ಆಕೆಯ ಸಹಚರ- ಚಾಲಕನಿಂದ 4 ಕೇಜಿ ಹೆರಾಯಿನ್ ಖನ್ನಾ ಜಿಲ್ಲೆಯಲ್ಲಿ ವಶಪಡಿಸಿಕೊಂಡಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅದರ ಮೌಲ್ಯ 20 ಕೋಟಿ ರುಪಾಯಿ ಎನ್ನಲಾಗಿದೆ.
ಖನ್ನಾ ಪೊಲೀಸರು ಅದೇ ನಗರದ, ಚಂಡೀಗಢದಿಂದ 50 ಕಿಲೋಮೀಟರ್ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ವಾಹನ ತಪಾಸಣೆ ಮಾಡುವಾಗ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಿದೆವು ಎಂದು ಹಿರಿಯ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಧ್ರುವ್ ದಹಿಯಾ ತಿಳಿಸಿದ್ದಾರೆ.
ಮಹಿಳೆಯು ಮಿಜೋರಾಂನ ಶಿವಾಂಗಿ ಎಂದು ಗುರುತಿಸಲಾಗಿದೆ. ಇನ್ನು ಕಾರು ಚಾಲಕ ಆನಂದ್ ಕುಮಾರ್ ಪಂಜಾಬ್ ನ ಜಲಂಧರ್ ನವನು ಎನ್ನಲಾಗಿದೆ. ಹೆರಾಯಿನ್ ಅನ್ನು ಜ್ಯೂಸ್ ನ ಟೆಟ್ರಾ ಪ್ಯಾಕ್ ಗಳಲ್ಲಿ ಹಾಗೂ ಬಿಸ್ಕೆಟ್ ಪಾಕೆಟ್ ಗಳಲ್ಲಿ ಅಡಗಿಸಿಡಲಾಗಿತ್ತು. ಅವುಗಳನ್ನು ಗುರುತಿಸದಂತೆ ಮತ್ತೆ ಅದೇ ರೀತಿ ಪ್ಯಾಕ್ ಮಾಡಲಾಗಿತ್ತು.

ಟೊಯೋಟಾ ಇಟಿಯೋಸ್ ಕಾರಿನಲ್ಲಿ ಬಂದ ಇವರಿಬ್ಬರನ್ನು ತಡೆಯಲು ಪೊಲೀಸರು ಯತ್ನಿಸಿದಾಗ ಅಲ್ಲಿಂದ ಪರಾರಿಯಾಗಲು ಪ್ರಯತ್ನ ಮಾಡಿದ್ದಾರೆ. ಆದರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.
ದೆಹಲಿಯಲ್ಲಿ ನೈಜೀರಿಯಾ ಪ್ರಜೆಯೊಬ್ಬ ಶಿವಾಂಗಿಗೆ ಹೆರಾಯಿನ್ ನೀಡಿ, ಪಂಜಾಬ್ ನಲ್ಲಿ ಇಬ್ಬರು ವ್ಯಕ್ತಿಗಳಿಗೆ ತಲುಪಿಸುವಂತೆ ತಿಳಿಸಿದ್ದ ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications